"ಸುಧರ್ಮಾ" ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ನಿಧನಕ್ಕೆ ಸಂಸ್ಕೃತದಲ್ಲಿ ಶೋಕ ಸಂದೇಶ ಕಳುಹಿಸಿದ ಪ್ರಧಾನಿ
ನವದೆಹಲಿ, ಜುಲೈ 03: ವಿಶ್ವದ ಏಕೈಕ ಸಂಸ್ಕೃತ ದೈನಿಕ ಎಂಬ ಹೆಗ್ಗಳಿಕೆ ಪಡೆದಿರುವ "ಸುಧರ್ಮಾ" ಪತ್ರಿಕೆ ಸಂಪಾದಕ ಕೆ.ವಿ. ಸಂಪತ್ ಕುಮಾರ್ ಅಯ್ಯಂಗಾರ್ (64) ಅವರು ಜೂನ್ 30ರಂದು ವಿಧಿವಶರಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಸಂಸ್ಕೃತ ಭಾಷೆಯಲ್ಲಿ ಶೋಕ ಸಂದೇಶ ಕಳುಹಿಸಿದ್ದಾರೆ.
ಶುಕ್ರವಾರ ಸಂಸ್ಕೃತ ಭಾಷೆಯಲ್ಲಿ ಶೋಕ ಸಂದೇಶ ಕಳುಹಿಸಿರುವ ಪ್ರಧಾನಿ ಮೋದಿ ಅವರು, ಶ್ರೀಮತಿ ಜಯಲಕ್ಷ್ಮಿ ಮಹೋದಯೇ ಎಂದು ಪತ್ರ ಆರಂಭಿಸಿದ್ದಾರೆ.

ಸ್ನೇಹಶೀಲ ವ್ಯಕ್ತಿತ್ವದ ಸಂಪತ್ ಕುಮಾರ್ ಅವರು ಸಂಸ್ಕೃತ ಭಾಷೆಯ ಪ್ರಚಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಸಂಸ್ಕೃತ ಎಲ್ಲರಿಗೂ ತಲುಪುವಂತಾಗಬೇಕೆಂಬ ಉದ್ದೇಶದಿಂದ ಅವರು ಪಟ್ಟ ಶ್ರಮ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಮೋದಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸಂಪತ್ ಕುಮಾರ್ ಅವರ ನಿಧನದ ವಿಷಯ ತಿಳಿದು ಅತ್ಯಂತ ದುಃಖವಾಯಿತು. ಸರಳ, ಸ್ನೇಹಶೀಲ ವ್ಯಕ್ತಿತ್ವದ ಶ್ರೀಮಂತ ಹೃದಯ ಅವರದ್ದು. ಸಂಸ್ಕೃತ ಸುದ್ದಿಪತ್ರಿಕೆ "ಸುಧರ್ಮಾ"ಗಾಗಿ ಅವರು ಶ್ರಮಿಸಿದರು. ಸಂಸ್ಕೃತ ಭಾಷೆಯ ಬಗ್ಗೆ ಅವರಿಗಿದ್ದ ಪ್ರೀತಿಗೆ ಇದು ಸಾಕ್ಷಿ ಎಂದಿದ್ದಾರೆ.
ಹೊಸ ತಲೆಮಾರಿನಲ್ಲಿ ಸಂಸ್ಕೃತ ಪ್ರೀತಿ ಬೆಳೆಯಬೇಕು ಎಂದು ಅವರು ಶ್ರಮಿಸಿದರು. ಅವರ ಈ ಮರಣ ಸಂಸ್ಕೃತ ಜಗತ್ತಿಗೆ ಆದ ಬಹು ದೊಡ್ಡ ನಷ್ಟ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
"ಸಂಪತ್ ಕುಮಾರ್ ಅವರು ನಮ್ಮ ಜೊತೆ ಇಲ್ಲ. ಆದರೆ ಅವರಿಂದ ನಮಗೆಲ್ಲಾ ದೊರೆತಿರುವ ಸಂಸ್ಕಾರ ಹಾಗೂ ಜೀವನ ಮೌಲ್ಯಗಳು ಎಲ್ಲರೊಂದಿಗೆ ಇರುತ್ತವೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಆಪ್ತರಿಗೆ ಈ ದುಃಖ ಸಹಿಸುವ ಶಕ್ತಿ ಬರಲಿ" ಎಂದು ಹೇಳಿದ್ದಾರೆ.
ಕಳೆದ ನಾಲ್ಕು ದಶಕಗಳಿಂದ ಸುಧರ್ಮಾ ಪತ್ರಿಕೆ ಮುನ್ನಡೆಸಿದ್ದ ಸಂಪತ್ ಕುಮಾರ್, 2019ರಲ್ಲಿ ಪದ್ಮಶ್ರೀ ಪುರಸ್ಕೃತರಾಗಿದ್ದರು. ಮೈಸೂರಿನಲ್ಲಿ ಅವರು ನೆಲೆಸಿದ್ದರು. ಸಂಸ್ಕೃತ ಭಾಷೆ ಉಳಿವಿಗೆ ಶ್ರಮಿಸಿದ್ದ ಇವರ ಸಂಸ್ಕೃತ ಸೇವೆ ಗುರುತಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ನೀಡಿ ಗೌರವಿಸಿತ್ತು. ಜೂನ್ 30ರ ಮಧ್ಯಾಹ್ನ ಸಂಸ್ಕೃತ ಪತ್ರಿಕೆಯ ಕೆಲಸದಲ್ಲಿರುವಾಗಲೇ ತೀವ್ರ ಹೃದಯಾಘಾತದಿಂದ ಸಂಪತ್ ಕುಮಾರ್ ಸಾವನ್ನಪ್ಪಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications