ಕಾಂಗ್ರೆಸ್ ಪಕ್ಷದ ಮೇಲೆ ಜನತೆಗೆ ನಂಬಿಕೆ ಇಲ್ಲ : ಮೋದಿ
ಬೆಂಗಳೂರು, ಅಕ್ಟೋಬರ್ 29 : 'ಕರ್ನಾಟಕದ ಜನರು ಚುನಾವಣೆಗೂ ಮೊದಲೇ ವಿಕಾಸ ಪಥವನ್ನು ಸೇರಲು ಕಾತರರಾಗಿದ್ದಾರೆ. ಕರ್ನಾಟಕದವೂ ಅಭಿವೃದ್ಧಿ ಪಥದಲ್ಲಿ ಸಾಗಲಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಸೌಂದರ್ಯಲಹರೀ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಮೋದಿ
ಭಾನುವಾರ ಮಧ್ಯಾಹ್ನ ಧರ್ಮಸ್ಥಳದ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಲವು ಬಿಜೆಪಿ ನಾಯಕರು ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು.
Happy to be here in Bengaluru and to see so many of you. Karnataka seems to have made up its mind & supports politics of development: PM
— BJP Karnataka (@BJP4Karnataka) October 29, 2017
ವಿಮಾನ ನಿಲ್ದಾಣದ ಹೊರಗೆ ಆಯೋಜಿಸಿದ್ದ ಸಮಾವೇಶದಲ್ಲಿ ಮೋದಿ ಪಾಲ್ಗೊಂಡು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದ ಉದ್ದಕ್ಕೂ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. 'ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ನಂಬಿಕೆ ಇಲ್ಲ' ಎಂದು ಟೀಕಿಸಿದರು.
Yesterday's statement of a Congress leader on Kashmir clearly shows how the party feels on surgical strikes and the bravery of our army: PM
— narendramodi_in (@narendramodi_in) October 29, 2017
ಚಿತ್ರಗಳು : ಧರ್ಮಸ್ಥಳದಲ್ಲಿ ಪ್ರಧಾನಿ ನರೇಂದ್ರ ಮೋದಿ
* ಕಾಶ್ಮೀರಕ್ಕಾಗಿ ದೇಶದ ಎಲ್ಲಾ ರಾಜ್ಯದ ಜನರು ಬಲಿದಾನ ನೀಡಿದ್ದಾರೆ. ದೇಶಕ್ಕಾಗಿ ಬಲಿಯಾದವರ ವಿಚಾರದಲ್ಲಿ ರಾಜಕೀಯ ಮಾಡುವುದು ಎಷ್ಟು ಸರಿ?. ಅಂಥವರಿಂದ ದೇಶ ಅಭಿವೃದ್ಧಿಯಾಗುವುದಿಲ್ಲ ಎಂದರು.
Why are Congress leaders lending their voice to those who want Azadi in Kashmir. This is an insult to our brave soldiers: PM @narendramodi
— narendramodi_in (@narendramodi_in) October 29, 2017
ವೀರೇಂದ್ರ ಹೆಗ್ಗಡೆ ಕಾರ್ಯಗಳನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ
* ಭಾರತದ ಶಿಸ್ತು, ಸಂಯಮ, ಧೈರ್ಯವನ್ನು ಡೋಕ್ಲಾಂ ಘಟನೆಯಿಂದ ವಿಶ್ವವೇ ನೋಡಿದೆ. ಕಾಂಗ್ರೆಸ್ ಡೋಕ್ಲಾಂ ಬಗ್ಗೆ ಸುಳ್ಳು ಸುದ್ದಿಯನ್ನು ಹಬ್ಬಿಸಿತ್ತು. ಕಾಂಗ್ರೆಸ್ ಪಕ್ಷ ತನ್ನ ಪ್ರತಿ ಹೇಳಿಕೆಗೂ ದೇಶದ ಜನರಿಗೆ ಉತ್ತರ ನೀಡಬೇಕಾಗಿದೆ
Congress is disconnected with the aspirations of our country: PM @narendramodi addresses a welcome programme at Bengaluru airport
— narendramodi_in (@narendramodi_in) October 29, 2017