ಜಿಎಸ್ಟಿ ಅಧಿಕಾರಿಗಳನ್ನೇ ಅಂಧರ್ ಮಾಡಿದ ಪೊಲೀಸ್: ಬರೋಬ್ಬರಿ 12 ಕೋಟಿ ರೂ. ವಶ
ಸಾಮಾನ್ಯವಾಗಿ ಜಿಎಸ್ಟಿ ಕಟ್ಟುವುದರಲ್ಲಿ ಮೋಸ ಮಾಡಿದವರನ್ನು ಬಂಧಿಸಲಾಗುತ್ತದೆ. ಆದರೆ, ಜಿಎಸ್ಟಿ ಅಧಿಕಾರಿಗಳನ್ನೇ ಬಂಧಿಸಿರುವುದು ಎಂದಾದರೂ ಕೇಳಿದ್ದೀರಾ.. ಇದೇ ಮೊದಲ ಬಾರಿ ಎನ್ನುವಂತೆ ಬೆಂಗಳೂರಿನಲ್ಲಿ ನಾಲ್ವರು ಜಿಎಸ್ಟಿ ಅಧಿಕಾರಿಗಳನ್ನು ಪೊಲೀಸರು ಅಂಧರ್ ಮಾಡಿದ್ದಾರೆ. ಅಲ್ಲದೇ ಇವರಿಂದ ಬರೋಬ್ಬರಿ 12 ಕೋಟಿ ರೂಪಾಯಿ ಮೊತ್ತವನ್ನು (11.50 ಕೋಟಿ) ವಶಪಡಿಸಿಕೊಂಡಿದ್ದಾರೆ. ಭಾರೀ ಮೊತ್ತದ ಹಣ ವಶಕ್ಕೆ ಪಡೆದಿರುವುದು ಹಾಗೂ ನಾಲ್ವರು ಜಿಎಸ್ಟಿ ಅಧಿಕಾರಿಗಳನ್ನೇ ಏಕೆ ಬಂಧಿಸಲಾಗಿದೆ ಎನ್ನುವ ವಿವರ ಇಲ್ಲಿದೆ.
ನಾವು ಜಿಎಸ್ಟಿ, ಇಡಿಯಿಂದ ಬಂದಿದ್ದೇವೆ. ನಿಮ್ಮ ಮೊಬೈಲ್ ಪೋನ್ಗಳನ್ನು ನಮಗೆ ಕೊಡಿ. ಕೂಡಲೇ ಕಾರಿನಲ್ಲಿ ಕುಳಿತುಕೊಳ್ಳಿ ಎಂದು ನಾಲ್ವರು ಜಿಎಸ್ಟಿ ಅಧಿಕಾರಿಗಳು ಜಿ.ಎಂ.ಪಾಳ್ಯದ ನಿವಾಸಿ ಹಾಗೂ ಆತನ ಸ್ನೇಹಿತನಿಗೆ ಚಿತ್ರ ಹಿಂಸೆ ನೀಡಿ ಹಣ ವಸೂಲಿ ಮಾಡಿದ್ದಾರೆ. ಈ ಹಣ ತರುವುದಕ್ಕೆ ತಡವಾಗಿದ್ದಕ್ಕೂ ಹಲ್ಲೆ ಮಾಡಿದ್ದಾರೆ. ಈ ಘಟನೆಯ ವಿವರ ಈ ರೀತಿ ಇದೆ.

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿ.ಎಂ.ಪಾಳ್ಯದ ನಿವಾಸಿಯೊಬ್ಬರು ನೀಡಿದ ದೂರಿನ ಮೇಲೆ ಈ ಪ್ರಕರಣ ಬೆಳಕಿಗೆ ಬಂದಿದೆ. ಮೋಸಕ್ಕೆ ಒಳಗಾದ ವ್ಯಕ್ತಿಯು ಬೆಂಗಳೂರಿನ ಜೀವನ್ ಭೀಮಾನಗರದಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈಚೆಗೆ ಬೆಳಿಗ್ಗೆ ಅವರ ಮನೆಗೆ ಅಪರಿಚಿತ ವ್ಯಕ್ತಿಗಳು ಅಕ್ರಮವಾಗಿ ಪ್ರವೇಶಿಸಿದ್ದಾರೆ. ಈ ರೀತಿ ಏಕಾಏಕಿ ಮನೆಗೆ ನುಗ್ಗಿದ ಸಂದರ್ಭದಲ್ಲಿ ದೂರು ನೀಡಿದ ವ್ಯಕ್ತಿ ಮತ್ತು ಅವರ ಸ್ನೇಹಿತರು ಮೂರು ಜನರಿದ್ದರು. ನಾವು ಜಿ.ಎಸ್.ಟಿ, ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು, ಮನೆಯಲ್ಲಿ ಇದ್ದವರ ಎಲ್ಲರ ಮೊಬೈಲ್ ಫೋನ್ಗಳನ್ನು ತೆಗೆದುಕೊಂಡಿದ್ದಾರೆ. ಅಲ್ಲದೇ ಬಲವಂತವಾಗಿ ಕಾರುಗಳಲ್ಲಿ ಕುರಿಸಿಕೊಂಡು ಅವರು ಕೆಲಸ ಮಾಡುವ ಕಂಪನಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲದೇ ಅಲ್ಲಿಯೂ ಹಲ್ಲೆ ಮಾಡಿ, ಪ್ರತಿಯೊಬ್ಬರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂಡಿಹಾಕಿದ್ದಾರೆ.
ಜಿಎಸ್ಟಿ ಅಧಿಕಾರಿಗಳು ಎಂದು ಹೇಳಿಕೊಂಡ ಅವರು 103 ಕೋಟಿ ರೂಪಾಯಿ ನೀಡುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ.
ಅಲ್ಲದೇ ಜಿ.ಎಸ್.ಟಿ ಅಧಿಕಾರಿಗಳು ಕಾರಿನಲ್ಲಿ ಬೆಂಗಳೂರಿನ ವಿವಿಧ ಜಾಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಪೋನ್ಗಳನ್ನು ಸ್ವೀಚ್ ಆಫ್ ಮಾಡಿಸಿದ್ದಾರೆ. ಈ ಜಿಎಸ್ಟಿ ಅಧಿಕಾರಿಗಳು ಕೇಳಿದ ಹಣ ಕೊಡುವುದಕ್ಕೆ ತಡವಾಗಿದ್ದಕ್ಕೂ ಅವರ ಮೇಲೆ ಹಲ್ಲೆ ಮಾಡಲಾಗಿದೆ.
ಪ್ರಕರಣದಲ್ಲಿ ಜಿಎಸ್ಟಿ ಅಧಿಕಾರಿಗಳ ಬಂಧನವೇಗೆ ?
ನಾಲ್ವರು ಜಿಎಸ್ಟಿ ಅಧಿಕಾರಿಗಳು ಎಂದು ಹೇಳಿಕೊಂಡವರು ಹಣ ವಸೂಲಿ ಮಾಡಿ ಹೋಗುವ ಸಂದರ್ಭದಲ್ಲಿ ಮಹಜರ್ (ಡಾಕ್ಯೂಮೆಂಟ್) ದಾಖಲಾತಿಗಳನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ. ಈ ಸಂಬಂಧ ದೂರು ದಾಖಲಾಗುತ್ತಿದ್ದಂತೆಯೇ ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸಿಸಿಬಿ ತನಿಖೆಗೆ ನೀಡಲಾಗಿದೆ. ತನಿಖೆಯನ್ನು ಮುಂದುವರಿಸಿದ ಸಿಸಿಬಿ ಪೊಲೀಸರು, ಈ ಪ್ರಕರಣದ ತನಿಖೆಯಲ್ಲಿ ಆಗಿರುವ ಲೋಪ ಹಾಗೂ ಮೋಸವನ್ನು ಪತ್ತೆ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ Director General of GST Intelligence, Bengaluru Zonal Unit (Central GST) ಘಟಕದ ಅಧಿಕಾರಿಗಳು ಯಾವುದೇ ಅನುಮೋದನೆ ಇಲ್ಲದೆ, ದಾಳಿ ಮಾಡಿರುವುದು ಧೃಡಪಟ್ಟಿದೆ. ಅಲ್ಲದೇ ಜಿ.ಎಸ್.ಟಿ ಅಧಿಕಾರಿಗಳು ಹಲವು ವಸ್ತುಗಳನ್ನು ಕಾನೂನು ಬಾಹಿರವಾಗಿ ಜಪ್ತಿ ಮಾಡಿರುವುದು ಬೆಳಕಿಗೆ ಬಂದಿದೆ. ಇನ್ನೂ ಗಂಭೀರವಾದ ವಿಷಯವೆಂದರೆ, ಯಾವುದೇ ಅನುಮತಿ ಇಲ್ಲದೇ 2 ದಿನಗಳ ಕಾಲ ಅಮಾಯಕರನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ ಈ ಹಿನ್ನೆಲೆಯಲ್ಲಿ ನಾಲ್ವರು ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಲಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications