SWR: 554 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಇಂದು ಪ್ರಧಾನಿ ಚಾಲನೆ: ಕರ್ನಾಟಕ ನಿಲ್ದಾಣಗಳು, ಹೊಸ ಮೇಲ್ಸೇತುವೆಗಳ ಅಂಕಿ-ಸಂಖ್ಯೆ
ಹುಬ್ಬಳ್ಳಿ, ಫೆಬ್ರವರಿ 26: ಅಮೃತ ಭಾರತ ನಿಲ್ದಾಣ ಯೋಜನೆ-2 ಅಡಿ 554 ರೈಲು ನಿಲ್ದಾಣಗಳ ಪುನರ್ ಅಭಿವೃದ್ಧಿ ಸೇರಿದಂತೆ ವಿವಿಧೆಡೆ ಒಂದು ಸಾವಿರಕ್ಕೂ ಹೆಚ್ಚು ಮೇಲ್ಸೇತುವೆ ಮತ್ತು ಕೆಳಸೇವೆಗಳ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಶೋಮವರ (ಫೆ.26) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ಅಧಿಕೃತ ಮಾಹಿತಿ ನೀಡಿದ್ದಾರೆ. ಇಂದು ಪ್ರಧಾನಿಯವರು ವರ್ಚುವಲ್ ಮೂಲಕ ಪ್ರಧಾನಿ ಮೋದಿಯವರು ಅಭಿವೃದ್ಧಿ ಯೋಜನೆಗಳ ಆರಂಭಕ್ಕೆ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮಗಳಡಿ ಭಾರತದ 554 ರೈಲು ನಿಲ್ದಾಣಗಳ ಮೇಲ್ದರ್ಜೆಗೆ ಏರಲು, ದೇಶದ 554 ರೈಲು ನಿಲ್ದಾಣಗಳ 1,500 ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ನಿರ್ಮಾಣ ಕಾರ್ಯ ಶುರುವಾಗಲಿದೆ.
ಕರ್ನಾಟಕದ ಮಟ್ಟಿಗೆ ನೋಡುವುದಾದರೆ ಇಲ್ಲಿ ₹656.43 ಕೋಟಿ ವೆಚ್ಚದಲ್ಲಿ 31 ನಿಲ್ದಾಣಗಳನ್ನು ಅಭಿವೃದ್ಧಿಗೊಳ್ಳಲಿವೆ.
₹330.62 ಕೋಟಿ ವೆಚ್ಚದಲ್ಲಿ 24 ರಸ್ತೆ ಮೇಲ್ಸೇತುವೆ ಜೊತೆಗೆ ಕೆಳಸೇತುವೆಗಳು ನಿರ್ಮಾಣಗೊಳ್ಳಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪುನರಾಭಿವೃದ್ಧಿ ನಿಲ್ದಾಣದ ವಿಶೇಷತೆಗಳೇನು?
ದಕ್ಷಿಣ-ಮಧ್ಯ ರೈಲ್ವೆಗೆ ಒಳಪಡುವ ಕರ್ನಾಟಕದ ಯಾದಗಿರಿ ಜಿಲ್ಲೆ, ರಾಯಚೂರು ಮತ್ತು ಕೇಂದ್ರ ರೈಲ್ವೆ ವಲಯದ ಗಾಣಗಾಪುರ ರಸ್ತೆ ನಿಲ್ದಾಣವನ್ನು ಸಹ ಈ ಯೋಜನೆ ಅಡಿ ಪುನರಾಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದೆ.
ಭವಿಷ್ಯದಲ್ಲಿ ಅಭಿವೃದ್ಧಿಯಾಗಲಿರುವ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಲಿಫ್ಟ್, ಎಸ್ಕಲೇಟರ್ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಇಲ್ಲಿ ಪ್ರಯಾಣಿಕರ ಸುರಕ್ಷತೆಗೆ ಒತ್ತು ನೀಡಲಾಗುತ್ತದೆ. ಬೆಂಗಳೂರು-ಮುಂಬೈ ನಡುವೆ ದ್ವಿಪಥ, ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡಿದೆ ಎಂದು ಅವರು ವಿವರಿಸಿದರು.

ರೈಲಿನ ವೇಗ-ವಿದ್ಯುದೀಕರಣದ ವಿವರ
ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ವಿದ್ಯುದ್ದೀಕರಣ. ಕಾಮಗಾರಿ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ.
ಬೆಂಗಳೂರು-ಜೋಲಾರ್ಪೇಟೆ, ಬೆಂಗಳೂರು- ಚೆನ್ನೈ ನಡುವೆ 160 ಕಿಲೋ ಮೀಟರ್ ನೈರುತ್ಯ ರೈಲ್ವೆ ವ್ಯಾಪ್ತಿಯ ಉಳಿದೆಡೆ ಶೀಘ್ರ 130 ಕಿಲೋ ಮೀಟರ್ ವೇಗದಲ್ಲಿ ರೈಲುಗಳು ಸಂಚರಿಸಲಿವೆ. ಬೆಂಗಳೂರು-ಹಾಸನ ನಡುವಿನ ಮಾರ್ಗವನ್ನು ಮೇಲ್ದರ್ಜೆ ಗೇರಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ರೈಲ್ವೆ ಟ್ರ್ಯಾಕ್ಗಳು ಶೇಕಡಾ 85ರಷ್ಟು ವಿದ್ಯುದೀಕರಣವಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ಈ ವಿದ್ಯುದೀಕರಣದಲ್ಲಿ ಕರ್ನಾಟಕ (SWR) 25ನೇ ಸ್ಥಾನದಲ್ಲಿದೆ ಎಂದು ಈ ಹಿಂದೆ ವಿದ್ಯುದೀಕರಣದ ವರದಿ ಬಿಡುಗಡೆ ಮಾಡಿದ್ದ ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿತ್ತು.
ಇದಷ್ಟೇ ಅಲ್ಲದೆ ನೈಋತ್ಯ ರೈಲ್ವೆ ವ್ಯಾಪ್ತಿಯ ತಿಪಟೂರು ಹಾಗೂ ತುಮಕೂರು ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಒಟ್ಟು 50 ಕೋಟಿ ಹಣ ಬಿಡುಗಡೆ ಮಾಡಲಾಗಿದೆ.
-
South Western Railway: ಹುಬ್ಬಳ್ಳಿಯಿಂದ ರಾಮೇಶ್ವರಂಗೆ ವಿಶೇಷ ರೈಲು ಸಂಚಾರ; ಮಾರ್ಚ್ 21ರಿಂದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications