ಮಹಿಷಿ ಕ್ಷೇತ್ರದಲ್ಲಿ ಉತ್ತರಾದಿ ಮಠ ಕಟ್ಟಡ ನಿರ್ಮಾಣಕ್ಕೆ ನೆರವಾಗಿ
ತೀರ್ಥಹಳ್ಳಿ, ಜುಲೈ 5: ಭಕ್ತರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿರುವ ಪ್ರಸಿದ್ಧ ಯಾತ್ರಾಸ್ಥಳ ಮಹಿಷಿಯಲ್ಲಿ ಉತ್ತರಾದಿ ಮಠದಿಂದ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಈ ಸ್ಥಳದಲ್ಲಿ ಉತ್ತರಾದಿ ಮಠವಿದ್ದು, ಮಠದ ಪರಂಪರೆಯ ಸ್ವಾಮಿಗಳಾದ ಸತ್ಯಸಂಧರು ಇಲ್ಲೇ ವೃಂದಾವನಸ್ಥರಾಗಿದ್ದಾರೆ.
ಎರಡು ವರ್ಷಗಳ ಹಿಂದೆ ಭಕ್ತರ ನೆರವಿನಿಂದ ಬಂದ ಹದಿನಾಲ್ಕು ಲಕ್ಷ ರುಪಾಯಿಯಲ್ಲಿ ಗೋಶಾಲೆ ನಿರ್ಮಾಣ ಮಾಡಲಾಗಿದ್ದು, ಸತ್ಯಾತ್ಮ ತೀರ್ಥರು ಉದ್ಘಾಟನೆ ಮಾಡಿದ್ದರು. ಈಗ ಇಲ್ಲಿ ಎಂಟು ಹಸು ಹಾಗೂ ಹನ್ನೆರಡು ಕರುಗಳಿವೆ. ಇದರಿಂದ ದೊರೆಯುವ ಹಾಲು, ಮೊಸರು, ಬೆಣ್ಣೆ, ತುಪ್ಪವನ್ನು ಮಠದಲ್ಲಿ ಹಾಗೂ ಮಠದ ಇತರ ಶಾಖೆಗಳಲ್ಲಿ ಬಳಸಲಾಗುತ್ತಿದೆ.

ಇತ್ತೀಚೆಗೆ ಮಠಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಿದ್ದು, ಉಪನಯನ-ಹೋಮ, ಹವನ ಮುಂತಾದ ಕಾರ್ಯಗಳನ್ನು ಇಲ್ಲಿ ಮಾಡಲಾಗುತ್ತಿದೆ. ಆದ್ದರಿಂದ ಭಕ್ತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪ್ರತ್ಯೇಕ ಅಡುಗೆ ಮನೆ, ಉಗ್ರಾಣ, ಭೋಜನ ಶಾಲೆ, ಅರ್ಚಕರಿಗೆ ಪ್ರತ್ಯೇಕ ವಸತಿ ಕಲ್ಪಿಸಲು ನಿರ್ಧರಿಸಲಾಗಿದೆ.
ಇಂಥ ದೊಡ್ಡ ಸಂಕಲ್ಪಕ್ಕೆ ಮೊದಲನೇ ಹಂತದಲ್ಲಿ ಎಪ್ಪತ್ತೈದು ಲಕ್ಷ ರುಪಾಯಿ ಬೇಕಾಗಬಹುದು ಎಂಬ ಅಂದಾಜಿದೆ. ಇದಕ್ಕೆ ಭಕ್ತರ ನೆರವಿನ ಅಗತ್ಯವಿದೆ. ಸಹಾಯ ಮಾಡುವ ಇಚ್ಛೆ ಇದ್ದವರು ಚೆಕ್ ಅಥವಾ ಡ್ರಾಫ್ಟ್ ಮೂಲಕ ಆರ್ಥಿಕವಾಗಿ ನೆರವಾಗಬಹುದು. ಅದಕ್ಕಾಗಿ ರಸೀದಿ ಪಡೆಯಿರಿ ಎಂದು ಮನವಿ ಮಾಡಲಾಗಿದೆ.

ಜತೆಗೆ ಬ್ಯಾಂಕ್ ಖಾತೆಗೆ ಕೂಡ ಹಣ ಜಮೆ ಮಾಡಬಹುದು. ಅದರ ವಿವರ ಇಂತಿದೆ.
ಶ್ರೀ ಉತ್ತರಾದಿ ಮಠ- ಮಹಿಷಿ
ಕರ್ನಾಟಕ ಬ್ಯಾಂಕ್, ತೀರ್ಥಹಳ್ಳಿ
ಖಾತೆ ಸಂಖ್ಯೆ 7622500101178301
IFSC Code: KARB0000762

ವಿಳಾಸ:
ವ್ಯವಸ್ಥಾಪಕರು, ಶ್ರೀ ಸತ್ಯಸಂಧ ಗುರು ಸನ್ನಿಧಿ, ಉತ್ತರಾದಿ ಮಠ,
ಮಹಿಷಿ, ತೀರ್ಥಹಳ್ಳಿ ತಾಲೂಕು, ಶಿವಮೊಗ್ಗ ಜಿಲ್ಲೆ
08181-29473, 9449896874
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications