ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯ ಮೊಬೈಲ್ ಕೇಳಿದ ಪೊಲೀಸರು: ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ 03: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಲಿಂಬಾವಳಿ ಬಂಧನವಾಗಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, 'ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ' ಎಂದು ಹೇಳಿದ್ದಾರೆ.
'ದಿವಂಗತ ಪ್ರದೀಪ್ ಅವರು ಉದ್ಯಮವೊಂದಕ್ಕೆ ಸುಮಾರು 1.5 ಕೋಟಿ ರೂಪಾಯಿ ಬಂಡವಾಳ ಹೂಡಿದ್ದರು, ಆದರೆ ಈ ವರೆಗೆ ನಯಾಪೈಸೆ ಲಾಭದ ಹಣ ಅವರ ಕೈಸೇರಿಲ್ಲ. ಈ ವಿವಾದದಲ್ಲಿ ಶಾಸಕ ಅರವಿಂದ ಲಿಂಬಾವಳಿ ಅವರು ಮಧ್ಯಸ್ಥಿಕೆ ವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ' ಎಂದು ಆರೋಪಿದ್ದಾರೆ.

'ತನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ಸಾಲಮಾಡಿ ಹೂಡಿಕೆ ಮಾಡಿದ್ದ ಹಣವನ್ನು ವಾಪಾಸು ಕೊಡಿಸಬೇಕು ಎಂಬುದು ಮೃತನ ಪತ್ನಿ ನಮಿತಾ ಅವರ ಮನವಿ. ಪೊಲೀಸ್ ಇಲಾಖೆ ತಕ್ಷಣ ಕ್ರಮವಹಿಸಿ, ಈ ಹಣವನ್ನು ವಾಪಾಸು ಕೊಡಿಸುವ ಕೆಲಸ ಮಾಡಬೇಕು' ಎಂದು ಹೇಳಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ @rssurjewala ಅವರ ಜೊತೆಗೂಡಿ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ @RLR_BTM ಸೇರಿದಂತೆ ಇನ್ನಿತರರು ನನ್ನೊಂದಿಗಿದ್ದರು. pic.twitter.com/wMalfFvYey
— Siddaramaiah (@siddaramaiah) January 3, 2023
'ಡೆತ್ ನೋಟ್ ನಲ್ಲಿ ಆಡಳಿತದ ಪಕ್ಷದ ಶಾಸಕರ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಅವರು ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತದೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ?' ಎಂದು ಪ್ರಶ್ನಿಸಿದ್ದಾರೆ.
'ಪೊಲೀಸರು ಮೃತನ ಮೊಬೈಲ್ ಕೊಡಿ ಎಂದು ಮಧ್ಯರಾತ್ರಿಯಲ್ಲಿ ಕುಟುಂಬದವರ ಬಳಿ ಬಂದು ಕೇಳಿದ್ದಾರೆ. ಸಾವಿಗೂ ಮುನ್ನ ಪ್ರದೀಪ್ ಅವರು ಬರೆದ ಡೆತ್ ನೋಟ್ ನಲ್ಲಿ ಸಾವಿಗೆ ಕಾರಣರಾದವರ ಹೆಸರು ಸ್ಪಷ್ಟವಾಗಿರುವಾಗ ತನಿಖೆಯನ್ನು ಬೇರೆ ಆಯಾಮಗಳಿಗೆ ತಿರುಗಿಸುವ ಅಗತ್ಯವೇನಿದೆ?' ಎಂದು ಕೇಳಿದ್ದಾರೆ.
'ಈ ಹಿಂದೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಾಗ ಸೂಕ್ತ ತನಿಖೆ ನಡೆಸದೆ ಪ್ರಕರಣವನ್ನು ಮುಚ್ಚಿಹಾಕಲಾಗಿದೆ. ಈ ಪ್ರಕರಣವು ಅದೇ ರೀತಿ ಆಗುವುದು ಬೇಡ. ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಬಾರದು.ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಹಲವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ, ದಯಾಮರಣ ಕೋರಿ ಅರ್ಜಿ ಹಾಕಿದ್ದಾರೆ. ಬಿಜೆಪಿಯವರ ಹಣದಾಸೆಗೆ ಇಂಥಾ ಇನ್ನೆಷ್ಟು ಜೀವಗಳು ಬಲಿಯಾಗಬೇಕು?' ಎಂದು ಸಿದ್ದರಾಮಯ್ಯ ಕೇಳಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications