ಪ್ರಶ್ನೆ ಪತ್ರಿಕೆ ಸೋರಿಕೆ : ಹೈಕೋರ್ಟ್ ನ್ಯಾಯವಾದಿ ಅರೆಸ್ಟ್
ಕಲಬುರ್ಗಿ, ಡಿ. 18: ಕರ್ನಾಟಕ ಹೈ ಕೋರ್ಟ್ ವಕೀಲ ಎನ್.ಎಸ್. ಹಿರೇಮಠ ಅವರನ್ನು ಪೊಲೀಸರು ಕಲಬುರ್ಗಿಯಲ್ಲಿ ಬಂಧಿಸಿದ್ದಾರೆ. ಪೊಲೀಸ್ ಪೇದೆ ನೇಮಕಾತಿಗಾಗಿ ರಾಜ್ಯದಲ್ಲೆಡೆ ನವೆಂಬರ್ 16ರಂದು ನಡೆದಿದ್ದ ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಯಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಮಠ ಅವರನ್ನು ಬಂಧಿಸಲಾಗಿದೆ.
ಈ ಕುರಿತು ಕಲಬುರ್ಗಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಬಯಲು ಪ್ರಕರಣದಲ್ಲಿ ಬಂಧಿತರ ಸಂಖ್ಯೆ 15ಕ್ಕೇರಿದೆ. ಇನ್ನೂ ಇಬ್ಬರ ಸುಳಿವು ಸಿಕ್ಕಿದ್ದು, ಇನ್ನೊಂದು ವಾರದಲ್ಲಿ ಅವರನ್ನು ಬಂಧಿಸಲಾಗುವುದು. ಬಂಧಿತರಿಂದ 77 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ, ಎನ್.ಎಸ್. ಹಿರೇಮಠ ಅವರ ಹತ್ತಿರ ಯಾವುದೇ ಹಣ ಸಿಕ್ಕಿಲ್ಲ ಎಂದು ಅವರು ತಿಳಿಸಿದ್ದಾರೆ. [ಉತ್ತರ ಪತ್ರಿಕೆ ಬಾರ್ ನಲ್ಲಿಟ್ಟ ಉಪನ್ಯಾಸಕ]

ಪ್ರಕರಣದ ಆರೋಪಿಗಳಲ್ಲೋರ್ವರಾದ ಸಿದ್ದಣ್ಣ ಎಚ್. ದೇವದುರ್ಗಾ ಅವರನ್ನು ನವೆಂಬರ್ ತಿಂಗಳಲ್ಲಿ ಜೇವರ್ಗಿ ತಾಲೂಕಿನ ತೋಟದ ಮನೆಯೊಂದರಲ್ಲಿ ಬಂಧಿಸಲಾಗಿತ್ತು. ಅವರು ವಿಚಾರಣೆಯಲ್ಲಿ ಎನ್.ಎಸ್. ಹಿರೇಮಠ ಕೈವಾಡ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. [ಪೊಲೀಸ್ ಪೇದೆ ಹುದ್ದೆಗೆ ಮರುಪರೀಕ್ಷೆ]
ಎನ್.ಎಸ್. ಹಿರೇಮಠ ಅವರು ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ನಿವಾಸಿ. ಬೆಂಗಳೂರಿನ ಹೈ ಕೋರ್ಟ್ನ ಪ್ರಧಾನ ಪೀಠದಲ್ಲಿ ವಕೀಲ ವೃತ್ತಿಯಲ್ಲಿ ನಿರತರಾಗಿದ್ದಾರೆಂದು ಅಮಿತ್ ಸಿಂಗ್ ವಿವರಿಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications