Get Updates
Get notified of breaking news, exclusive insights, and must-see stories!

ಎಚ್‌. ಡಿ. ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಮೋದಿ

ಬೆಂಗಳೂರು, ಮೇ 18: ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡರು ಮೇ 18ರ ಶನಿವಾರ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಶುಭಾಶಯಗಳನ್ನು ಕೋರಿದ್ದಾರೆ.

ಎಚ್. ಡಿ. ದೇವೇಗೌಡರು ಈಗಾಗಲೇ ಮಾಧ್ಯಮಗಳ ಮೂಲಕ, "ಕಾರಣಾಂತರಗಳಿಂದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾವುದೇ ಆಚರಣೆ ಮಾಡದೇ ಇರುವುದರಿಂದ ಎಲ್ಲರೂ ತಾವಿದ್ದಲ್ಲಿಯೇ ಹಾರೈಸಿ" ಎಂದು ಮನವಿ ಮಾಡಿದ್ದರು.

PM Narendra Modi Extends Birthday Greetings To HD Deve Gowda

ಶುಭಾಶಯ ಕೋರಿದ ಮೋದಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಜೆಡಿಎಸ್ ವರಿಷ್ಠ ಎಚ್‌. ಡಿ. ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, "ಎಚ್. ಡಿ. ದೇವೇಗೌಡರಿಗೆ ಅವರ ಜನ್ಮದಿನದಂದು ಶುಭ ಹಾರೈಕೆಗಳು. ಅವರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಾದ್ಯಂತ ಗೌರವಾನ್ವಿತರಾಗಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಿಚಾರದಲ್ಲಿ ಅವರ ಬದ್ಧತೆ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು ಹಾರೈಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, "ಹಿರಿಯ ಮುತ್ಸದ್ದಿ ನಾಯಕರು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್. ಡಿ. ದೇವೇಗೌಡರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಶುಭ ಕೋರಿದ್ದಾರೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, 'ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ ಎಚ್. ಡಿ. ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಅವರ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರಾಟಗಳು ನಾಡಿನ ಹಾಗೂ ದೇಶದ ಇತಿಹಾಸದಲ್ಲಿ ಮಹತ್ವದ ಹೆಜ್ಜೆಗುರುತುಗಳು. ವಯಸ್ಸು ಲೆಕ್ಕಿಸದ ಅವರ ರಾಜಕೀಯ ಕ್ರಿಯಾಶೀಲತೆ ಭವಿಷ್ಯದ ರಾಜಕಾರಣಿಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ, ಗ್ರಾಮೀಣ ಜನರ ಬಗೆಗಿನ ಅವರ ನೈಜ ಕಾಳಜಿಯ ಕೊಡುಗೆಗಳು ಮಣ್ಣಿನ ಮಕ್ಕಳ ಪಾಲಿಗೆ ಚೈತನ್ಯ ತುಂಬಿದ ಸಮೃದ್ಧತೆಯ ಸಂಕೇತಗಳು. ಭಗವಂತನು ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ನಾಡು ಹಾಗೂ ದೇಶದ ಬೆಳವಣಿಗೆಗೆ ಅವರು ಅತ್ಯಮೂಲ್ಯ ಮಾರ್ಗದರ್ಶನ ನೀಡುವಂತಾಗಲಿ ಎಂದು ಪ್ರಾರ್ಥಿಸುವೆ' ಎಂದು ಕೋರಿದ್ದಾರೆ.

ಮಾಜಿ ಮುಖ್ಯಮಂತ್ರಿ, ಎಚ್. ಡಿ. ದೇವೇಗೌಡರ ಪುತ್ರ ಎಚ್. ಡಿ. ಕುಮಾರಸ್ವಾಮಿ, 'ಭಾರತ ಗಣರಾಜ್ಯದ 11ನೇ ಪ್ರಧಾನಮಂತ್ರಿಗಳು, Janata Dal Secular ರಾಷ್ಟ್ರೀಯ ಅಧ್ಯಕ್ಷರು, ನನ್ನ ಪೂಜ್ಯ ತಂದೆಯವರಾದ ಶ್ರೀ ಡಾ. ಹೆಚ್. ಡಿ. ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ಅವರಿಗೆ ಇನ್ನಷ್ಟು ಆಯುರಾರೋಗ್ಯ ನೀಡಲಿ ಹಾಗೂ ಅವರ ಮಾರ್ಗದರ್ಶನ, ಜನಸೇವೆ ದೀರ್ಘಕಾಲ ಮುಂದುವರಿಯಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಶುಭಾಶಯ ಕೋರಿದ್ದಾರೆ.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಾತನ ಫೋಟೋವನ್ನು ಹಾಕಿ, 'ಈ ದೇಶ ಕಂಡ ಅಪರೂಪದ ಜನನಾಯಕ, ರೈತನಾಯಕ, ಕನ್ನಡ ನಾಡಿನ ಅಗ್ರಮಾನ್ಯ ನೇತಾರ, ಹಿರಿಯ ಮುತ್ಸದ್ದಿ, ನೀರಾವರಿ ಹರಿಕಾರ, ಮಾಜಿ ಪ್ರಧಾನಮಂತ್ರಿಗಳು, ನನ್ನ ಆದರ್ಶ ಮತ್ತು ನನ್ನ ಪ್ರೀತಿಯ ತಾತ, ಸನ್ಮಾನ್ಯ ಶ್ರೀ ದೇವೇಗೌಡರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನನ್ನಂತ ಯುವಕರಿಗೆ ಸ್ಪೂರ್ತಿ ಹಾಗೂ ಮಾರ್ಗದರ್ಶಕರಾಗಿರುವ ತಮಗೆ ಭಗವಂತ ಇನ್ನಷ್ಟು ಆಯಸ್ಸು ,ಆರೋಗ್ಯ ನೀಡಿ ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಶುಭ ಹಾರೈಸಿದ್ದಾರೆ.

ಮಾಜಿ ಸಚಿವ, ಬಿಜೆಪಿ ನಾಯಕ ಡಾ. ಸಿ. ಎನ್. ಅಶ್ವತ್ಥ ನಾರಾಯಣ, 'ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಹಾಗೂ ನಮ್ಮೆಲ್ಲರ ಮಾರ್ಗದರ್ಶಕರಾದ ಮಣ್ಣಿನ ಮಗ ಶ್ರೀ ಹೆಚ್. ಡಿ. ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಈ ನಾಡಿನ ಅಭ್ಯುದಯಕ್ಕಾಗಿ ಸದಾ ತುಡಿಯುವ ನಿಮ್ಮಲ್ಲಿರುವ ಉತ್ಸಾಹ ಹಾಗೂ ಅನುಭವ ನಮ್ಮಂತಹ ಅನೇಕರಿಗೆ ಸದಾ ಪ್ರೇರಣೆ. ಉತ್ತಮ ಆರೋಗ್ಯ ಹಾಗೂ ಆಯಸ್ಸಿಗಾಗಿ ಕಾಲ ಭೈರವನಲ್ಲಿ ಪ್ರಾರ್ಥಿಸುವೆ' ಎಂದು ಶುಭಾಶಯ ಕೋರಿದ್ದಾರೆ.

ಕಾರ್ಯಕರ್ತರಿಗೆ ಕರೆ: ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿರುವ ರಾಜ್ಯಸಭಾ ಸದಸ್ಯ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡರು ಪಕ್ಷದ ಕಾರ್ಯಕರ್ತರಿಗೆ ಕರೆಯೊಂದನ್ನು ನೀಡಿದ್ದಾರೆ.

"ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಪಕ್ಷದ ಸಂಘಟನೆಗೆ ಪ್ರತಿಯೊಬ್ಬರು ಬದ್ಧತೆಯಿಂದ ಕರ್ತವ್ಯ ನಿರ್ವಹಣೆ ನಿರ್ವಹಿಸಬೇಕು' ಎಂದು ಕೋರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+