ಪ್ರಧಾನಿ ವಿಡಿಯೋ ಕಾನ್ಫರೆನ್ಸ್: ಸಿಎಂ ಬೊಮ್ಮಾಯಿ ವಿವರಿಸಿದ 20 ಅಂಶಗಳೇನು?
ಬೆಂಗಳೂರು, ಏಪ್ರಿಲ್ 27: ಕೋವಿಡ್ ಸ್ಥಿತಿಗತಿಯ ಬಗ್ಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಹಿತಿ ಪಡೆಯುವ ಸಲುವಾಗಿ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಿಂದ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಎನ್ನುವುದರ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು.
ಸಿಎಂ ಬೊಮ್ಮಾಯಿ ವಿವರಿಸಿದ 20 ಅಂಶಗಳು ಹೀಗಿವೆ..
1. ಪ್ರಧಾನಮಂತ್ರಿಗಳ ಮಾರ್ಗದರ್ಶನದಲ್ಲಿ ಕೋವಿಡ್ ಮೂರೂ ಅಲೆಯನ್ನೂ ಸಮರ್ಥವಾಗಿ ಎದುರಿಸಲಾಗಿದೆ. ಈ ಅನುಭವದ ಮೇರೆಗೆ ನಾಲ್ಕನೇ ಅಲೆಯನ್ನೂ ಸಮರ್ಥವಾಗಿ ಎದುರಿಸುವ ಬಗ್ಗೆ ನಮಗೆ ಆತ್ಮವಿಶ್ವಾಸವಿದೆ ಹಾಗೂ ಸರ್ವರೀತಿಯಿಂದಲೂ ಸನ್ನದ್ಧರಾಗಿದ್ದೇವೆ.\
Koo Appಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಲ್ಲಾ ರಾಜ್ಯಗಳ ಮುಖ್ಯ ಮಂತ್ರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಮುಖ್ಯ ಮಂತ್ರಿ Basavaraj Bommai ಅವರು ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡರು. ಆರೋಗ್ಯ ಸಚಿವ ಡಾ:ಕೆ.ಸುಧಾಕರ್, ವಸತಿ ಸಚಿವ ವಿ.ಸೋಮಣ್ಣ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಪ್ರಧಾನ ಮಂಜುನಾಥ್ ಪ್ರಸಾದ್, ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್, ಪ್ರಧಾನ ಕಾರ್ಯದರ್ಶಿ ಟಿ.ಕೆ ಅನಿಲ್ ಕುಮಾರ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ: ಅರುಂಧತಿ ಚಂದ್ರಶೇಖರ್ ಉಪಸ್ಥಿತರಿದ್ದರು. - CM of Karnataka (@CMOKarnataka) 27 Apr 2022
2. ಏಪ್ರಿಲ್ 9 ರವರೆಗೆ ಪಾಸಿಟಿವಿಟಿ ದರ ಕಡಿಮೆ ಇತ್ತು. ನಂತರದಲ್ಲಿ 0.3 ನಿಂದ 1.38 ವರಗೆ ಹಾಗೂ ಬೆಂಗಳೂರಿನಲ್ಲಿ 0.4 ನಿಂದ 2.07 ಗೆ ಏರಿಕೆಯಾಗಿದೆ.

3. ರಾಜ್ಯದಲ್ಲಿ ಈವರೆಗೆ 1686 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಕೋವಿಡ್ ನಿಂದ ಯಾವುದೇ ಸಾವು ವರದಿಯಾಗಿಲ್ಲ.
4. ಕೋವಿಡ್ ಪರೀಕ್ಷೆಗಳನ್ನು 30 ಸಾವಿರಕ್ಕೆ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ 10 ಸಾವಿರ ಹಾಗೂ ಇತರೆ ಜಿಲ್ಲೆಗಳಲ್ಲಿ 20 ಸಾವಿರ ಪರೀಕ್ಷೆಗಳನ್ನು ಪ್ರತಿನಿತ್ಯ ನಡೆಸಲಾಗುವುದು.
5. ವಿಮಾನನಿಲ್ದಾಣಗಳಲ್ಲಿ ದಕ್ಷಿಣ ಆಫ್ರಿಕಾ, ಥಾಯ್ಲ್ಯಾಂಡ್, ಇಂಡೋನೇಷ್ಯಾ, ರಷ್ಯಾ, ಚೈನಾ, ಆಸ್ಟ್ರೇಲಿಯಾ, ದಕ್ಷಿಣ ಕೊರಿಯಾದಿಂದ ಆಗಮಿಸುವ ಪ್ರಯಾಣಿಕರ ಪರೀಕ್ಷೆಗಳನ್ನು ಹೆಚ್ಚಿಸಿ ಟೆಲಿಟ್ಯಾಕಿಂಗ್ ಪ್ರಾರಂಭಿಸಲಾಗುವುದು.
6. ರಾಜ್ಯದಲ್ಲಿ 10 ಜಿನೋಮ್ ಸೀಕ್ವೆನ್ಸಿಂಗ್ ಪ್ರಯೋಗಾಲಯಗಳಿದ್ದು, ಈವರೆಗೆ 8890 ಪರೀಕ್ಷೆಗಳನ್ನು ಮಾಡಲಾಗಿದೆ. ಈ ಪೈಕಿ 4449 ಪ್ರಕರಣಗಳು ಓಮಿಕ್ರಾನ್ ವೈರಾಣು ಎಂದು ಧೃಢಪಟ್ಟಿದೆ.

7. ರಾಜ್ಯದಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಚಿಕಿತ್ಸೆ ಲಭ್ಯವಿದೆ. 1,43,000 ಆಕ್ಷಿಜನ್ ಹಾಸಿಗೆಗಳು ಪ್ರಸ್ತುತ ಲಭ್ಯವಿದೆ.
8. ಈಗಾಗಲೇ ಕೋವಿಡ್ ಸೂಕ್ತ ನಡವಳಿಕೆಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
9. ಈ ಕುರಿತು ಭಾರತ ಸರ್ಕಾರ ಈಗಾಗಲೇ ನೀಡಿರುವ ನಿಯಮಗಳನ್ನು ಪಾಲಿಸಲಾಗುತ್ತಿದೆ.
10. ಕರ್ನಾಟಕ ಲಸಿಕೆ ಅಭಿಯಾನದಲ್ಲಿ ಮುಂಚೂಣಿಯಲ್ಲಿದ್ದು, ಶೇ 98% ಜನಸಂಖ್ಯೆಗೆ ಲಸಿಕೆ ಹಾಕಲಾಗಿದೆ.
11. ಒಟ್ಟು 10.56 ಕೋಟಿ ಡೋಸ್ಗಳನ್ನು ಹಾಕಲಾಗಿದ್ದು, 4.98 ಕೋಟಿ ಮೊದಲ ಡೋಸ್ ಹಾಗೂ 4.80 ಕೋಟಿ ಎರಡನೇ ಡೋಸ್ ಲಸಿಕೆ ಹಾಕಲಾಗಿದೆ.
12. ಹದಿನೈದರಿಂದ - ಹದಿನೇಳು ವಯೋಮಾನದವರಿಗೆ ಈವರೆಗೆ 50 ಲಕ್ಷ ಡೋಸ್ಗಳನ್ನು ಹಾಕಲಾಗಿದೆ.
13. ಶೇ. 27ರಷ್ಟು ಜನಸಂಖ್ಯೆ ಮುಂಜಾಗ್ರತಾ ಲಸಿಕೆಯನ್ನು ಪಡೆದಿದ್ದಾರೆ.
14. ರಾಜ್ಯದಲ್ಲಿ ಪ್ರಸ್ತುತ 61 ಲಕ್ಷ ಲಸಿಕೆಗಳ ದಾಸ್ತಾನು ಲಭ್ಯವಿದೆ.
15. ಸಾರ್ವಜನಿಕರಲ್ಲಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳನ್ನು ತೀವ್ರಗೊಳಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿಯೂ ಈ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
16. ರಾಜ್ಯದ ಗಡಿಗಳಲ್ಲಿ ತಪಾಸಣೆಯನ್ನು ಹೆಚ್ಚಿಸಲಾಗುತ್ತಿದೆ.
17. ಕೋವಿಡ್ ನಿರ್ವಹಣೆಗಾಗಿ ರಾಜ್ಯಕ್ಕೆ ಒದಗಿಸಲಾಗಿರುವ 831 ಕೋಟಿ ರೂ.ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. ಎಲ್ಲಾ ಕಾಮಗಾರಿಗಳು ಪ್ರಗತಿಯಲ್ಲಿವೆ.
18. 1220 ಮೆಟ್ರಿಕ್ ಟನ್ ಆಕ್ಸಿಜನ್ ದಾಸ್ತಾನು ರಾಜ್ಯದಲ್ಲಿ ಲಭ್ಯವಿದೆ. 243 ಆಕ್ಸಿಜನ್ ಘಟಕಗಳ ಪೈಕಿ 242 ಆಕ್ಸಿಜನ್ ಘಟಕಗಳ ಕಾಮಗಾರಿ ಪೂರ್ಣಗೊಂಡಿವೆ.
19. ಆರ್ಥಿಕ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧಗಳಿಲ್ಲದೆ, ಸಾಂಕ್ರಾಮಿಕವನ್ನು ನಿರ್ವಹಿಸಲು ಕ್ರಮ ವಹಿಸಲಾಗುವುದು.
20. ಕೋವಿಡ್ ಸಾಂಕ್ರಾಮಿಕದ ಸಂಭಾವ್ಯ 4ನೇ ಅಲೆಯನ್ನು ಎದುರಿಸಲು ರಾಜ್ಯ ಎಲ್ಲ ಸಿದ್ಧತೆ ಮಾಡಿಕೊಂಡಿದೆ.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications