PM Modi Bengaluru Visit; ಬೆಂಗಳೂರು ಸ್ಟಾರ್ಟ್ಅಪ್ಗಳ ನಗರ; ಮೋದಿ
ಬೆಂಗಳೂರು, ನವೆಂಬರ್ 11; ಭಾರತದ ಪ್ರಧಾನಿ ನರೇಂದ್ರ ಮೋದಿ ಒಂದು ದಿನದ ಕರ್ನಾಟಕ ಭೇಟಿ ಪೂರ್ಣಗೊಂಡಿದೆ. ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದ ಮೋದಿ ಕೆಂಪೇಗೌಡ ಪ್ರತಿಮೆ ಅನಾವರಣ ಸೇರಿದಂತೆ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಶುಕ್ರವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಪ್ರಹ್ಲಾದ್ ಜೋಶಿ ಮೋದಿ ಸ್ವಾಗತಿಸಿದರು.
'ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ' ಬುಕ್ಕಿಂಗ್ ಆರಂಭ, ದರ
ನರೇಂದ್ರ ಮೋದಿ ಬೆಂಗಳೂರು ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮೋದಿ ಮಾಲಾರ್ಪಣೆ ಮಾಡಿದರು. ಬಳಿಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ತೆರಳಿದರು.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲು: ಚೆನ್ನೈ-ಮೈಸೂರು ಮಾರ್ಗದ ಸಮಯ, ನಿಲ್ದಾಣಗಳ ವಿವರಗಳು
ವಂದೇ ಭಾರತ್ ಎಕ್ಸ್ಪ್ರೆಸ್, ಕರ್ನಾಟಕ ಭಾರತ್ ಕಾಶಿ ದರ್ಶನ ರೈಲು ಸೇವೆಗೆ ಚಾಲನೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಮಾಡಿದರು. ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದರು. ಬಳಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಭೇಟಿಯ ಫೋಟೋ, ವಿಡಿಯೋ, ವರದಿಗಳು ಇಲ್ಲಿವೆ....
108-ft Kempegowda statue : 108 ಅಡಿ ಕೆಂಪೇಗೌಡ ಪ್ರತಿಮೆ ವಿಶೇಷತೆಗಳು
Karnataka | Bengaluru represents the 'Start-up' spirit. Across the world, India is known for its start-ups. Karnataka is also getting benefitted from the investment happening in the country: PM Modi in Bengaluru pic.twitter.com/XOVZhlidUE
— ANI (@ANI) November 11, 2022
ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟಿಸಲು ಬೆಂಗಳೂರಿಗೆ ಆಗಮಿಸುತ್ತಿರುವ @narendramodi ಅವರಿಗೆ ಸ್ವಾಗತ. ಆದರೆ, @BJP4India ಮತ್ತು @BJPKarnataka ಸರ್ಕಾರಗಳು ನಾಡಪ್ರಭು ಕೆಂಪೇಗೌಡರು ಮತ್ತು ಅವರ ಮೌಲ್ಯಗಳ ನಿಜವಾದ ಅನುಯಾಯಿಗಳೇ?
— Siddaramaiah (@siddaramaiah) November 11, 2022
1/4