ಕನ್ನಡದ ಕಂದ ಶಾಲ್ಮಲಿಯ ಸಂಗೀತ ಪ್ರತಿಭೆಗೆ ಮನಸೋತ ಪ್ರಧಾನಿ ಮೋದಿ
ಕರ್ನಾಟಕ ವಿಧಾನಸಭೆಯ ಚುನಾವಣೆಯಲ್ಲಿ ರಾಜಕೀಯ ನಾಯಕರು ಬಿಡುವಿಲ್ಲದೇ ಓಡಾಡುವ ಸಂದರ್ಭದಲ್ಲಿ ಕೂಡ ಇಲ್ಲೊಬ್ಬ ಪುಟ್ಟ ಬಾಲಕಿ ತನ್ನ ಸಂಗೀತ ಪ್ರತಿಭೆಯಿಂದ ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆದಿದ್ದಾಳೆ. ಮಾತ್ರವಲ್ಲದೆ, ತನ್ನ ಅಸಾಧಾರಣ ಪ್ರತಿಭೆಗೆ ಮೋದಿಯಿಂದ ಮೆಚ್ಚುಗೆ ಪಡೆದುಕೊಂಡು ಭಾರಿ ಸುದ್ದಿಯಾಗಿದ್ದಾಳೆ.
ಕರ್ನಾಟಕದ ಬಾಲಕಿ ಶಾಲ್ಮಲಿ ಎನ್ನುವ ಪುಟ್ಟ ಹುಡುಗಿ ಕೆಎಸ್ ನರಸಿಂಹ್ವಾಮಿಯವರ ಹಾಡಿಗೆ ಸಿಂಥನೈಸರ್ ನುಡಿಸುವ ವಿಡಿಯೋವನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ನರೇಂದ್ರ ಮೋದಿ, "ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು. ಅನನ್ಯ ಪ್ರತಿಭೆ ಹಾಗು ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು!" ಎಂದು ಹೇಳಿದ್ದಾರೆ.

ಅನಂತಕುಮಾರ್ ಎನ್ನುವವರು ಈ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, "ಇದನ್ನು ಸಾಕಷ್ಟು ಬಾರಿ ಕೇಳಿದ್ದೇನೆ, ಹುಟ್ಟಿನಿಂದಲೇ ಎಂತಹ ಪ್ರತಿಭೆ" ಎಂದು ಹೇಳಿದ್ದರು. ಅನಂತಕುಮಾರ್ ಟ್ವೀಟ್ ಅನ್ನು ಹಂಚಿಕೊಂಡು ಮೋದಿ ಟ್ವೀಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ.
ಪಲ್ಲವಗಳ ಪಲ್ಲವಿಯಲಿ ಎಂಬ ಕವಿತೆಯ ಸಾಲುಗಳೊಂದಿಗೆ ವಿಡಿಯೋ ಆರಂಭವಾಗುತ್ತದೆ. ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬರು ಅದನ್ನು ಹಾಡಿದರೆ, ಶಾಲ್ಮಲಿ ಅದನ್ನು ಸಿಂಥನೈಸರ್ ನಲ್ಲಿ ನುಡಿಸುತ್ತಾಳೆ, ನಂತರ ಪುಟ್ಟ ಶಾಲ್ಮಲಿ ಕೂಡ ಅದಕ್ಕೆ ದನಿಗೂಡಿಸುತ್ತಾಳೆ. ಈ ವಿಡಿಯೋ ಈಗ ನೋಡುಗರ ಮನಗೆದ್ದಿದೆ.
ಈ ವಿಡಿಯೋ ಪ್ರತಿಯೊಬ್ಬರ ಮುಖದ ಮೇಲೆ ಮುಗುಳುನಗೆ ತರಿಸಬಹುದು. ಅನನ್ಯ ಪ್ರತಿಭೆ ಹಾಗು ಸೃಜನಶೀಲತೆ. ಶಾಲ್ಮಲಿಗೆ ಶುಭಹಾರೈಕೆಗಳು! https://t.co/KvxJPJepQ4
— Narendra Modi (@narendramodi) April 25, 2023
ಪಲ್ಲವಗಳ ಪಲ್ಲವಿಯಲಿ ಕವಿತೆಯನ್ನು ಕನ್ನಡದ ಹೆಸರಾಂತ ಕವಿ ಕೆ ಎಸ್ ನರಸಿಂಹ ಸ್ವಾಮಿಯವರು ಬರೆದಿದ್ದಾರೆ. ಮೂಲತಃ ಹಾಡನ್ನು ಶ್ರೀಮತಿ ರತ್ನಮಾಲಾ ಪ್ರಕಾಶ್ ಹಾಡಿದ್ದಾರೆ. ಈ ವಿಡಿಯೋವನ್ನು ಸಾವಿರಾರು ಜನ ಹಂಚಿಕೊಂಡಿದ್ದು, ಲಕ್ಷಾಂತರ ಮಂದಿ ವೀಕ್ಷಣೆ ಮಾಡಿದ್ದಾರೆ.
ಟ್ವೀಟ್ ಮಾಡಿರುವ ವ್ಯಕ್ತಿಯೊಬ್ಬರು, "ನಿಮ್ಮಲ್ಲಿ ಹಲವರು ಈ ಕವಿತೆಯ ಸಾಹಿತ್ಯದ ಬಗ್ಗೆ ಕೇಳಿದ್ದೀರಿ. ಇದು ಕನ್ನಡದಲ್ಲಿದೆ. ಖ್ಯಾತ ಕವಿ ಕೆ.ಎಸ್. ನರಸಿಂಗಸ್ವಾಮಿಯವರು ಬರೆದಿದ್ದಾರೆ. ಗೂಗಲ್ ಅನುವಾದಕವನ್ನು ಬಳಸಿಕೊಂಡು, ಅರ್ಥ ತಿಳಿದುಕೊಳ್ಳಬಹುದು" ಎಂದು ಹೇಳಿದ್ದಾರೆ.
ಮತ್ತೊಬ್ಬ ಟ್ವಿಟರ್ ಬಳಕೆದಾರರು ಇದನ್ನು ಮೆಚ್ಚಿಕೊಂಡಿದ್ದು, "ಆ ಹುಡುಗಿ ತುಂಬಾ ಮುಗ್ದಳು ಅವಳ ತಾಯಿಯ ಧ್ವನಿಯೂ ಕೂಡ ಅಷ್ಟೇ ಮೋಡಿ ಮಾಡುತ್ತದೆ" ಎಂದು ಹೇಳಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications