ಕರ್ನಾಟಕಕ್ಕೆ ಬರ ಪರಿಹಾರ ನೀಡದ ಪ್ರಧಾನಿ ಮೋದಿ ಕೀನ್ಯಾ ದೇಶಕ್ಕೆ $250m ನೆರವು: ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 07: ಕರ್ನಾಟಕದಲ್ಲಿ ಬರಗಾಲಕ್ಕೆ ರೈತರು ತತ್ತರಿಸಿದ್ದಾರೆ. ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹಿಂಗಾರು ಮಳೆ ನೆಚ್ಚಿಕೊಂಡಿದ್ದ ರೈತರಿಗೆ ಮತ್ತೆ ನಿರಾಸೆಯಾಗಿದೆ. ಇತ್ತ ಸರ್ಕಾರಗಳಿಂದ ಬರಬೇಕಾದ ಪರಿಹಾರ ಹಣವು ಬರುತ್ತಿಲ್ಲ. ಆದರೆ ಸರ್ಕಾರಗಳು ಮಾತ್ರ ಒಬ್ಬರ ಮೇಲೆ ಒಬ್ಬರಂತೆ ಆರೋಪ ಮಾಡಿಕೊಂಡು ಕಾಲ ಕಳೆಯುತ್ತಿವೆ.
ಬರ ಪರಿಹಾರ ನೀಡು ಕೇಂದ್ರದ ಮಾರ್ಗಸೂಚಿಗಳು ತೊಡಕಾಗಿವೆ ಎಂದು ಕೇಂದ್ರದತ್ತ ಬೆಟ್ಟು ಮಾಡಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಕೀನ್ಯಾ ದೇಶಕ್ಕೆ ಪ್ರಧಾನಿ ಭಾರಿ ಪ್ರಮಾಣದಲ್ಲಿ ಆರ್ಥಿಕ ನೆರವು ಕರ್ನಾಟಕದ ಮೇಲೆ ಅಸಡ್ಡೆ ತೋರಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಬರಗಾಲಕ್ಕೆ ತುತ್ತಾಗಿ ತೀವ್ರ ಸಂಕಷ್ಟದಲ್ಲಿರುವ ಕರ್ನಾಟಕದ ರೈತರಿಗೆ ಪರಿಹಾರ ನೀಡಬೇಕೆಂದು ತಿಂಗಳುಗಳಿಂದ ಮನವಿ ಸಲ್ಲಿಸಿ ಒತ್ತಾಯಿಸುತ್ತಿದ್ದರೂ ಇಲ್ಲಿಯ ವರೆಗೆ ಪೈಸೆ ಹಣವನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿಯವರು ಕೀನ್ಯಾ ದೇಶದ ಕೃಷಿ ಕ್ಷೇತ್ರದ ಆಧುನೀಕರಣಕ್ಕಾಗಿ 250 ಮಿಲಿಯನ್ ಡಾಲರ್ಗಳಷ್ಟು ನೆರವು ನೀಡಿದ್ದಾರೆ. ಇದನ್ನು ನೋಡಿದಾಗ ಸಹಜವಾಗಿಯೇ ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ ಎಂಬ ಪ್ರಶ್ನೆ ಕೇಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯಗಳ ಬಗ್ಗೆ ಕಾಳಜಿ ಇಲ್ಲ ಏಕೆ?
ಸ್ವತಂತ್ರ ದೇಶವಾಗಿ ರೂಪು ಪಡೆದ ದಿನದಿಂದಲೂ ಸಂಕಷ್ಟಕ್ಕೆ ಸಿಲುಕಿರುವ ದೇಶಗಳಿಗೆ ನೆರವು ನೀಡುವ ಪರಂಪರೆಯನ್ನು ಭಾರತ ಮುಂದುವರಿಸಿಕೊಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ (BJP) ಸರ್ಕಾರ ಬೇರೆ ದೇಶಗಳ ಕಷ್ಟಕ್ಕೆ ನೆರವಾಗುವುದರ ಬಗ್ಗೆ ನಮ್ಮ ವಿರೋಧ ಇಲ್ಲ. ಆದರೆ ಇದೇ ಔದಾರ್ಯ ಮತ್ತು ಕಾಳಜಿಯನ್ನು ನಮ್ಮದೇ ದೇಶದ ರಾಜ್ಯಗಳ ಬಗ್ಗೆ ಯಾಕೆ ಪ್ರಧಾನಿ ನರೇಂದ್ರ ಮೋದಿಯವರು ತೋರುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ಕರ್ನಾಟಕ ರಾಜ್ಯ ಈ ಬಾರಿ ತೀವ್ರ ಬರಗಾಲಕ್ಕೆ ತುತ್ತಾಗಿದ್ದು ರಾಜ್ಯ ಸರ್ಕಾರ ತನ್ನ ಶಕ್ತಿ ಮೀರಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡವೇ ಬರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸಮೀಕ್ಷೆ ಮಾಡಿಕೊಂಡು ಹೋಗಿ ವರದಿ ನೀಡಿದೆ.

ಬರ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ
ರಾಜ್ಯ ಸರ್ಕಾರ ಕೂಡಾ ಸಮೀಕ್ಷೆ ನಡೆಸಿ ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ನಮ್ಮ ಕೃಷಿ ಮತ್ತು ಕಂದಾಯ ಸಚಿವರಿಬ್ಬರೂ ದೆಹಲಿಗೆ ಭೇಟಿ ನೀಡಿ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರದ ಇಷ್ಟೆಲ್ಲ ಪ್ರಯತ್ನದ ಹೊರತಾಗಿಯೂ ಕೇಂದ್ರ ಸರ್ಕಾರ ಇದಕ್ಕೆ ಸಂಬಂದಿಸಿದಂತೆ ಪ್ರಾಥಮಿಕ ಸಭೆಯನ್ನೂ ಕರೆದಿಲ್ಲ. ಭೇಟಿಗೆ ಅವಕಾಶ ನೀಡಬೇಕೆಂದು ಪ್ರಧಾನ ಮಂತ್ರಿಯವರಿಗೆ ಬರೆದ ಪತ್ರಕ್ಕೂ ಇಲ್ಲಿಯ ವರೆಗೆ ಪ್ರತಿಕ್ರಿಯೆ ಇಲ್ಲ. ಎಂದು ಅವರು ದೂರಿದರು.
48.19 ಲಕ್ಷ ಎಕರೆ ಕೃಷಿ ಬೆಳೆ ನಷ್ಟ
ಬರಗಾಲದಿಂದಾಗಿ ರಾಜ್ಯದ 48.19 ಲಕ್ಷ ಎಕರೆ ಕೃಷಿ ಭೂಮಿಯಲ್ಲಿ ಆಗಿರುವ ಬೆಳೆನಷ್ಟಕ್ಕಾಗಿ ಕನಿಷ್ಠ ರೂ.4,663 ಕೋಟಿ ರೂಪಾಯಿ ಪರಿಹಾರ ನೀಡುವ ಜೊತೆಯಲ್ಲಿ ಒಟ್ಟು ಬರ ಪರಿಹಾರಕ್ಕಾಗಿ ರೂ.18,171 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಿದ್ದೇವೆ. ಆದರೆ ಇಲ್ಲಿಯ ವರೆಗೆ ನಯಾಪೈಸೆ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ವಿವರಿಸಿದರು.
ಇತ್ತ ಬಿಜೆಪಿ ನಾಯಕರು ಬರಗಾಲ ಪರಿಹಾರ ಹಣ ಕುರಿತು ಕೇಂದ್ರ ಸಚಿವಾಲಯಗಳ ಕಾರ್ಯ ಚಟುವಟಿಕೆಗಳು ಪೂರ್ಣಗೊಂಡ ನಂತರ ಹಣ ಬಿಡುಗಡೆ ಆಗುತ್ತದೆ. ಅಲ್ಲಿಯವರೆಗೆ ಕೇಂದ್ರದ ಮೇಲೆ ಬೆಟ್ಟು ಮಾಡದೇ ರಾಜ್ಯದ ಪಾಲಿನ ಹಣವನ್ನು ಬರಗಾಲ ಪೀಡಿತ ತಾಲೂಕುಗಳ ರೈತರಿಗೆ ನೀಡುವಂತೆ ಆಗ್ರಹಿಸಿದ್ದಾರೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications