ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿ ಮೋದಿ ಕರೆ
ಬೆಂಗಳೂರು, ಏಪ್ರಿಲ್ 11; ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.
ಭಾನುವಾರ ಯಡಿಯೂರಪ್ಪಗೆ ಕರೆ ಮಾಡಿದ್ದ ಪ್ರಧಾನಿ ಮೋದಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದರು. ರಾಜ್ಯ ಕೈಗೊಂಡ ಕ್ರಮಗಳ ಬಗ್ಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಯಡಿಯೂರಪ್ಪ ಟ್ವೀಟ್ನಲ್ಲಿ ಮಾಹಿತಿ ನೀಡಿದ್ದಾರೆ.

ಮೈಕ್ರೋಕಂಟೈನ್ಮೆಂಟ್ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆಯನ್ನು ನೀಡಿದ್ದಾರೆ. ಗುರುವಾರ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೋದಿ ಸಭೆಯನ್ನು ನಡೆಸಿದ್ದರು.
ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ರವರೊಂದಿಗೆ ಇಂದು ಮಾತನಾಡಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ರಾಜ್ಯದ ಕ್ರಮಗಳ ಬಗ್ಗೆ ಪ್ರಧಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ, ಮೈಕ್ರೋಕಂಟೈನ್ಮೆಂಟ್ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದ್ದಾರೆ.
— B.S. Yediyurappa (@BSYBJP) April 11, 2021
ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಶನಿವಾರ 6,955 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 61,653.
ಕರ್ನಾಟಕ ಸರ್ಕಾರ ಕೋವಿಡ್ ಸೋಂಕು ಹೆಚ್ಚಿರುವ ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ-ಮಣಿಪಾಲ, ಬೀದರ್, ಕಲಬುರಗಿ ಮತ್ತು ತುಮಕೂರು ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಘೋಷಣೆ ಮಾಡಿದೆ.
ಏಪ್ರಿಲ್ 10ರ ಶನಿವಾರದಿಂದ ಏಪ್ರಿಲ್ 20ರ ತನಕ ರಾತ್ರಿ ಕರ್ಫ್ಯೂ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ತನಕ ಜಾರಿಯಲ್ಲಿರುತ್ತದೆ. ಬೆಂಗಳೂರು ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications