ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ತಾರಾಲಯ ಕಾಮಗಾರಿ ಪ್ರಗತಿ
ಮೈಸೂರು, ನವೆಂಬರ್ 15: ಡಿಜಿಟಲ್ ಡಿಸ್ಪ್ಲೇಗಳ ಮೂಲಕ ಖಗೋಳದ ಆ ಕ್ಷಣದ ಮಾಹಿತಿಯನ್ನು ನೇರವಾಗಿ ಪಡೆದುಕೊಳ್ಳಬಹುದಾದ (ರಿಯಲ್ ಟೈಂ ಡೇಟಾ) ದೇಶದ ಮೊದಲ ಅತ್ಯಾಧುನಿಕ ಖಗೋಳ ತಾರಾಲಯದ ಕಾಮಗಾರಿ ಭರದಿಂದ ಸಾಗಿದೆ.
2022ರ ಮಾರ್ಚ್ 6ರಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ತಾರಾಲಯಕ್ಕೆ ಶಂಕುಸ್ಥಾಪನೆ ನಡೆಸಿದ್ದರು. ಈಗ ಅದರ ಕಾಮಗಾರಿ ವೇಗಪಡೆದುಕೊಂಡಿದೆ.

ಈ ಬಗ್ಗೆ ಮತ್ತೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ನೀಡಿರುವ ಅವರು, ಕರ್ನಾಟಕದ ಮೈಸೂರು ವಿಶ್ವವಿದ್ಯಾನಿಲಯದ ಚಾಮುಂಡಿ ಬೆಟ್ಟದ ಕ್ಯಾಂಪಸ್ನಲ್ಲಿ ಅತ್ಯಾಧುನಿಕ ತಾರಾಲಯದ ನಿರ್ಮಾಣವು ಗಮನಾರ್ಹ ಪ್ರಗತಿಯನ್ನು ಸಾಧಿಸುತ್ತಿದೆ ಎಂದು ತಿಳಿಸಿದ್ದಾರೆ.
ಸಚಿವೆ ನಿರ್ಮಲ ಸೀತಾರಾಮನ್ ಅವರು ಕಾಸ್ಮಾಲಜಿ ಶಿಕ್ಷಣ ಮತ್ತು ಸಂಶೋಧನಾ-ತರಬೇತಿ ಕೇಂದ್ರದ ಯೋಜನೆಗಾಗಿ ತಮ್ಮ ಸಂಸದರ ನಿಧಿಯ 5 ಕೋಟಿ ರೂ.ಗಳನ್ನು ವಿನಿಯೋಗಿಸಿದ್ದಾರೆ ಮತ್ತು ಮಾರ್ಚ್ 2022 ರಲ್ಲಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಕರ್ನಾಟಕದ ಯುವಜನರಲ್ಲಿ ಬಾಹ್ಯಾಕಾಶ ಮತ್ತು ವಿಶ್ವವಿಜ್ಞಾನದ ಬಗ್ಗೆ ಆಸಕ್ತಿಯನ್ನು ಬೆಳೆಸಲು ಡಿಜಿಸ್ಟಾರ್ 7 ತಾರಾಲಯವನ್ನು ಸ್ಥಾಪಿಸುವ ಕಲ್ಪನೆಯಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಎಲ್ಇಡಿ ಗುಮ್ಮಟವನ್ನು ಕೊನಿಕಾ-ಮಿನೋಲ್ಟಾ (ಜಪಾನ್), ಆರ್ಎಸ್ಎ-ಕಾಸ್ಮೊಸ್ (ಫ್ರಾನ್ಸ್), ಮತ್ತು ಮೆಸರ್ಸ್ ಆರ್ಬಿಟ್-ಅನಿಮೇಟ್ (ಇಂಡಿಯಾ) ಕನ್ಸೋರ್ಟಿಯಂ ಅಭಿವೃದ್ಧಿಪಡಿಸುತ್ತಿವೆ. ಎಲ್ಇಡಿ ಡೋಮ್ನ ಅಭಿವೃದ್ಧಿ ಮತ್ತು ಸಿವಿಲ್ ನಿರ್ಮಾಣವು ಪ್ರಸ್ತುತ ನಡೆಯುತ್ತಿದೆ. 8ಕೆ ರೆಸಲ್ಯೂಶನ್ ಹೊಂದಿರುವ ಹೈಟೆಕ್ 15-ಮೀಟರ್ ಎಲ್ಇಡಿ ಗುಮ್ಮಟ ತಾರಾಲಯವು ವಿಶ್ವದ ಮೊದಲ ಗುಮ್ಮಟ ತಾರಾಲಯ ಎಂಬ ಪ್ರಸಿದ್ಧಿಗೆ ಪಾತ್ರವಾಗಲಿದೆ.
86 ಕೋಟಿ ರೂಪಾಯಿಗಳ ಬಜೆಟ್ ಅಂದಾಜಿನೊಂದಿಗೆ ಈ ಯೋಜನೆಯು ನಿರ್ಮಾಣ ಮತ್ತು ಕಾರ್ಯಾಚರಣೆಗಾಗಿ ಮೈಸೂರು ವಿಶ್ವವಿದ್ಯಾನಿಲಯದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (ಐಐಎ) ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ.
ಕಾಸ್ಮಾಲಜಿ ಶಿಕ್ಷಣ ಮತ್ತು ಸಂಶೋಧನಾ-ತರಬೇತಿ ಕೇಂದ್ರ ಯೋಜನೆಯ ಅನುಷ್ಠಾನವನ್ನು ಸಚಿವಾಲಯದ ಕಾರ್ಯದರ್ಶಿ ಮಾರ್ಗದರ್ಶನದ ಸಲಹಾ ಮಂಡಳಿಯ ಅಡಿಯಲ್ಲಿ ಕೈಗೊಳ್ಳಲಾಗುತ್ತಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications