PM Vishwakarma Yojana: Rs 3 ಲಕ್ಷ ಸಹಾಯಧನಕ್ಕಾಗಿ ಈಗಲೇ ಅರ್ಜಿ ಹಾಕಿ: ಯೋಜನೆಯ ಪ್ರಯೋಜನಗಳ ಪಟ್ಟಿ
ಬೆಂಗಳೂರು, ಮೇ 18: ಕೇಂದ್ರ ಸರ್ಕಾರವು ದೇಶದ ಗ್ರಾಮೀಣ ಮತ್ತು ನಗರ ಪ್ರದೇಶದ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಲಗಾರರನ್ನು ಸದೃಢಗೊಳಿಸಲು 'ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ' ಜಾರಿಗೆ ತಂದಿದೆ. ಯೋಜನೆಯ ಲಾಭ ಪಡೆಯಲು ವಿಶ್ವಕರ್ಮ ಕುಲಕರ್ಮಿಗಳಿಂದ ಅರ್ಜಿಗಳು ಆಹ್ವಾನಿಸಲಾಗಿದೆ.
ಕರ್ನಾಟಕದಲ್ಲಿರುವ ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಂದ ಯೋಜನೆ ಲಾಭ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಗತ್ಯ ದಾಖಲಾತಿಗಳ ಸಮೇತ ಅರ್ಜಿ ಸಲ್ಲಿಸಬೇಕು. ಹಾಗಾದರೆ ಯಾವೆಲ್ಲ ದಾಖಲೆಗಳು, ಬೇಕು, ಯೋಜನೆಯ ಪ್ರಯೋಜನಗಳು, ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿ ಇಲ್ಲಿದೆ.

ಅರ್ಹ ಕರಕುಶಲಕರ್ಮಿಗಳು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಆಧಾರ್ ಗೆ ಲಿಂಕ್ ಇರುವ ಮೊಬೈಲ್ ನಂಬರ್, ರೇಷನ್ ಕಾರ್ಡ್ ದಾಖಲೆ ಜತೆ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ರೇಷನ್ ಕಾರ್ಡ್ ಇಲ್ಲದಿದ್ದರೆ ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಒಯ್ಯಬೇಕು.
ನಿಮ್ಮ ಹತ್ತಿರದ ಬೆಂಗಳೂರು, ಒನ್ ಗ್ರಾಮ ಒನ್, ಡಿಜಿಟಲ್ ಸೇವಾ ಕೇಂದ್ರಗಳಿಗೆ ಭೇಟಿ ಕೊಟ್ಟು ಈಗಲೇ ಅರ್ಜಿಸಲ್ಲಿಸಿ ಮೂರು ಲಕ್ಷ ರೂ.ವರೆಗೆ ಸಹಾಯಧನ ಪಡೆಯಬಹುದು. ಇದರೊಂದಿಗೆ ಇತರ ಪ್ರಯೋಜನಗಳ ಪಟ್ಟಿ, ಯಾರೆಲ್ಲ ಅರ್ಹರು ಎಂದು ತಿಳಿಯಿರಿ.

ಪಿಎಂ ವಿಶ್ವಕರ್ಮ ಯೋಜನೆಯ ಪ್ರಯೋಜನ
* ವಿಶ್ವಕರ್ಮ ಸಹೋದರ ಮತ್ತು ಸಹೋದರಿಯರಿಗೆ ರೂ. 3 ಲಕ್ಷದವರೆಗೆ ಆಧಾರರಹಿತ ಸಾಲ ವಿತರಣೆ.
* ರೂ. 15 ಸಾವಿರವರೆಗಿನ ಟೂಲ್ ಕಿಟ್. ಕೌಶಲ್ಯಾಭಿವೃದ್ಧಿಗೆ 5 ದಿನಗಳ ತರಬೇತಿ ಮತ್ತು ದೈನಂದಿನ ರೂ. 500 ಸಂಭಾವನೆ.
* ಸಂಪೂರ್ಣ ತಯಾರಾದ ಉತ್ಪನ್ನಗಳಿಗೆ ಕ್ವಾಲಿಟಿ ಸರ್ಟಿಫಿಕೇಶನ್, ಬ್ರಾಂಡಿಂಗ್ ಮತ್ತು ಜಾಹೀರಾತು ಮಾದರಿಯಲ್ಲಿ ಮಾರ್ಕೆಟಿಂಗ್ ನೆರವು.
* ಬಡ್ಡಿ ದರ 5%ನಂತೆ ಮೊದಲ ಬಾರಿಗೆ ರೂ 1ಲಕ್ಷ ಸಾಲ, 18 ತಿಂಗಳೊಳಗೆ ರೂ 1ಲಕ್ಷ ಹಿಂತಿರುಗಿದರೆ ಇನ್ನೂ 2 ಲಕ್ಷ ಸಾಲ ವಿತರಣೆ ಸೌಲಭ್ಯ.
18 ರೀತಿಯ ಕುಶಲಕರ್ಮಿಗಳಿಗೆ ಲಾಭ
ಮರ ಕೆಲಸಗಾರರು, ಗಾರೆ ಕೆಲಸಗಾರರು, ವಿಗ್ರಹ ತಯಾರಕರು, ಅಕ್ಕಸಾಲಿಗರು, ಕ್ಷೌರಿಕರು, ಅಗಸರು ಕಲ್ಲು ಒಡೆಯುವವರು, ಟೈಲರ್ಳು, ಬುಟ್ಟಿ/ಚಾಪೆ/ಕಸಪೊರಕೆ ತಯಾರಕರು,ಹೂವಿನ ಹಾರ ತಯಾರಕರು, ಮೀನು ಬಲೆ ತಯಾರಕರು, ದೋಣಿ ತಯಾರಕರು, ಕಮ್ಮಾರರು, ಕುಂಬಾರರು, ಚರ್ಮಕಾರರು, ಆಯುಧ ತಯಾರಕರು, ಕಬ್ಬಿಣದ ಉಪಕರಣಗಾರರು, ಆಟಿಕೆ ತಯಾರಕರು ಈ ಯೋಜನೆಯ ಲಾಭ ಪಡೆಯಬಹುದು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications