ಲಾಕ್‌ಡೌನ್; ವಾಹನ ಬಳಕೆಗೆ ಷರತ್ತು ಬದ್ಧ ಅನುಮತಿ

ಬೆಂಗಳೂರು, ಮೇ 10; ಸೋಮವಾರದಿಂದ ಕರ್ನಾಟಕದಲ್ಲಿ 14 ದಿನಗಳ ಲಾಕ್‌ಡೌನ್ ಜಾರಿಗೆ ಬಂದಿದೆ. ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಮನೆಯ ಹತ್ತಿರ ಸಂಚಾರ ನಡೆಸಲು ವಾಹನ ಬಳಕೆ ಮಾಡಲು ಅನುಮತಿ ನೀಡಲಾಗಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಸೋಮವಾರ ಸಂಜೆ ಈ ಕುರಿತು ಟ್ವೀಟ್ ಮಾಡಿದೆ. ನಗರದಲ್ಲಿ ಮನೆಯ ಸುತ್ತಮುತ್ತಲೂ ತರಕಾರಿ, ದಿನಸಿ ತರಲು ವಾಹನ ಬಳಸಬಹುದು ಎಂದು ಟ್ವೀಟ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

ಗ್ರಾಮೀಣ ಭಾಗದಲ್ಲಿ ಅಂಗಡಿಗಳು ಇರುವ ಪ್ರದೇಶಕ್ಕೆ ವಾಹನದಲ್ಲಿ ಹೋಗಿ ಅಗತ್ಯ ವಸ್ತುಗಳನ್ನು ಖರೀದಿ ಮಾಡಬಹುದು ಎಂದು ತಿಳಿಸಲಾಗಿದೆ. ಅಗತ್ಯವಿದ್ದಾಗ ಮಾತ್ರ ಇದನ್ನು ಬಳಕೆ ಮಾಡಿ, ಎಲ್ಲೆಂದರಲ್ಲಿ ತಿರುಗಾಡಲು ಇದು ಲೈಸೆನ್ಸ್‌ ಅಲ್ಲ ಎಂದು ಟ್ವೀಟ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

Police Allowed Use Of Vehicle To Neighbour Hood Shop In The Time Of Lockdown

ಕರ್ನಾಟಕ ಸರ್ಕಾರ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದಾಗ ತರಕಾರಿ, ದಿನಸಿ ತರಲು ನಡೆದುಕೊಂಡೇ ಹೋಗಬೇಕು ಎಂದು ಷರತ್ತು ಹಾಕಿತ್ತು. ಸೋಮವಾರ ಹಲವು ವಾಹನಗಳನ್ನು ವಶಕ್ಕೆ ಪಡೆಯಲಾಗಿತ್ತು. ಇದಕ್ಕೆ ಭಾರೀ ಆಕ್ರೋಶವೂ ವ್ಯಕ್ತವಾಗಿತ್ತು.

ಹಳ್ಳಿಗಳಲ್ಲಿ ತರಕಾರಿ, ದಿನಸಿ ಹೊತ್ತು ಕಿ. ಮೀ.ಗಟ್ಟಲೇ ನಡೆಯಬೇಕು. ಸರ್ಕಾರದ ಮಾರ್ಗಸೂಚಿ ಜನಪರವಾಗಿಲ್ಲ ಎಂದು ಜನರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದರು. ಆದ್ದರಿಂದ ಪೊಲೀಸ್ ಮಹಾನಿರ್ದೇಶಕರು ಈ ಕುರಿತು ಟ್ವೀಟ್ ಮಾಡಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, "ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2-3 ಕಿ.ಮೀ.ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಗಳೇ? ಆಯಾಸ-ಪ್ರಯಾಸದಿಂದ ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ? ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ?" ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+