ಬೀದರ್ : ಕಾಂಗ್ರೆಸ್ ಕಾಲೆಳೆದು ಚಪ್ಪಾಳೆ ಗಿಟ್ಟಿಸಿದ ಮೋದಿ
ಬೀದರ್, ಅಕ್ಟೋಬರ್ 29 : ಪ್ರಧಾನಿ ನರೇಂದ್ರ ಮೋದಿ ಬೀದರ್ಗೆ ಆಗಮಿಸಿದ್ದಾರೆ. ನೆಹರು ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶ ಉದ್ದೇಶಿಸಿ ಅವರು ಮಾತನಾಡುತ್ತಿದ್ದಾರೆ.
In Pics : ಧರ್ಮಸ್ಥಳದಲ್ಲಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಬೀದರ್-ಕಲಬುರಗಿ ರೈಲು ಮಾರ್ಗವನ್ನು ಉದ್ಘಾಟಿಸಿದರು. ನಂತರ ನೆಹರು ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಮೋದಿ ಸಮಾವೇಶದಲ್ಲಿ ಹೇಳಿದ್ದೇನು?
* ಬೀದರ್-ಕಲಬುರಗಿ ರೈಲು ಮಾರ್ಗ ಉದ್ಘಾಟನೆ ಮಾಡಿದ್ದು ಸಂತಸ ತಂದಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಈ ಯೋಜನೆಯನ್ನು ಘೋಷಣೆ ಮಾಡಲಾಗಿತ್ತು.
Development projects stalled since the Congress rule are being completed now. Congress only believed in 'Atkana', Latkana' & 'Bhatkana': PM pic.twitter.com/vP5EemRh4R
— ANI (@ANI) October 29, 2017
* ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, 'ಪ್ರಚಾರಕ್ಕಾಗಿ ಅವರು ಜನಪರ ಯೋಜನೆಗಳನ್ನು ಘೋಷಣೆ ಮಾಡಿದರು. ಆದರೆ, ಅದನ್ನು ಜಾರಿಗೆ ತರಲಿಲ್ಲ' ಎಂದು ಟೀಕಿಸಿದರು.
* ನಾನು ಯಡಿಯೂರಪ್ಪ ಅವರನ್ನು ಅಭಿನಂದಿಸುತ್ತೇನೆ. ರೈಲು ಮಾರ್ಗ ಪೂರ್ಣವಾಗಲು ಅವರು ಸಾಕಷ್ಟು ಶ್ರಮಿಸಿದ್ದಾರೆ ಎಂದು ಮೋದಿ ಹೇಳಿದರು
When we're fighting corruption,Congress has become insensitive. When Gujarat was flooded, their ministers were sitting in Bengaluru: PM Modi pic.twitter.com/Z7qbMVv9XS
— ANI (@ANI) October 29, 2017
* ನಾನು ಕೆಂಪುಕೋಟೆ ಮೇಲೆ ಘೋಷಣೆ ಮಾಡಿದ್ದೆ. 18000 ಮನೆಗಳಿಗೆ 1000 ದಿನದಲ್ಲಿ ವಿದ್ಯುತ್ ಸೌಲಭ್ಯ ಒದಗಿಸುತ್ತೇನೆ ಎಂದು. ಇನ್ನೂ ಸಾವಿರ ದಿನ ಕಳೆದಿಲ್ಲ 15000 ಮನೆಗಳಿಗೆ ವಿದ್ಯುತ್ ಸೌಲಭ್ಯ ಸಿಕ್ಕಿದೆ.
* ಒಬ್ಬ ಶ್ರೀಮಂತನಿಗೆ ಅನಾರೋಗ್ಯವಾದರೆ ಸರ್ಕಾರದ ಅಗತ್ಯವಿಲ್ಲ. ಆದರೆ, ಬಡವನಿಗೆ ಅನಾರೋಗ್ಯವಾದರೆ ಸರ್ಕಾರದ ಅಗತ್ಯವಿದೆ. ಬಡವರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿಯಾಗಿದೆ. ಅದಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.
* ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೂರು ವರ್ಷಗಳಲ್ಲಿ 26 ಸಾವಿರ ಕಿ.ಮೀ.ರೈಲು ಮಾರ್ಗ ನಿರ್ಮಾಣವಾಗಿದೆ.
Infrastructure plays a vital role in taking the Nation to greater heights. India needs the best railways, roadways, airways & waterways: PM
— narendramodi_in (@narendramodi_in) October 29, 2017
* ರೈತರಿಗೆ ಸರಿಯಾದ ಪರಿಹಾರ ಸಿಗುತ್ತಿರಲಿಲ್ಲ. ಹಣ ರೈತರನ್ನು ತಲುಪುವ ಮೊದಲೇ ಅದನ್ನು ಲೂಟಿ ಮಾಡಲಾಗುತ್ತಿತ್ತು. ಆದರೆ, ನಮ್ಮ ಸರ್ಕಾರ ಬ್ಯಾಂಕ್ ಖಾತೆಗೆ ಹಣವನ್ನು ನೇರವಾಗಿ ಹಾಕುವ ಮೂಲಕ ಲೂಟಿಯನ್ನು ತಪ್ಪಿಸಿದೆ.
* ನಾವು ಯಾವುದೇ ಯೋಜನೆಯನ್ನು ಘೋಷಣೆ ಮಾಡಿ ಸುಮ್ಮನೆ ಕೂರಲಿಲ್ಲ. ಅದನ್ನು ಪರಿಣಾಮಗಾರಿಯಾಗಿ ಜಾರಿಗೆ ತಂದೆವು. ಜನರಿಗೆ ಅದು ತಲುಪುವಂತೆ ನೋಡಿಕೊಂಡೆವು.
ಮೋದಿ ಭಾಷಣದ ವಿಡಿಯೋ
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications