ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆಶಿ ಹಾಗೂ ಆಪ್ತರಿಗೆ ಇಡಿ ಕೇಸಲ್ಲಿ ಕೋರ್ಟಿನಿಂದ ಸಿಹಿ ಕಹಿ ಸುದ್ದಿ

|
Google Oneindia Kannada News

Recommended Video

DK Shivakumar : ಡಿಕೆಶಿ ಹಾಗೂ ಆಪ್ತರಿಗೆ ಕೋರ್ಟಿನಿಂದ ಸಿಹಿ ಕಹಿ ಸುದ್ದಿ

ಬೆಂಗಳೂರು, ಸೆ. 17: ಮನಿಲಾಂಡ್ರಿಂಗ್ ಕೇಸಿನಲ್ಲಿ ಜಾರಿ ನಿರ್ದೇಶನಾಲಯ ನೀಡಿರುವ ರದ್ದುಗೊಳಿಸಬೇಕು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ನಾಲ್ವರು ಆಪ್ತರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಅದರೆ ನಾಲ್ವರಿಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿ ಮಧ್ಯಂತರ ಆದೇಶ ಹೊರಡಿಸಲಾಗಿದೆ.

ಡಿ.ಕೆ.ಶಿವಕುಮಾರ್ ಅವರಿಗೆ ಸೇರಿರುವ ದೆಹಲಿಯ ಫ್ಲಾಟ್ ನಲ್ಲಿ ಸಿಕ್ಕ 8.69 ಕೋಟಿ ರು ಬಗ್ಗೆ ಪ್ರಶ್ನಿಸಲು ಇಡಿ ಮುಂದಾಗಿದ್ದು ಈ ಕುರಿತಂತೆ ಸಮನ್ಸ್ ನೀಡಲಾಗಿದೆ. ಸದ್ಯ ಇಡಿ ಬಂಧನದಲ್ಲಿರುವ ಡಿಕೆಶಿ ಅವರ ಜಾಮೀನು ಅರ್ಜಿ ವಿಚಾರಣೆಯೂ ದೆಹಲಿಯ ವಿಶೇಷ ನ್ಯಾಯಾಲಯದಲ್ಲಿ ಜಾರಿಯಲ್ಲಿದೆ.

ಡಿ.ಕೆ.ಶಿವಕುಮಾರ್ ಜಾಮೀನು ಪ್ರಯತ್ನ-2: ಸಿಗುವುದೇ ಯಶಸ್ಸು?ಡಿ.ಕೆ.ಶಿವಕುಮಾರ್ ಜಾಮೀನು ಪ್ರಯತ್ನ-2: ಸಿಗುವುದೇ ಯಶಸ್ಸು?

ಕರ್ನಾಟಕ ಹೈಕೋರ್ಟ್ ನಲ್ಲಿಂದು ನ್ಯಾ. ಅಭಯ್ ಎಸ್ ಓಕಾ ಅವರಿದ್ದ ಏಕಸದಸ್ಯ ಪೀಠವು ಡಿಕೆ ಶಿವಕುಮಾರ್ ಹೊರತುಪಡಿಸಿ ಉಳಿದ ನಾಲ್ವರಿಗೆ ಒಂದು ತಿಂಗಳವರೆಗೂ ಬಂಧನ ಮಾಡದಂತೆ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿ ಮಧ್ಯಂತರ ಆದೇಶ ನೀಡಿದೆ.

PMLA Case: HC rejects DK Shivakumar and others pleas to quash ED summons

ಆದರೆ ಸಮನ್ಸ್​ ಜಾರಿಯಲ್ಲಿರುವುದರಿಂದ ತನಿಖಾ ಸಂಸ್ಥೆ ವಿಚಾರಣೆಗಾಗಿ ಕರೆದರೆ, ವಿಚಾರಣೆ ಎದುರಿಸಿ, ತನಿಖೆಗೆ ಸಹಕರಿಸುವಂತೆ ಸಚಿನ್ ನಾರಾಯಣ್, ಸುನಿಲ್ ಶರ್ಮಾ, ಆಂಜನೇಯ, ಹನುಮಂತಯ್ಯ ಅವರಿಗೆ ಸೂಚಿಸಲಾಗಿದೆ.

English summary
PMLA Case: Karnataka High Court divisional bench today(Sept 17) rejected DK Shivakumar and others plea to quash ED summons but, provided interim protection accused for 4 weeks from arrest except DK Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X