SCO Summit India: ಪಾಕಿಸ್ತಾನಕ್ಕೆ ಭಯೋತ್ಪಾದಕರ ಮೇಲೆ ಲವ್: ಪಾಕ್ ಪ್ರಧಾನಿ ಎದುರಲ್ಲೇ ಪಾಕಿಸ್ತಾನದ ಮಾನ ಹರಾಜು ಹಾಕಿದ ಮೋದಿ!
ನವದೆಹಲಿ: ಭಾರತಕ್ಕಿಂದು ಐತಿಹಾಸಿಕ ದಿನ, ಹೇಗೆಂದರೆ 'ಶಾಂಘೈ ಸಹಕಾರ ಸಂಘಟನೆ' ಸಭೆಯ ಅಧ್ಯಕ್ಷತೆಯನ್ನ ಭಾರತ ಇದೇ ಮೊದಲ ಬಾರಿ ವಹಿಸಿಕೊಂಡಿದ್ದು, ಈ ಮಹತ್ವದ ಸಭೆಯಲ್ಲಿ ಪ್ರಧಾನಿ ಮೋದಿ ಮಾತನಾಡಿದರು. ಆದರೆ ಇದೇ ಸಭೆಯಲ್ಲಿ ಭಾಗವಹಿಸಿದ್ದ ಪಾಕಿಸ್ತಾನ ಪ್ರಧಾನಿಗೆ ಶಾಕ್ ಕೊಟ್ಟರು. ಪಾಕಿಸ್ತಾನ ಹೆಸರು ಹೇಳದೆ 'ಭಯೋತ್ಪಾದಕರಿಗೆ ಬೆಂಬಲ ನೀಡುವ ದೇಶ' ಎಂದು ಪ್ರಧಾನಿ ಮೋದಿ ಸರಿಯಾಗೇ ತಿರುಗೇಟು ಕೊಟ್ಟಿದ್ದಾರೆ.
ಹೌದು, ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಮುಗಿಸಿ ಬಂದ ಬಳಿಕ ಇಡೀ ಜಗತ್ತು ಇಂದು ಮತ್ತೊಮ್ಮೆ ಭಾರತದ ಕಡೆ ತಿರುಗಿ ನೋಡಿದೆ. 'ಶಾಂಘೈ ಸಹಕಾರ ಸಂಘಟನೆ' ಶೃಂಗಸಭೆ ಹಿನ್ನೆಲೆಯಲ್ಲಿ ಪ್ರಪಂಚವೇ ಕಾಯುತ್ತಿತ್ತು. ಅಂದುಕೊಂಡಂತೆ ಸಭೆ ಆರಂಭವಾಗಿ, ಸಭೆಯ ಅಧ್ಯಕ್ಷತೆ ವಹಿಸಿದ್ದ ಪಿಎಂ ಮೋದಿ ಮಾತು ಆರಂಭಿಸಿದರು. ಆಗ ರಷ್ಯಾ ಅಧ್ಯಕ್ಷ ಪುಟಿನ್, ಚೀನಾ ಅಧ್ಯಕ್ಷ ಜಿನ್ಪಿಂಗ್ ಸೇರಿದಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಪಾಕಿಸ್ತಾನದ ಭಯೋತ್ಪಾದಕ ಪ್ರೀತಿ ಬಗ್ಗೆ ಪ್ರಧಾನಿ ಮೋದಿ ನೇರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಭಾಷಣದ ಸಂಪೂರ್ಣ ಮಾಹಿತಿ ಇಲ್ಲಿದೆ.

ಉಗ್ರವಾದ ಸಹಿಸುವ ಮಾತೇ ಇಲ್ಲ!
ಅಂದಹಾಗೆ ಇಡೀ ಜಗತ್ತೇ 'ಶಾಂಘೈ ಸಹಕಾರ ಸಂಘಟನೆ' ಸಭೆ ಮೇಲೆ ಕಣ್ಣಿಟ್ಟಿರುವಾಗಲೇ ಉಗ್ರರಿಗೆ ಖಡಕ್ ಸಂದೇಶ ಕಳುಹಿಸಿದ್ದಾರೆ ಪ್ರಧಾನಿ ಮೋದಿ. ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದಕರ ಪೋಷಕ ಎಂದು ಕರೆದ ಪ್ರಧಾನಿ, ನಂತರ ಉಗ್ರರಿಗೆ ಶಾಸ್ತಿ ಕಾದಿರುತ್ತದೆ ಎಂಬ ಸಂದೇಶ ಕೊಟ್ಟರು. ಅಲ್ಲದೆ ಭಾರತ ನಿರಂತರವಾಗಿ ಭಯೋತ್ಪಾದನೆ ವಿರುದ್ಧ ತನ್ನ ಹೋರಾಟ ಮುಂದುವರಿಸಿದೆ. ಆದರೆ ಕೆಲವು ದೇಶಗಳು ಗಡಿಯಾಚನೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿವೆ ಹಾಗೂ ಅದನ್ನೇ ಅಸ್ತ್ರವಾಗಿ ಬಳಸುತ್ತಿವೆ. ಶಾಂಘೈ ಸಹಕಾರ ಶೃಂಗಸಭೆ ಭಯೋತ್ಪಾದನೆ ಪೋಷಿಸುವ ದೇಶವನ್ನು ಖಂಡಿಸುತ್ತದೆ. ನಾವು ಇದನ್ನ ಸಹಿಸುವ ಮಾತೇ ಇಲ್ಲ ಎಂದರು ಪ್ರಧಾನಿ ಮೋದಿ. ಈ ಮೂಲಕ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಉಗ್ರ ಪೋಷಕ ಪಾಕ್ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ ಪ್ರಧಾನಿ.
#WATCH | Prime Minister Narendra Modi at the Shanghai Cooperation Organization (SCO), says "Terrorism is a threat to regional and global peace. We will have to fight against terrorism...Some countries use cross-border terrorism as an instrument of their policies and give shelter… pic.twitter.com/qOjYt3Juo5
— ANI (@ANI) July 4, 2023
ಸಭೆಯಲ್ಲಿ ಯಾರೆಲ್ಲಾ ಭಾಗವಹಿಸಿದ್ದರು?
ಪಾಶ್ಚಿಮಾತ್ಯ ರಾಷ್ಟ್ರಗಳ ಪ್ರಭಾವಕ್ಕೆ ಪ್ರತಿಯಾಗಿ 'ಶಾಂಘೈ ಸಹಕಾರ ಸಂಘಟನೆ' 2001ರಲ್ಲಿ ರಚನೆಯಾಗಿತ್ತು. ಈ ಸಂಘಟನೆಯಲ್ಲಿ ಭಾರತ, ಚೀನಾ, ಪಾಕಿಸ್ತಾನ, ರಷ್ಯಾ, ಕಜಕಸ್ತಾನ, ತಜಿಕಿಸ್ತಾನ, ಉಜ್ಬೆಕಿಸ್ತಾನ ಸೇರಿದಂತೆ ಕಿರ್ಗಿಸ್ತಾನ ಸದಸ್ಯ ರಾಷ್ಟ್ರಗಳಾಗಿವೆ. ಈ ಬಾರಿ ಭಾರತ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಅಧ್ಯಕ್ಷತೆ ವಹಿಸಿದೆ. ಈ ವರ್ಚ್ಯುಯಲ್ ಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್, ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಕಜಕಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ಉಜ್ಬೇಕಿಸ್ತಾನ ದೇಶಗಳ ಮುಖ್ಯಸ್ಥರು ಭಾಗಿಯಾಗಿದ್ದರು. ಈ ವೇಳೆ ಭಯೋತ್ಪಾದಕರಿಗೆ ಬೆಂಬಲ ನೀಡುವ ಪಾಕಿಸ್ತಾನದ ಮಾನ ಹರಾಜು ಹಾಕಿದ್ದಾರೆ ಪ್ರಧಾನಿ.

ಉಗ್ರ ಪೋಷಕ ಪಾಕಿಸ್ತಾನಕ್ಕೆ ಮುಖಭಂಗ!
ಪಾಶ್ಚಿಮಾತ್ಯ ದೇಶಗಳು & ಚೀನಾ-ರಷ್ಯಾ ನಡುವೆ ಕಿತ್ತಾಟ ನಡೆಯುತ್ತಲೇ ಇರುತ್ತದೆ. ಹೀಗಾಗಿ ಅತ್ತ ಅಮೆರಿಕ ಹಾಗೂ ಇತ್ತ ರಷ್ಯಾ ಭಾರತವನ್ನು ತಮ್ಮತ್ತ ಸೆಳೆಯಲು ಪ್ರಯತ್ನ ಮಾಡುತ್ತಲೇ ಇರುತ್ತವೆ. ಪರಿಸ್ಥಿತಿ ಹೀಗಿದ್ದಾಗ ಭಾರತ ಯಾರ ಜೊತೆಗೂ ದ್ವೇಷ ಕಟ್ಟಿಕೊಳ್ಳದೆ ಹೊಂದಾಣಿಕೆ ಮಾಡಿಕೊಂಡು ಸಾಗುತ್ತಿದೆ. ಹೀಗೆ ಪಿಎಂ ಮೋದಿ ಇತ್ತೀಚೆಗೆ ಅಮೆರಿಕ ಪ್ರವಾಸ ಕೈಗೊಂಡರು. ಈ ಬೆಳವಣಿಗೆ ಜಗತ್ತಿನ ಗಮನ ಸೆಳೆದಿತ್ತು. ಹಾಗೇ ರಷ್ಯಾ ಮತ್ತು ಚೀನಾ ಕೂಡ ಭಾರತ ಹಾಗೂ ಅಮೆರಿಕ ಸಂಬಂಧದ ಮೇಲೆ ಕಣ್ಣಿಟ್ಟಿವೆ. ಹೀಗಾಗಿ ಪ್ರಧಾನಿ ಮೋದಿ ಅಮೆರಿಕಗೆ ಭೇಟಿ ನೀಡಿದ ಕೆಲ ದಿನಗಳ ನಂತರ, ಶಾಂಘೈ ಸಹಕಾರ ಸಂಘಟನೆ ಸಭೆ ಅಧ್ಯಕ್ಷತೆ ವಹಿಸಿರುವುದು ವಿಶೇಷ. ಇದೇ ಸಭೆಯಲ್ಲಿ ಪಾಕಿಸ್ತಾನಕ್ಕೂ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ ಪ್ರಧಾನಿ ಮೋದಿ, ಇದರ ಜೊತೆಗೆ ಪಿಎಂ ಮೋದಿ ಹೇಳಿಕೆಯಿಂದ ಪಾಕಿಸ್ತಾನಕ್ಕೆ ಮುಖಭಂಗವಾಗಿದೆ.
ಶಾಂಘೈ ಶೃಂಗಸಭೆ ಮತ್ತೊಂದು ವಿಶೇಷತೆಗೆ ಸಾಕ್ಷಿಯಾಯಿತು. ಭಾರತ ಮತ್ತು ಚೀನಾ ಮಧ್ಯೆ ಗಡಿ ಫೈಟ್ ನಡೆಯುವಾಗಲೇ ಎರಡು ದೇಶದ ನಾಯಕರು ಒಂದೇ ಕಡೆ ಸೇರಿದ್ದಾರೆ. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಜಿನ್ಪಿಂಗ್ ಒಟ್ಟಿಗೆ ಭಾಗವಹಿಸಿದ್ದರು. ಆದ್ರೆ ಚೀನಾ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿದ್ದು, ಈ ಸಭೆಯಲ್ಲಿ ಪಾಕಿಸ್ತಾನ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಹೀಗೆ ಉಗ್ರರಿಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನಕ್ಕೆ ಚಳಿ ಬಿಡಿಸಿದ್ದಾರೆ. ಆದರೂ ಪಾಕಿಸ್ತಾನ ತನ್ನ ಚಾಳಿ ಬಿಡುವ ಯಾವುದೇ ಲಕ್ಷಣ ಕಾಣುತ್ತಿಲ್ಲ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ












Click it and Unblock the Notifications