ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾಂಬ್ ಇಟ್ಟ ಪ್ರಕರಣ : ಗಿರೀಶ್ ಮಟ್ಟಣ್ಣನವರ್ ಖುಲಾಸೆ

|
Google Oneindia Kannada News

ಬೆಂಗಳೂರು, ಜೂನ್ 27 : ಶಾಸಕರ ಭವನದಲ್ಲಿ ಬಾಂಬ್ ಇಟ್ಟ ಪ್ರಕರಣದಲ್ಲಿ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಮೂವರು ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.

ಸೋಮವಾರ 66ನೇ ಸೆಷನ್ಸ್ ನ್ಯಾಯಾಲಯ ಈ ಕುರಿತು ತೀರ್ಪು ಪ್ರಕಟಿಸಿದೆ. ಶಾಸಕರ ಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ್ದ ಪ್ರಮುಖ ಆರೋಪಿ ಗಿರೀಶ್ ಮಟ್ಟಣ್ಣನವರ್ ಮತ್ತು ಇತರ ಇಬ್ಬರನ್ನು ಖುಲಾಸೆಗೊಳಿಸಿದ ಆದೇಶ ಹೊರಡಿಸಿದೆ. [ಕಳಸಾ ಗೋಡೆ ಧ್ವಂಸ ಗುಲ್ಲು, ಗಿರೀಶ್ ವಿರುದ್ಧ ಕೇಸ್]

girish nattannavar

ಆಗಿದ್ದೇನು? : 2003ರ ನವೆಂಬರ್‌ 1ರಂದು ವಿಧಾನಸೌಧದ ಪಕ್ಕದ ಶಾಸಕರ ಭವನದ 5 ಮಹಡಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಬಂದಿತ್ತು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಮಟ್ಟಣ್ಣನವರ್‌ ಹಾಗೂ ಇತರ ಆರೋಪಿಗಳನ್ನು ಬಂಧಿಸಿದ್ದರು.

ಭ್ರಷ್ಟ ರಾಜಕಾರಣಿಗಳನ್ನು ಬೆದರಿಸಲು ಅಂದು ಪೊಲೀಸ್ ಅಧಿಕಾರಿಯಾಗಿದ್ದ ಗಿರೀಶ್ ಮಟ್ಟಣ್ಣನವರ್ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದರು. ಈ ಪ್ರಕರಣದ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿತ್ತು.

English summary
Bengaluru Sessions Court on Monday discharged Girish Mattannavar who planted the bombs in the Legislator's near Vidhana Soudha on 2003.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X