"ಪ್ರಧಾನಿ ಮೋದಿ ಸರ್ಕಾರದಲ್ಲಿ ಉಳುವವನು ಅಲ್ಲ, ಉಳ್ಳವನೇ ಭೂಮಿ ಒಡೆಯ"
ಕಾರವಾರ, ಡಿಸೆಂಬರ್ 17: ಕೇಂದ್ರದಲ್ಲಿ ಯುಪಿಯ ಸರ್ಕಾರ ಆಡಳಿತ ನಡೆೆಸುತ್ತಿದ್ದ ಸಂದರ್ಭದಲ್ಲಿ ಉಳುವವನೆ ಭೂಮಿಯ ಒಡೆಯ ಎಂಬ ನೀತಿಗಳಿದ್ದವು. ಆದರೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಬಂದ ಮೇಲೆ ಉಳ್ಳುವವರು ಮಾತ್ರ ಭೂಮಿಯ ಒಡೆಯರು ಎಂಬ ನೀತಿಗಳು ಬಂದಿವೆ ಎಂದು ಪರಿಷತ್ ವಿಪಕ್ಷ ನಾಯಕರಾದ ಬಿಕೆಹರಿಪ್ರಸಾದ್ ಲೇವಡಿ ಮಾಡಿದ್ದಾರೆ.
ಕಾರವಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭೂಮಿ ಇಲ್ಲದವರಿಗೆ ಭೂಮಿ ನೀಡುವುದರ ಬದಲಾಗಿ ಬಡವರ ಬಳಿ ಇರುವ ಸಾಗುವಳಿ ಭೂಮಿಯನ್ನು ಬಿಜೆಪಿ ಸರ್ಕಾರವು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದರು. ಈ ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ್ ನಾಯ್ಕ್ ವಕೀಲರಾದ ರವೀಂದ್ರ ನಾಯ್ಕ, ಎಸ್.ಕೆ.ಭಾಗವತ, ಪುಷ್ಪಾ ನಾಯ್ಕ ಇದ್ದರು.
ದೇಶದ ಅರಣ್ಯವಾಸಿಗಳಿಗೆ ಭೂ ಒಡೆತನದ ಹಕ್ಕನ್ನು ನೀಡದೆ, ಯುಪಿಎ ಸರ್ಕಾರದ ಅವಧಿಯಲ್ಲಿ ತಂದ ಕ್ರಾಂತಿಕಾರಿಕ ಅರಣ್ಯ ಹಕ್ಕು ಕಾಯ್ದೆಗಳನ್ನು ಮೋದಿ ಸರ್ಕಾರವು ದುರ್ಬಲಗೊಳಿಸಿದೆ ಎಂದು ಪರಿಷತ್ ವಿಪಕ್ಷ ನಾಯಕರಾದ ಬಿಕೆಹರಿಪ್ರಸಾದ್ ಕಿಡಿ ಕಾರಿದ್ದಾರೆ.

ಅರಣ್ಯ ಹಕ್ಕುಗಳ ಕಾಯ್ದೆ ಬಗ್ಗೆ ಉಲ್ಲೇಖಿಸಿದ ಹರಿಪ್ರಸಾದ್
ಭಾರತದಲ್ಲಿ 2006ರ ಅರಣ್ಯ ಹಕ್ಕುಗಳ ಕಾಯ್ದೆಯ ಪ್ರಕಾರ ಬಡ ಜನರಿಗೆ, ಅರಣ್ಯವಾಸಿಗಳಿಗೆ, ಬುಡಕಟ್ಟು ಸಮುದಾಯಗಳಿಗೆ ಭೂಮಿಯ ಹಕ್ಕನ್ನು ಹೊಂದುವ ಹಕ್ಕಿದೆ. ಯುಪಿಎ ಕಾಂಗ್ರೆಸ್ ಅವಧಿಯಲ್ಲಿ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ (ಅರಣ್ಯ ಹಕ್ಕು ಕಾಯ್ದೆ(ಎಫ್ಆರ್ಎ)ಯನ್ನು ಜಾರಿಗೆ ತರಲಾಗಿತ್ತು. ಆದಿವಾಸಿಗಳು ಮತ್ತು 75 ವರ್ಷಗಳಿಗಿಂತ ಹೆಚ್ಚು ಅಥವಾ ಮೂರು ತಲೆಮಾರಿಗಿಂತ ಹೆಚ್ಚು ಅರಣ್ಯದಲ್ಲಿ ವಾಸಿಸುತ್ತಿರುವ ಬುಡಕಟ್ಟು ಮತ್ತು ಬುಡಕಟ್ಟುಯೇತರ ಅರಣ್ಯವಾಸಿಗಳ ಅರಣ್ಯ ಹಕ್ಕುಗಳನ್ನು ಈ ಕಾಯ್ದೆ ಎತ್ತಿಹಿಡಿದಿದೆ. ಆದರೆ ಮೋದಿ ಸರ್ಕಾರ ಕಾಯ್ದೆಗಳನ್ನು ತಿದ್ದುಪಡಿ ಮಾಡಿ, ದುರ್ಬಲಗೊಳಿಸುವ ಮೂಲಕ ಬಾಬಾ ರಾಮದೇವ್, ಅದಾನಿ, ಅಂಬಾನಿಯಂತವರಿಗೆ ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ನೀಡಿದೆ ಎಂದು ದೂಷಿಸಿದರು.

ಅರಣ್ಯಭೂಮಿ ಮೇಲೆ ಹೆಚ್ಚು ಅವಲಂಬಿತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯವಾಸಿಗಳು, ಬುಡಕಟ್ಟು ಸಮುದಾಯಗಳು ಅರಣ್ಯಭೂಮಿಯ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಸುಮಾರು ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ, ಬಿಜೆಪಿ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈ ಬಾರಿ ಅಧಿವೇಶನದಲ್ಲಿ ಅರಣ್ಯ ಭೂ ಒತ್ತುವಳಿದಾರರ ಸಮಸ್ಯೆಯನ್ನು ಚರ್ಚೆ ಮಾಡಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಬಂದರೆ ವಿಶೇಷವಾಗಿ ಈ ಭಾಗದ ಜನರಿಗೆ ನ್ಯಾಯ ದೊರಕಿಸುವ ಹಕ್ಕುಗಳನ್ನು ನೀಡುವ ಪ್ರಯತ್ನ ಮಾಡುತ್ತೇವೆ ಎಂದು ಬಿಕೆ ಹರಿಪ್ರಸಾದ್ ಭರವಸೆ ನೀಡಿದರು.

ಕಾಂಗ್ರೆಸ್ ಎಂದಿಗೂ ಉಗ್ರ ಚಟುವಟಿಕೆಗೆ ಬೆಂಬಲಿಸಲ್ಲ
'ಭಯೋತ್ಪಾದನೆ ವಿರುದ್ಧ ಕಾಂಗ್ರೆಸ್ ನಿರಂತರ ಹೋರಾಟ ನಡೆಸಿರುವ ಪಕ್ಷವಾಗಿದ್ದು, ಉಗ್ರ ಚಟುವಟಿಕೆ ಎಂದಿಗೂ ಬೆಂಬಲಿಸಿಲ್ಲ'. ದೇಶದ್ರೋಹಿಗಳ ವಿರುದ್ಧ ಹೋರಾಡಿದ್ದಕ್ಕೆ ಮಹಾತ್ಮ ಗಾಂಧೀಜಿ ಅವರನ್ನು ಕಳೆದುಕೊಂಡೆವು. ಭಯೋತ್ಪಾದನೆ ವಿರುದ್ದ ಹೋರಾಡಿದ್ದಕ್ಕಾಗಿಯೇ ಇಂದಿರಾ ಗಾಂಧಿ ಹಾಗೂ ಐಕ್ಯತೆಗಾಗಿ ರಾಜೀವ್ ಗಾಂಧಿ ಜೀವ ತೆತ್ತಿದ್ದಾರೆ. ಆದರೂ ಕಾಂಗ್ರೆಸ್ ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುತ್ತಿದೆ. ಬ್ರಿಟಿಷರ ಬೂಟು ನೆಕ್ಕಿದ ಜನರಿಂದ ನಾವು ಪಾಠ ಕಲಿಯಬೇಕಿಲ್ಲ. ಕಂದಹಾರ ವಿಮಾನ ಅಪಹರಣದಲ್ಲಿ ನಡೆದ ಭಯೋತ್ಪಾದನಾ ಘಟನೆಯ ಆರೋಪಿಗೆ ಎಲ್ ಕೆ ಅಡ್ವಾಣಿ ಕ್ಲೀನ್ ಚೀಟ್ ನೀಡಿದರು. ಈ ಭಯೋತ್ಪಾದಕರಿಗೆ ಪರವಾಗಿ ಯಾರಿದ್ದರು ಎಂದು ದೇಶದ ಜನ ಮರೆತಿಲ್ಲ ಎಂದು ತಿರುಗೇಟು ನೀಡಿದರು.

ಈಶ್ವರಪ್ಪ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ
ಪೊಲೀಸರ ತನಿಖೆಗೂ ಮೊದಲೇ ನಾಗಪುರ ಯುನಿವರ್ಸಿಟಿಯಲ್ಲಿ ಸರ್ಟಿಫಿಕೇಟ್ ಬರುತ್ತದೆ. ಮಂಗಳೂರು ಪೊಲೀಸರು ಘಟನೆಗೆ ಬಗ್ಗೆ ತನಿಖೆಯೇ ಪ್ರಾರಂಭ ಮಾಡಿರಲಿಲ್ಲ, ಆಗಲೇ ಬಿಜೆಪಿ ನಾಯಕರು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಲು ಈಶ್ವರಪ್ಪನವರ ವಂಶಪೂರ್ತಿ ಹತ್ತು ಸಲ ಹುಟ್ಟಿದರೂ ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಜನರು ಕಟ್ಟಿರುವಂತದ್ದು, ನಾಗಪುರದವರಲ್ಲ. ನಾಯಕ್ ಆಪರೇಷನ್ ಕಾಂಗ್ರೆಸ್ ಪಕ್ಷ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಒಪ್ಪಿ ಯಾರಾದರೂ ಬರಬಹುದು. ಕಳ್ಳತನದಿಂದ ಬಿಜೆಪಿಯವರು ಶಾಸಕರನ್ನು ಕದ್ದು ಹೋಗಿದ್ದು, ಈಗ ಅವರಿಗೆ ಭ್ರಮನಿರಸನವಾಗಿ ವಾಪಾಸ್ ಬರುತ್ತಿದ್ದಾರೆ.
ಕರ್ನಾಟಕಕಕ್ಕೆ ವಿಶ್ವಗುರು, ಸುಳ್ಳಿನ ಸರದಾರ ನರೇಂದ್ರ ಮೋದಿ ಬಂದಷ್ಟು ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗುತ್ತದೆ. ಗಡಿಪಾರದ ಗೃಹ ಸಚಿವ ಅಮಿತ್ ಶಾ ಬಂದಷ್ಟು ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ. ಬಿಜೆಪಿಯವರು ಗುಜರಾತ್ ಮಾದರಿಯೇ ಚುನಾವಣೆ ಎದುರಿಸಲಿ, ನಾವು ಸಿದ್ದರಾಗಿದ್ದೇವೆ ಎಂದು ಸವಾಲು ಹಾಕಿದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications