ಬೆಂಗಳೂರು, ನವೆಂಬರ್ 11; ಭಾರತದ ಪ್ರಧಾನಿ ನರೇಂದ್ರ ಮೋದಿ ಒಂದು ದಿನದ ಕರ್ನಾಟಕ ಭೇಟಿ ಪೂರ್ಣಗೊಂಡಿದೆ. ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದ ಮೋದಿ ಕೆಂಪೇಗೌಡ ಪ್ರತಿಮೆ ಅನಾವರಣ ಸೇರಿದಂತೆ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಶುಕ್ರವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಪ್ರಹ್ಲಾದ್ ಜೋಶಿ ಮೋದಿ ಸ್ವಾಗತಿಸಿದರು.
ನರೇಂದ್ರ ಮೋದಿ ಬೆಂಗಳೂರು ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮೋದಿ ಮಾಲಾರ್ಪಣೆ ಮಾಡಿದರು. ಬಳಿಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ತೆರಳಿದರು.
ವಂದೇ ಭಾರತ್ ಎಕ್ಸ್ಪ್ರೆಸ್, ಕರ್ನಾಟಕ ಭಾರತ್ ಕಾಶಿ ದರ್ಶನ ರೈಲು ಸೇವೆಗೆ ಚಾಲನೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಮಾಡಿದರು. ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದರು. ಬಳಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಭೇಟಿಯ ಫೋಟೋ, ವಿಡಿಯೋ, ವರದಿಗಳು ಇಲ್ಲಿವೆ....
Nov 11, 2022, 1:59 pm IST
ಬೆಂಗಳೂರಿನಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಮಧುರೈಗೆ ತೆರಳಿದರು.
Nov 11, 2022, 1:34 pm IST
ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಪೂರ್ಣಗೊಳಿಸಿದರು.
Nov 11, 2022, 1:26 pm IST
ಕರ್ನಾಟಕದಿಂದ ಕಾಶಿ, ಅಯೋಧ್ಯೆ, ಪ್ರಯಾಗ್ರಾಜ್ಗೆ ಯಾತ್ರೆ ಮಾಡಬಹುದಾಗಿದೆ. ಈ ರೈಲಿನಿಂದ ಧಾರ್ಮಿಕ ಕ್ಷೇತ್ರಗಳಿಗೆ ಸಂಚಾರ ನಡೆಸುವ ಜನರಿಗೆ ಸಹಾಯಕವಾಗಲಿದೆ ಎಂದು ಮೋದಿ ಹೇಳಿದರು.
Nov 11, 2022, 1:22 pm IST
ಬೆಂಗಳೂರಿನಲ್ಲಿ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಾರೆ.
Karnataka | Bengaluru represents the 'Start-up' spirit. Across the world, India is known for its start-ups. Karnataka is also getting benefitted from the investment happening in the country: PM Modi in Bengaluru pic.twitter.com/XOVZhlidUE
5ಜಿ ಟೆಕ್ನಾಲಜಿ, ಡಿಜಿಟಲ್ ಪೇಮೆಂಟ್ ಜಾರಿಗೆ ಬರುವಲ್ಲಿ ಬೆಂಗಳೂರಿನ ಯುವಕರ ಶ್ರಮ ಹೆಚ್ಚಿದೆ ಎಂದು ಮೋದಿ ಬಣ್ಣಿಸಿದರು.
Nov 11, 2022, 1:17 pm IST
ಕರ್ನಾಟಕ ಡಬಲ್ ಎಂಜಿನ್ ತಾಕತ್ನಿಂದ ಚಲಿಸುತ್ತಿದೆ. ಆದ್ದರಿಂದ ಅಭಿವೃದ್ಧಿಗೆ ಸಹ ವೇಗ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Nov 11, 2022, 1:16 pm IST
ಎಫ್ಡಿಐ ಆಕರ್ಷಣೆಯಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ. ಆದರೆ ಈ ಬಂಡವಾಳ ಹೂಡಿಕೆ ಕೇವಲ ಐಟಿ ವಲಯಕ್ಕೆ ಸೀಮಿತವಾಗಿಲ್ಲ. ಎಲ್ಲಾ ವಲಯಗಳಿಗೂ ಸಹ ಬಂಡವಾಳ ಹರಿದು ಬರುತ್ತಿದೆ. ದೇಶದ ಸೇನೆಗೆ ವಿಮಾನ, ಹೆಲಿಕಾಪ್ಟರ್ ತಯಾರಿಕೆಯಲ್ಲಿ ಕರ್ನಾಟಕ ಮುಂದಿದೆ ಎಂದು ಮೋದಿ ಬಣ್ಣಿಸಿದರು.
Nov 11, 2022, 1:15 pm IST
ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಆದ್ದರಿಂದ ನಮ್ಮ ಸರ್ಕಾರ ಹೊಸ ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
Nov 11, 2022, 1:13 pm IST
ಇನ್ನೂ 400 ವಂದೇ ಭಾರತ್ ಎಕ್ಸ್ಪ್ರೆಸ್ ರೈಲು, ವಿಸ್ಟಾಡೋಮ್ ಕೋಚ್ಗಳ ಮೂಲಕ ಸಾರಿಗೆ ಕ್ಷೇತ್ರದಲ್ಲಿ ನಾವು ಹೊಸ ಅಧ್ಯಾಯ ಬರೆಯಲಿದ್ದೇವೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ಗೆ ಹೋದರೆ ನಮಗೆ ಬೇರೆ ಲೋಕಕ್ಕೆ ಹೋದಂತೆ ಆಗುತ್ತದೆ. ಇದೇ ಮಾದರಿಯಲ್ಲಿ ಯಶವಂತಪುರ, ಕಂಟೋನ್ಮೆಂಟ್ ರೈಲು ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗುತ್ತದೆ ಎಂದು ಮೋದಿ ಹೇಳಿದರು.
Nov 11, 2022, 1:11 pm IST
ವಂದೇ ಭಾರತ್ ಎಕ್ಸ್ಪ್ರೆಸ್ ಕೇವಲ ರೈಲಲ್ಲ. ಇದು ನವ ಭಾರತದ ಹೊಸ ಆಲೋಚನೆಯಾಗಿದೆ. ಭಾರತ ಈಗ ವೇಗವಾಗಿ ಓಡುತ್ತದೆ ಎಂಬುದನ್ನು ಈ ರೈಲು ತಿಳಿಸುತ್ತದೆ ಎಂದು ಮೋದಿ ಹೇಳಿದರು.
Nov 11, 2022, 1:09 pm IST
ಇಡೀ ವಿಶ್ವದಲ್ಲೇ ಭಾರತದ ಗುರುತಿಸುವಿಕೆ ಸ್ಟಾರ್ಟ್ ಅಪ್ ಮೂಲಕ ಇದೆ. ಅದರಲ್ಲಿ ಬೆಂಗಳೂರು ಸ್ಟಾರ್ಟ್ ಅಪ್ಗಳಿಗೆ ಪ್ರಸಿದ್ಧಿಯಾಗಿದೆ. ಸ್ಟಾರ್ಟ್ ಅಪ್ ಒಂದು ವಿನೂತನ ಯೋಚನೆಯಾಗಿದೆ. ಬೆಂಗಳೂರು ಸ್ಟಾರ್ಟ್ ಅಪ್ ಸಿಟಿಯನ್ನು ಪ್ರತಿನಿಧಿಸುತ್ತದೆ.
Nov 11, 2022, 1:08 pm IST
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಕೆಲವು ಚಿತ್ರಗಳನ್ನು ನಾನು ಸಾಮಾಜಿಕ ಜಾತತಾಣದಲ್ಲಿ ಹಾಕಿದ್ದೆ. ಅದಕ್ಕಿಂತಲೂ ಟರ್ಮಿನಲ್ ಸುಂದರವಾಗಿದೆ ಎಂದು ಮೋದಿ ಬಣ್ಣಿಸಿದರು.
Nov 11, 2022, 1:07 pm IST
ಕರ್ನಾಟಕದ ಜನರು ಕಾಶಿ, ವಾರಣಾಸಿ ದರ್ಶನ ಪಡೆಯಲು ಅನುಕೂಲವಾಗುವಂತೆ ಕರ್ನಾಟಕ ಭಾರತ್ ಕಾಶಿ ದರ್ಶನ ರೈಲಿಗೆ ಚಾಲನೆ ನೀಡಲಾಗಿದೆ ಎಂದು ಮೋದಿ ಹೇಳಿದರು.
Nov 11, 2022, 1:06 pm IST
ಕರ್ನಾಟಕಕ್ಕೆ ಇಂದು ಭಾರತದಲ್ಲೇ ತಯಾರಾದ ವಂದೇ ಭಾರತ್ ರೈಲು ಸಿಕ್ಕಿದೆ. ಈ ರೈಲು ಚೆನ್ನೈ, ಬೆಂಗಳೂರು ಮತ್ತು ಮೈಸೂರನ್ನೂ ಸಂಪರ್ಕಿಸಲಿದೆ ಎಂದು ಮೋದಿ ಹೇಳಿದರು.
Nov 11, 2022, 1:05 pm IST
ಉತ್ತಮವಾದ, ವಿಶೇಷವಾದ ದಿನ ಕರ್ನಾಟಕಕ್ಕೆ ಆಗಮಿಸುವ ಅವಕಾಶ ನನಗೆ ಸಿಕ್ಕಿದೆ. ಕನಕದಾಸರಿಗೆ, ಒನಕೆ ಓಬವ್ವಗೆ ಮತ್ತೊಮ್ಮೆ ನಮಿಸುತ್ತೇನೆ ಎಂದು ನರೇಂದ್ರ ಮೋದಿ ಮೋದಿ ಹೇಳಿದರು.
Nov 11, 2022, 1:04 pm IST
ಕರ್ನಾಟಕದ ಜನರಿಗೆ ನನ್ನ ಕೋಟಿ ಕೋಟಿ ಪ್ರಣಾಮಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿಯೇ ಮಾತು ಆರಂಭಿಸಿದರು.
Nov 11, 2022, 1:04 pm IST
ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಾರೆ.
Nov 11, 2022, 1:02 pm IST
ನಮ್ಮ ಕಾಂಗ್ರೆಸ್ ಪಕ್ಷ ನಾಡಪ್ರಭು ಕೆಂಪೇಗೌಡರ ಮೌಲ್ಯಗಳ ನೈಜ ಅನುಯಾಯಿ.
ಅವರ ಗೌರವಾರ್ಥ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದೇವೆ. ಬೆಂಗಳೂರಿನ ಮುಖ್ಯ ಮೆಟ್ರೋ ನಿಲ್ದಾಣಕ್ಕೂ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Nov 11, 2022, 1:01 pm IST
ಮೋದಿ ಬೆಂಗಳೂರು ಭೇಟಿ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್
ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಉದ್ಘಾಟಿಸಲು ಬೆಂಗಳೂರಿಗೆ ಆಗಮಿಸುತ್ತಿರುವ @narendramodi ಅವರಿಗೆ ಸ್ವಾಗತ. ಆದರೆ, @BJP4India ಮತ್ತು @BJPKarnataka ಸರ್ಕಾರಗಳು ನಾಡಪ್ರಭು ಕೆಂಪೇಗೌಡರು ಮತ್ತು ಅವರ ಮೌಲ್ಯಗಳ ನಿಜವಾದ ಅನುಯಾಯಿಗಳೇ? 1/4
ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ಇಂದು ಬೆಂಗಳೂರು ನಗರ ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಅಷ್ಟು ಯೋಜನಾ ಬದ್ಧವಾಗಿ ಅವರು ನಗರವನ್ನು ಕಟ್ಟಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.
Nov 11, 2022, 12:57 pm IST
ನಾಡಪ್ರಭು ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಬಳಿಕ ನಡೆಯುತ್ತಿರುವ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡುತ್ತಿದ್ದಾರೆ.
Nov 11, 2022, 12:55 pm IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶ ಉದ್ದೇಶಿಸಿ ಮಾತನಾಡುತ್ತಿದ್ದಾರೆ.
Nov 11, 2022, 12:51 pm IST
ಪ್ರಧಾನಿ ಮೋದಿ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
Nov 11, 2022, 12:48 pm IST
ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದ ಸ್ವಾಮೀಜಿ ಸಮಾವೇಶದಲ್ಲಿ ಆಶೀರ್ವಚನ ನೀಡುತ್ತಿದ್ದಾರೆ.
Nov 11, 2022, 12:43 pm IST
ನರೇಂದ್ರ ಮೋದಿ ಸಮಾವೇಶದ ನೇರ ಪ್ರಸಾರ
Nov 11, 2022, 12:42 pm IST
ನಾಡಪ್ರಭು ಕೆಂಪೇಗೌಡರ ಕುರಿತ ಸಂಕ್ಷಿಪ್ತ ವಿಡಿಯೋವೊಂದನ್ನು ಸಮಾವೇಶದಲ್ಲಿ ಬಿತ್ತರಿಸಲಾಯಿತು.
Nov 11, 2022, 12:41 pm IST
ನಮ್ಮ ಮೆಟ್ರೋ ಮತ್ತು ಸಬ್ ಅರ್ಬನ್ ರೈಲು ಸೇರಿದಂತೆ ವಿವಿಧ ಕೊಡುಗೆಯನ್ನು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಬಣ್ಣಿಸಿದರು.
Nov 11, 2022, 12:40 pm IST
ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ, ಧಾರವಾಡ ಸಂಸದ ಪಹ್ಲಾದ್ ಜೋಶಿ ಸಮಾವೇಶದಲ್ಲಿ ಸ್ವಾಗತ ಭಾಷಣೆ ಮಾಡುತ್ತಿದ್ದಾರೆ.
Nov 11, 2022, 12:38 pm IST
ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದ ಸ್ವಾಮೀಜಿ ಪೇಟವನ್ನು ತೊಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯನ್ನು ಸನ್ಮಾಸಿಸಿದರು.
Nov 11, 2022, 12:36 pm IST
ನಾಡಪ್ರಭು ಕೆಂಪೇಗೌಡ, ವೀರವನಿತೆ ಒನಕೆ ಓಬವ್ವ, ಕನಕದಾಸರ ಫೋಟೋಗಳಿಗೆ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದರು.
READ MORE
10:09 AM, 11 Nov
ಬೆಂಗಳೂರಿಗೆ ನರೇಂದ್ರ ಮೋದಿ ಆಗಮನ
10:10 AM, 11 Nov
ಪ್ರಧಾನಿ ನರೇಂದ್ರ ಮೋದಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿದರು.
10:11 AM, 11 Nov
ಶುಕ್ರವಾರ ಬೆಳಗ್ಗೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ
ಶಾಸಕರ ಭವನದಲ್ಲಿ ಕನಕದಾಸರ ಪ್ರತಿಮೆ ಲೋಕಾರ್ಪಣೆ ಬಳಿಕ ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ
10:12 AM, 11 Nov
ವಂದೇ ಭಾರತ್ ಎಕ್ಸ್ ಪ್ರೆಸ್, ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲಿಗೆ ಚಾಲನೆ
10:12 AM, 11 Nov
ದೇಶದ ಅತಿ ವೇಗದ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ
10:12 AM, 11 Nov
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್ ಪ್ರೆಸ್ಗೆ ಚಾಲನೆ
10:13 AM, 11 Nov
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಗಣ್ಯರ ಉಪಸ್ಥಿತಿ
10:18 AM, 11 Nov
ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ–ಭಾರತ್ ಗೌರವ್ ಕಾಶಿ ದರ್ಶನ ರೈಲು ಯಾತ್ರೆಗೆ ಚಾಲನೆ ನೀಡಿದ ಬಳಿಕ ರೈಲು ನಿಲ್ದಾಣದಿಂದ ನಿರ್ಗಮಿಸಿದರು.
10:26 AM, 11 Nov
ಪ್ರಧಾನಿ ನರೇಂದ್ರ ಮೋದಿ ಶಾಸಕರ ಭವನದಲ್ಲಿ ಕನಕದಾಸ ಜಯಂತಿಯಂದು ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
10:30 AM, 11 Nov
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು.
10:32 AM, 11 Nov
ಬೆಂಗಳೂರು ರೈಲು ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಹೆಬ್ಬಾಳದ ಎಎಫ್ಟಿಟಿಸಿ ಹೆಲಿಪ್ಯಾಡ್ಗೆ ತೆರಳಿದರು.
10:36 AM, 11 Nov
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಮುಂದೆ ಕಾರು ನಿಲ್ಲಿಸಿ ಕಾರ್ಯಕರ್ತರು ಅಭಿಮಾನಿಗಳತ್ತ ಕೈ ಬೀಸಿದರು.
10:38 AM, 11 Nov
ಕರ್ನಾಟಕ ಭಾರತ್ ಕಾಶಿ ದರ್ಶನ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಇಂದು ಕನಕದಾಸರ ಜಯಂತಿಯ ಶುಭ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಶ್ರೀ ಕನಕದಾಸರಿಗೆ ಗೌರವ ನಮನ ಸಲ್ಲಿಸಿದೆ. ಭಕ್ತಿಯ ಮಾರ್ಗವನ್ನು ತೋರಿಸಿ, ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿ, ಸಾಮಾಜಿಕ ಏಕತೆಯ ಸಂದೇಶವನ್ನು ಸಾರಿದ ಸಂತ ಕನಕದಾಸರಿಗೆ ನಾವು ಸದಾ ಚಿರಋಣಿಗಳಾಗಿರುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
10:56 AM, 11 Nov
ಪ್ರಧಾನಿ ನರೇಂದ್ರ ಮೋದಿ ಎಎಫ್ಟಿಟಿಸಿ ಹೆಲಿಪ್ಯಾಡ್ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು.
11:05 AM, 11 Nov
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮನ
11:15 AM, 11 Nov
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಉದ್ಘಾಟನೆ ಮಾಡಿದರು.
11:16 AM, 11 Nov
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವಾರು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
11:28 AM, 11 Nov
ಮೋದಿ ಬೆಂಗಳೂರು ಭೇಟಿಯ ಕಾರ್ಯಕ್ರಮಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್
ಪ್ರಧಾನ ಮಂತ್ರಿ @narendramodi ಅವರು ಇಂದು ಬೆಂಗಳೂರಿನಲ್ಲಿ "ವಂದೇ ಭಾರತ" ಹಾಗೂ "ಭಾರತ್ ಗೌರವ್ ಕಾಶಿ ದರ್ಶನ್" ರೈಲಿಗೆ ಹಸಿರು ನಿಶಾನೆ ತೋರಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಉದ್ಘಾಟನೆ ಮಾಡಿದ ಬಳಿಕ ಪ್ರಧಾನಿ ಮೋದಿ ಟರ್ಮಿನಲ್ ವೀಕ್ಷಣೆ ಮಾಡುತ್ತಿದ್ದಾರೆ.
11:32 AM, 11 Nov
ವಾರ್ಷಿಕ 2.5 ಕೋಟಿ ಪ್ರಯಾಣಿಕರು ಭೇಟಿ ನೀಡುವ ಸಾಮರ್ಥ್ಯವನ್ನು ಟರ್ಮಿನಲ್ - 2 ಹೊಂದಿದೆ.
11:34 AM, 11 Nov
ಪ್ರತಿಗಂಟೆಗೆ 90 ವಿಮಾನಗಳು ಆಗಮಿಸಿದರೂ ಯಾವುದೇ ಪ್ರಯಾಣಿಕರ ದಟ್ಟಣೆ ಉಂಟಾಗದಂತೆ ಟರ್ಮಿನಲ್-2 ವಿನ್ಯಾಸಗೊಳಿಸಲಾಗಿದೆ.
11:36 AM, 11 Nov
ಏಷ್ಯಾದಲ್ಲಿಯೇ ಮೊದಲ ಬಾರಿಗೆ ಗಾರ್ಡನ್ ಥೀಮ್ನೊಂದಿಗೆ ಟರ್ಮಿನಲ್-2 ನಿರ್ಮಾಣ ಮಾಡಲಾಗಿದೆ. 13000 ಕೋಟಿ ರೂ. ವೆಚ್ಚದಲ್ಲಿ 2.55 ಲಕ್ಷ ಚದರ ಮೀಟರ್ ವ್ಯಾಪ್ತಿಯಲ್ಲಿ ಟರ್ಮಿನಲ್ ನಿರ್ಮಿಸಲಾಗಿದೆ.
11:38 AM, 11 Nov
ಟರ್ಮಿನಲ್-2 ಒಳಾಂಗಣ ವಿನ್ಯಾವನ್ನು ಅಮೆರಿಕ ಮೂಲದ ಕಂಪನಿಯೊಂದು ಮಾಡಿದೆ. ಕೃತಕ ಉದ್ಯಾನ, ಜಲಧಾರೆಗಳು, ಆಧುನಿಕ ತಂತ್ರಜ್ಞಾನದ ಬೆಳಕಿನ ವ್ಯವಸ್ಥೆ ಹೀಗೆ ಹಲವಾರು ವಿಶೇಷತೆಗಳನ್ನು ಇದು ಒಳಗೊಂಡಿದೆ.
11:39 AM, 11 Nov
ಟರ್ಮಿನಲ್-2 ಚಿತ್ರಗಳನ್ನು ಪ್ರಧಾನಿ ಮೋದಿ ನವೆಂಬರ್ 9ರಂದು ಟ್ವೀಟ್ ಮಾಡಿದ್ದರು.
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ನ ಅದ್ಭುತ ದೃಶ್ಯಕಾವ್ಯ ಇಲ್ಲಿದೆ. ಇದು ವಿಮಾನ ನಿಲ್ದಾಣದ ಸಾಮರ್ಥ್ಯದ ವಿಸ್ತರಣೆಗೂ ಇಂಬು ನೀಡುತ್ತದೆ ಮತ್ತು ವಾಣಿಜ್ಯಕ್ಕೆ ಉತ್ತೇಜನ ನೀಡುತ್ತದೆ. ಟರ್ಮಿನಲ್ ಕಟ್ಟಡವು ಸುಸ್ಥಿರತೆಗೆ ಅತ್ಯುನ್ನತ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂಬುದು ನನಗೆ ಸಂತಸ ತಂದಿದೆ. pic.twitter.com/PuuKtjBopu
ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ಪ್ರೆಸ್ ಸಂಪರ್ಕ ಸೌಲಭ್ಯದ ಜತೆಗೆ ವಾಣಿಜ್ಯ ಚಟುವಟಿಕೆಗಳನ್ನೂ ಹೆಚ್ಚಿಸುತ್ತದೆ. ಅದು ಜೀವನವನ್ನು ಹೆಚ್ಚು ಸುಗಮಗೊಳಿಸುತ್ತದೆ. ಈ ರೈಲಿನ ಸಂಚಾರಕ್ಕೆ ಬೆಂಗಳೂರಿನಲ್ಲಿ ಹಸಿರು ನಿಶಾನೆ ತೋರಿಸಿದ್ದಕ್ಕೆ ಸಂತಸವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
PM Modi Bengaluru Visit Live Updates : He scheduled to inaugurate Bengaluru International Airport second terminal and unveiling the 108ft statue of Kempegowda. Check live news and updates in kannada.