POCSO Case: ಯಡಿಯೂರಪ್ಪ ಕೇಸ್ಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು?: ಸಿ ಟಿ ರವಿ ಪ್ರಶ್ನೆ
ಬೆಂಗಳೂರು, ಜೂನ್ 14: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಆ ಥರ ಏನೂ ನಡೆದಿಲ್ಲ ಎಂದು ಪೊಲೀಸರು ತಿಳಿಸಿ, ಬಿ ರಿಪೋರ್ಟ್ ಹಾಕುವ ಹಂತದಲ್ಲಿರುವಾಗ ಏಕಾಏಕಿ ಈ ಕೇಸಿಗೆ ಪರಕಾಯ ಪ್ರವೇಶ ಮಾಡಿ ಜೀವ ಕೊಟ್ಟವರು ಯಾರು? ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜಕೀಯ ಕಾರಣಕ್ಕೆ ಈ ಕೇಸ್ನ್ನು ಬಳಸುವ ಅನುಮಾನ ವ್ಯಕ್ತವಾಗಿದೆ. ಹಾಗಿಲ್ಲದೆ ಇದ್ದರೆ 3 ತಿಂಗಳ ಕಾಲ ಇಲ್ಲದ ಜೀವ ಈಗ ಯಾಕೆ ಬಂತು? ಈ ಕೇಸಿನ ಮೇಲೆ ಪರಕಾಯ ಪ್ರವೇಶ ಮಾಡಿದವರು ಯಾರು? ದೂರುದಾರೆಯು ಈ ಥರ 50ಕ್ಕೂ ಹೆಚ್ಚು ಗಣ್ಯರ ಮೇಲೆ ದೂರು ನೀಡಿದ್ದರು ಎಂದು ಗೃಹ ಸಚಿವರು ಸಾರ್ವಜನಿಕವಾಗಿ ಹೇಳಿದ್ದರು ಎಂದು ಗಮನ ಸೆಳೆದರು. 'ಮಾನಸಿಕವಾಗಿ ಸ್ವಲ್ಪ..' ಎಂದು ಹೇಳಿಕೆ ನೀಡಿದ್ದರು ಎಂದರು.

ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ದಾಖಲಾಗಿರುವ ದೂರಿಗೆ ಸಂಬಂಧಿಸಿ ಸರಕಾರದ ನಡೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮಾರ್ಚ್ 14ರಂದು ಅವರ ಮೇಲೆ ದೂರು ದಾಖಲಾಗಿತ್ತು. ಫೆಬ್ರವರಿ 2ರಂದು ಈ ಪ್ರಕರಣ ನಡೆದುದಾಗಿ ಆರೋಪಿಸಲಾಗಿದೆ. ಯಡಿಯೂರಪ್ಪ ಅವರು ಸಿಐಡಿ ಮುಂದೆ ಏಪ್ರಿಲ್ 12ರಂದು ಹಾಜರಾಗಿ ಹೇಳಿಕೆಯನ್ನೂ ನೀಡಿದ್ದರು ಎಂದು ತಿಳಿಸಿದರು.
ಇದೀಗ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಇವತ್ತು ಹೈಕೋರ್ಟ್ ಮುಂದೆ ಮೊಕದ್ದಮೆ ಬರಲಿದ್ದು, ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ ಎಂದು ಹೇಳಿದರು. ಯಡಿಯೂರಪ್ಪ ಅವರ ಮೇಲಿನ ಮೊಕದ್ದಮೆಯನ್ನು ರಾಜ್ಯದ ಕಾಂಗ್ರೆಸ್ ಸರಕಾರವು ರಾಜಕೀಯದ ದೃಷ್ಟಿಯಿಂದ ನೋಡುತ್ತಿದೆ ಎಂದು ಆರೋಪಿಸಿದರು.
ಗೃಹ ಸಚಿವರ ಅಂದಿನ ಹೇಳಿಕೆಗೂ ಇಂದಿನ ಹೇಳಿಕೆಗೂ ಬಹಳಷ್ಟು ವ್ಯತ್ಯಾಸ ಇದೆ. ಅವತ್ತು ಅವರು ದೂರುದಾರರ ವ್ಯಕ್ತಿತ್ವವನ್ನೇ ಅನಾವರಣಗೊಳಿಸಿದ್ದರು. ಇವತ್ತು ಅವರು, ಅಗತ್ಯ ಇದ್ದರೆ ಬಂಧಿಸುತ್ತೇವೆ ಎಂದಿದ್ದಾರೆ. ಸರಕಾರದ ನಿಲುವು ಬದಲಾಗಲು ಕಾರಣ ಏನು? ಲೋಕಸಭಾ ಚುನಾವಣೆಯ ಸೋಲು ಕಾರಣವೇ? ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರ ತವರು ಜಿಲ್ಲೆಯಲ್ಲೇ ಸೋತಿದ್ದು ಒಂದು ಕಾರಣ ಇರಬಹುದೇ? ಉಪ ಮುಖ್ಯಮಂತ್ರಿಯವರ ಸೋದರನ ಸೋಲಿನ ಆಘಾತ ಈ ರೀತಿ ನಿಲುವು ಬದಲಾಗಲು ಕಾರಣವೇ? ಎಂದು ಸಿ.ಟಿ.ರವಿ ಅವರು ಪ್ರಶ್ನಿಸಿದರು.
ಕೈಕೊಟ್ಟ ಗ್ಯಾರಂಟಿ ಇದಕ್ಕೆ ಕಾರಣವಾಯಿತೇ? ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿಯ ಹಗರಣ, ಅದರಿಂದ ಆಗಿರುವ ಮುಖಭಂಗ, ಆ ಲೂಟಿಯನ್ನು ಮುಚ್ಚಿ ಹಾಕಲು ಸಂಚು ನಡೆದಿದ್ದು, ಬಿಜೆಪಿ ಅದನ್ನು ಬಯಲಿಗೆ ಎಳೆದುದು, ಅದರಿಂದ ಸಚಿವ ರಾಜೀನಾಮೆ ಕೊಡಲು ಕಾರಣವಾದುದು- ಈ ಹತಾಶೆಯಿಂದ ಹೀಗೆ ಮಾಡುತ್ತಿರಬಹುದೇ? ರಾಹುಲ್ ಗಾಂಧಿ, ಸುರ್ಜೇವಾಲಾ ಒತ್ತಡ ಇದರ ಹಿಂದೆ ಇದೆಯೇ ಎಂದು ಅವರು ಕೇಳಿದರು.
ನಮ್ಮ ಮೇಲಿನ ಒಂದು ಸುಳ್ಳು ಆರೋಪ ಸಂಬಂಧಿತ ಕೇಸಿಗೆ ಸಿಎಂ, ಡಿಸಿಎಂ, ರಾಹುಲ್ ಗಾಂಧಿಯವರು ನ್ಯಾಯಾಲಯದ ಕಟಕಟೆಗೆ ಬಂದು ನಿಲ್ಲಬೇಕಾಯಿತು. ಶೇ 40 ಆರೋಪ ಸಾಬೀತು ಮಾಡಲು ಅವರಿಂದ ಅಸಾಧ್ಯ. ಅವರಿಗೆ ಶಿಕ್ಷೆ ಆಗುವ ಸಾಧ್ಯತೆಯೂ ಇದೆ. ಬಹುಶಃ ಆ ಕಾರಣಕ್ಕಾಗಿ ಹತಾಶೆಯಿಂದ ಯಡಿಯೂರಪ್ಪನವರ ಮೇಲೆ ರಾಜಕೀಯ ದುರುದ್ದೇಶದಿಂದ ಸೇಡು ತೀರಿಸಿಕೊಳ್ಳಬೇಕು ಅಥವಾ ಮಾನಸಿಕವಾಗಿ ಕುಗ್ಗಿಸಬೇಕೆಂದು ಈ ಸಂಚು ಮಾಡಿದ್ದಾರೇನೋ ಎಂದು ಅನಿಸಿಕೆ ವ್ಯಕ್ತಪಡಿಸಿದರು.
ಒಬ್ಬ ಪ್ರಭಾವಿ ಸಚಿವರು ಈ ಪ್ರಕರಣ ಜೀವ ಪಡೆಯಲು ಕಾರಣರಾಗಿದ್ದಾರೆ ಎಂಬ ಮಾಹಿತಿ ಕೂಡ ಅಧಿಕಾರಿಗಳ ಮೂಲಕ ಬಂದಿದೆ. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಲು ನಮ್ಮ ಅಡ್ಡಿ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ದುರುದ್ದೇಶದಿಂದ ಹೀಗೆ ಮಾಡಿದರೆ ಅದರ ಪರಿಣಾಮ ನಿಮಗೆ ತಿರುಗುಬಾಣ ಆಗಲಿದೆ ಎಂದು ಎಚ್ಚರಿಸಿದರು. ಇದರ ಪರಿಣಾಮವಾಗಿ ರಾಜಕೀಯ ಲಾಭ ಆಗದು; ರಾಜಕೀಯ ನಷ್ಟ ಆಗಲಿದೆ ಎಂದೂ ತಿಳಿಸಿದರು. ತಪ್ಪು ಮಾಡಿದರೆ ಭಯಪಡಬೇಕು. ತಪ್ಪೇ ಇಲ್ಲದಿದ್ದರೆ ಭಯ ಯಾಕೆ? ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆ ಸುತ್ತ ಶಾಮಿಯಾನ ಹಾಕಿ, 144ನೇ ಸೆಕ್ಷನ್ ವಿಧಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಪೊಲೀಸ್ ಇಲಾಖೆ ಮೇಲಿನ ಸಾರ್ವಜನಿಕರ ನಂಬಿಕೆಗೆ ಚ್ಯುತಿ ತರುವಂತಿದೆ. ದರ್ಶನ್ ಪ್ರಕರಣ, ರೇಣುಕಸ್ವಾಮಿ ಹತ್ಯೆ ಗಮನಿಸಿದರೆ, ಇಂಥ ಕಾಮೆಂಟ್ಗಳಿಗೆ ಹತ್ಯೆ ಮಾಡುವುದಾದರೆ ರಾಜಕಾರಣಿಗಳು ದಿನಕ್ಕೊಂದು ಹತ್ಯೆ ಮಾಡಬೇಕಾದೀತು ಎಂದು ಉತ್ತರ ಕೊಟ್ಟರು. ಇಂಥ ಕಾಮೆಂಟ್ ದಿನವೂ ಬರುತ್ತದೆ. ಸೋಷಿಯಲ್ ಮೀಡಿಯದಲ್ಲಿ ಅವ್ವ, ಹೆಂಡತಿ, ಅಜ್ಜಿ, ಮುತ್ತಜ್ಜಿ ವರೆಗೂ ಮಾತನಾಡಿದವರಿದ್ದಾರೆ. ಈ ಹತ್ಯೆ ಮನುಕುಲ ತಲೆ ತಗ್ಗಿಸುವ ವಿಚಾರ ಎಂದು ನುಡಿದರು.
ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ ಅವರು ಉಪಸ್ಥಿತರಿದ್ದರು.
-
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
IPL ವಿಐಪಿ ಟಿಕೆಟ್ ದುರ್ಬಳಕೆ ಆಗಿಲ್ಲ: ಶಾಸಕರ ಕುಟುಂಬಸ್ಥರು ಪಂದ್ಯ ನೋಡಿದರೆ ತಪ್ಪೇನು; ಪರಮೇಶ್ವರ್ ಪ್ರಶ್ನೆ -
Kerala Elections 2026: ಕೇರಳಂ ಚುನಾವಣಾ ಸಮೀಕ್ಷೆ: ಯುಡಿಎಫ್ಗೆ ಅಧಿಕಾರದ ಹಾದಿ ಸುಗಮ; ಎಲ್ಡಿಎಫ್ಗೆ ಹಿನ್ನಡೆ ಸಾಧ್ಯತೆ -
Viral Video: ತಮಿಳುನಾಡು ಚುನಾವಣೆ: ಹಸಿ ಸೊಪ್ಪು, ತರಕಾರಿ ತಿನ್ನುತ್ತಾ ಮತಯಾಚಿಸಿದ ಸ್ವತಂತ್ರ ಅಭ್ಯರ್ಥಿ ನಟ ಮನ್ಸೂರ್ ಅಲಿ ಖಾನ್ -
Bagalkot: ಬಾಗಲಕೋಟೆಯಲ್ಲಿ ಕಮಲದ ವಿಜಯೋತ್ಸವ ನಿಶ್ಚಿತ: ಪ್ರಹ್ಲಾದ್ ಜೋಶಿ ವಿಶ್ವಾಸ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ












Click it and Unblock the Notifications