Social Media: ನಿಮ್ಮ ಸೋಷಿಯಲ್ ಮೀಡಿಯಾ ಮೇಲೆ ಪೊಲೀಸ್ ಕಣ್ಣು: ಹುಷಾರ್!
ನೀವು ಫೇಸ್ಬುಕ್, ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಮ್ನತಂಹ ಸೋಷಿಯಲ್ ಮೀಡಿಯಾಗಳನ್ನು ಬಳಸುತ್ತಿದ್ದರೆ. ಇನ್ಮುಂದೆ ಈ ಸೋಷಿಯಲ್ ಮೀಡಿಯಾವನ್ನು ಬಳಸುವ ಮುಂಚೆ ಎಚ್ಚರಿಕೆಯಿಂದ ಇರಿ. ಯಾಕೆಂದರೆ ರಾಜ್ಯ ಸರ್ಕಾರವು ಹೊಸ ಕಾನೂನನ್ನು ಜಾರಿ ಮಾಡಿದ್ದು. ಸೋಷಿಯಲ್ ಮೀಡಿಯಾದಲ್ಲಿ ನೀವು ಸಣ್ಣ ತಪ್ಪು ಮಾಡಿದರೂ ಸಂಕಷ್ಟ ಎದುರಾಗಲಿದೆ. ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಸಮೀರ್ ವಿಡಿಯೋ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಾಜ್ಯ ಸರ್ಕಾರದ ಹೊಸ ನಿಯಮ ಜಾರಿಗೆ ತಂದಿದೆ. ಇದು ಜನರ ಅಸಮಾಧಾನಕ್ಕೂ ಕಾರಣವಾಗಿದೆ. ಅಷ್ಟಕ್ಕೂ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಹೊಸ ನಿರ್ಧಾರವೇನು ಎನ್ನುವ ವಿವರ ಇಲ್ಲಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರವು ಸೋಷಿಯಲ್ ಮೀಡಿಯಾದ ಮೇಲೆ ಕಣ್ಣಿಡುವುದಕ್ಕೆ ಮುಂದಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲೂ ಸಾಮಾಜಿಕ ಜಾಲತಾಣ ನಿಗಾ ಘಟಕ ತೆಗೆಯುವುದಕ್ಕೆ ನಿರ್ಧರಿಸಲಾಗಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಗೃಹ ಸಚಿವ ಜಿ. ಪರಮೇಶ್ವರ್ ಅವರು, ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನದ ಉಭಯ ಸದನಗಳ ಕಾರ್ಯಕಲಾಪಗಳಲ್ಲಿ ಭಾಗವಹಿಸಿದೆ.

ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಹೆಚ್ಚು ಒತ್ತು ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲೂ ಸಾಮಾಜಿಕ ಜಾಲತಾಣ ನಿಗಾ ಘಟಕ ಸ್ಥಾಪಿಸಲಾಗಿದೆ ಎಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದೆ ಎಂದು ಹೇಳಿದ್ದಾರೆ.
ಸೈಬರ್ ಅಪರಾಧಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಪ್ರತ್ಯೇಕ ಘಟಕವನ್ನು ಸ್ಥಾಪಿಸಿ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಜಿಪಿ) ಹುದ್ದೆಯನ್ನು ಪ್ರತ್ಯೇಕವಾಗಿ ಸೃಷ್ಟಿ ಮಾಡಲಾಗಿದೆ. ಡಿಜಿ ಅವರ ಕೆಳಗೆ ಎಡಿಜಿಪಿ, ಐಜಿಪಿ ಹಾಗೂ 7 ಜನ ಎಸ್ಪಿಗಳು ಸೇರಿದಂತೆ, ಇತರೆ ಪೊಲೀಸ್ ಅಧಿಕಾರಿಗಳು ಕೆಲಸ ಮಾಡಲಿದ್ದಾರೆ. ಸೈಬರ್ ಅಪರಾಧಗಳ ಬಗ್ಗೆ ದೂರುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆ ಸೃಷ್ಟಿಸುವವರ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಿಕೊಂಡು ಕಾನೂನು ರೀತಿಯ ಕ್ರಮ ಕೈಗೊಂಡು ಸಾರ್ವಜನಿಕರ ನೆಮ್ಮದಿಯನ್ನು ಕಾಪಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಎಕ್ಸ್ (ಟ್ವೀಟರ್), ಇನ್ಸ್ಟಾಗ್ರಾಮ್, ಯೂಟ್ಯೂಬ್ ಚಾನೆಲ್ಗಳ ಮೇಲೆ ನಿಗಾವಹಿಸಲು ರಾಜ್ಯಾದ್ಯಂತ ಪ್ರತ್ಯೇಕ ಸಾಮಾಜಿಕ ಜಾಲತಾಣ ನಿಗಾ ಘಟಕಗಳನ್ನು ಜಿಲ್ಲಾ ಮಟ್ಟದಲ್ಲಿ ಹಾಗೂ ಪ್ರತಿ ಪೊಲೀಸ್ ಠಾಣೆಗಳಲ್ಲೂ ಪ್ರಾರಂಭಿಸಿ ಸೂಕ್ತ ತರಬೇತಿ ಪಡೆದ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದಿದ್ದಾರೆ. ಈ ಮೂಲಕ ಜನರ ಸೋಷಿಯಲ್ ಮೀಡಿಯಾದ ಮೇಲೆ ಕಣ್ಣಿರಿಸಲಾಗಿದೆ.
ಈ ಘಟಕವು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಯೂಟ್ಯೂಬ್ಗಳಲ್ಲಿ ಪ್ರಸಾರವಾಗುವ ಪ್ರಚೋದನಕಾರಿ ಸಂದೇಶಗಳ/ ಸುಳ್ಳು ಸುದ್ದಿಗಳ/ ದ್ವೇಷ ಭಾಷಣಗಳ ಮೇಲೆ ಸಮಾಜದ ಸಾಮರಸ್ಯ ಹಾಳು ಮಾಡುವಂತವರ ಮೇಲೆ ನಿರಂತರವಾಗಿ ನಿಗಾ ವಹಿಸಲಾಗುತ್ತಿದೆ. ಸುಳ್ಳು ಸುದ್ದಿಗಳ ಬಗ್ಗೆ ಕೆಎಸ್ಪಿ ಫ್ಯಾಕ್ಟ್ಚೆಕ್ ಆ್ಯಪ್ ಮೂಲಕ ಫ್ಯಾಕ್ಟ್ಚೆಕ್ ಮಾಡಿಸಿ ನೈಜ ಮಾಹಿತಿಯನ್ನು ಇಲಾಖೆಯ ಅಧಿಕೃತ ಜಾಲತಾಣದ ಮೂಲಕ ಹಂಚಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು.
ಈ ರೀತಿ ನಿಗಾ ವಹಿಸುವ ಸಂದರ್ಭದಲ್ಲಿ ಕಂಡುಬರುವ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವ ಪೋಸ್ಟ್ಗಳನ್ನು ಕೂಡಲೇ ಅಧಿಕಾರಿಗಳ ಹಾಗೂ ರಾಜ್ಯ ಸಾಮಾಜಿಕ ಜಾಲತಾಣ ನಿಗಾ ಘಟಕದ ಗಮನಕ್ಕೆ ತರಲಾಗುತ್ತದೆ. ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಪೊಲೀಸ್ ಇಲಾಖೆಯು ಯಾವುದೇ ಹೆಚ್ಚುವರಿ ಹಣವನ್ನು ಭರಿಸುತ್ತಿಲ್ಲ ಹಾಗೂ ನಿರ್ವಹಣೆಯನ್ನು ಖಾಸಗಿಯವರಿಗೂ ಸಹ ವಹಿಸಿರುವುದಿಲ್ಲ ಎಂದೂ ಅವರು ವಿವರಿಸಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications