ಗಿಡ ನೆಡುವ ಸೆಲ್ಫಿ ಕಳಿಸಿ, ರೋಚಕ ಬಹುಮಾನ ಗೆಲ್ಲಿರಿ!
ವಿಜಯಪುರ, ಜುಲೈ 06 : ಪರಿಸರ ಉಳಿಕೆಗಾಗಿ ಮತ್ತು ನಿಸರ್ಗದ ಪ್ರೀತಿಗಾಗಿ ಗಿಡ ನೆಡಿ ಮತ್ತು ಆ ಗಿಡದೊಂದಿಗೆ ತೆಗೆದುಕೊಂಡ ಸೆಲ್ಫಿ ಕಳಿಸಿ, ಬಹುಮಾನ ಗೆಲ್ಲಿ ಎಂಬ ಅಭಿಯಾನವನ್ನು ನೀರಾವರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ವಿಜಯಪುರದಲ್ಲಿ ಆರಂಭಿಸಲಿದ್ದಾರೆ.
ಗಿಡಗಳನ್ನು ನೆಡುವುದು ಪರಿಸರ ಸಂರಕ್ಷಣೆಗೆ ನಾವು ನೀಡುವಂತಹ ಬಹು ದೊಡ್ಡ ಕೊಡುಗೆ. ಹೆಚ್ಚು ಮರಗಳಿರಬೇಕು ಎನ್ನುವುದು ಕೇವಲ ಉತ್ತಮ ಪರಿಸರ ವ್ಯವಸ್ಥೆಯನ್ನು ಒದಗಿಸುತ್ತದೆ ಎಂಬ ದೃಷ್ಟಿಯಿಂದ ಮಾತ್ರವಲ್ಲದೆ ಆರ್ಥಿಕ ಲಾಭಕ್ಕಾಗಿ ಹಾಗೂ ಉತ್ತಮ ಆರೋಗ್ಯವನ್ನು ಹೊಂದುವ ದೃಷ್ಟಿಯಿಂದಲೂ ಸಹ ಬಹಳ ಮುಖ್ಯ.

ಡಾ. ಎಂ. ಬಿ. ಪಾಟೀಲ ಅವರು ಅನುಷ್ಠಾನಗೊಳಿಸಿರುವ 'ವೃಕ್ಷ ಅಭಿಯಾನ' ವಿಜಯಪುರ ಜಿಲ್ಲೆಯಲ್ಲಿ ಹಸಿರನ್ನು ವೃದ್ಧಿಸುವ ನಿಟ್ಟಿನಲ್ಲಿ ಮಹತ್ತರವಾದ ಹೆಜ್ಜೆಯಾಗಿದೆ. ಈ ಯೋಜನೆಯಡಿ ಮುಂದಿನ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಒಂದು ಕೋಟಿ ಗಿಡಗಳನ್ನು ನೆಟ್ಟು, ಅದನ್ನು ಪೋಷಿಸುವ ಗುರಿಯನ್ನು ಹೊಂದಲಾಗಿದೆ.
ಉತ್ತಮ ಭವಿಷ್ಯಕ್ಕಾಗಿ ಈ ಮಹತ್ತರವಾದ ಅಭಿಯಾನದಲ್ಲಿ ಕೈ ಜೋಡಿಸಿ. ಗಿಡ ನೆಡುತ್ತಿರುವಂತಹ ಒಂದು ಸೆಲ್ಫಿ ನಮಗೆ ಕಳುಹಿಸಿ ಹಾಗೂ ಆಕರ್ಷಕ ಬಹುಮಾನಗಳನ್ನು ಗೆಲ್ಲಿರಿ. ಹೆಚ್ಚು ಬಹುಮಾನಗಳನ್ನು ಗೆಲ್ಲಲು ಹೆಚ್ಚು ಹೆಚ್ಚು ಗಿಡಗಳನ್ನು ನೆಡಿ ಮತ್ತು ಹೆಚ್ಚಿನ ಸಂಖ್ಯೆಯ ಸೆಲ್ಫಿಗಳನ್ನು ಕಳುಹಿಸಿ.
ವೃಕ್ಷ ಅಭಿಯಾನ ಪ್ರತಿಷ್ಠಾನವು ಸೂಕ್ತವಾದ ರೀತಿಯಲ್ಲಿ ತಪಾಸಣೆ ಮಾಡಿ ಗಿಡಗಳನ್ನು ವಿತರಿಸುತ್ತಿದೆ. ಅತ್ಯುತ್ತಮವಾಗಿ ಮೂಡಿ ಬಂದಿರುವ ಸೆಲ್ಫಿಯನ್ನು ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಗಿಡ ನೆಟ್ಟಿರುವ ಸ್ಥಳದ ವಿವರಗಳ ಜೊತೆಗೆ ಕಳುಹಿಸಿ.
ವೃಕ್ಷ ಅಭಿಯಾನ ಪ್ರತಿಷ್ಠಾನವು ಕಟ್ಟುನಿಟ್ಟಾಗಿ ತಪಾಸಣೆ ಮಾಡಿ ನಂತರ ಗಿಡಗಳನ್ನು ವಿತರಿಸುತ್ತದೆ. ಮೊಬೈಲ್: 9739317408.
ನಿಮ್ಮ ಹೆಸರು, ವಿಳಾಸ ಹಾಗೂ ದೂರವಾಣಿ ಸಂಖ್ಯೆ ಹಾಗೂ ಗಿಡವನ್ನು ನೆಟ್ಟ ಸ್ಥಳದ ವಿವರದೊಂದಿಗೆ ನಿಮ್ಮ ಅತ್ಯುತ್ತಮ ಚಿತ್ರವನ್ನು [email protected]ಗೆ ಇ-ಮೇಲ್ ಕಳುಹಿಸಿ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications