ಮಸೀದಿಗಳ ಧ್ವನಿವರ್ಧಕ ತೆರವು; ಏನಿದು ಸುತ್ತೋಲೆ?
ಬೆಂಗಳೂರು, ನವೆಂಬರ್ 05 : ರಾಜ್ಯಾದ್ಯಂತ ಮಸೀದಿಗಳಲ್ಲಿರುವ ಧ್ವನಿ ವರ್ಧಕ ತೆರವುಗೊಳಿಸುವ ಕುರಿತು ಪೊಲೀಸ್ ಮಹಾ ನಿರ್ದೇಶಕರು ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ನವೆಂಬರ್ 2ರಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಯಿಂದ ಸುತ್ತೋಲೆ ರವಾನೆಯಾಗಿದೆ. ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರಿಗೆ, ಜಿಲ್ಲಾ ಪೊಲೀಸ್ ಅಧೀಕ್ಷಕರುಗಳಿಗೆ ಈ ಸುತ್ತೋಲೆಯನ್ನು ಕಳಿಸಲಾಗಿದೆ.
ಬೆಂಗಳೂರು ಮೂಲದ ವಕೀಲ ಹರ್ಷ ಮುತಾಲಿಕ್ ಸಲ್ಲಿಸಿದ್ದ ಮನವಿಯನ್ನು ಉಲ್ಲೇಖಿಸಿ ಈ ಸುತ್ತೋಲೆ ಕಳಿಸಲಾಗಿದೆ. 30/9/2020ರಂದು ವಕೀಲರು ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿಯೊಂದನ್ನು ಸಲ್ಲಿಕೆ ಮಾಡಿದ್ದರು.

ರಾಜ್ಯಾದ್ಯಂತ ಇರುವ ಮಸೀದಿಗಳಿಗೆ ಅಳವಡಿಸಿರುವ ಧ್ವನಿವರ್ಧಕಗಳ ನಿಷೇಧಿಸಿ ತೆರವುಗೊಳಿಸಲು ಸೂಚನೆ ನೀಡಬೇಕು ಎಂದು ಹರ್ಷ ಮುತಾಲಿಕ್ ಮನವಿಯನ್ನು ಸಲ್ಲಿಸಿದ್ದರು.
ಸುತ್ತೋಲೆಯಲ್ಲಿ ಏನಿದೆ? : ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಮನವಿಯನ್ನು ಇದರೊಂದಿಗೆ ಲಗತ್ತಿಸಲಾಗಿದೆ. ಸದರಿ ಮನವಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಲ್ಲಿಸುವ ಪ್ರಾರ್ಥನೆಯಲ್ಲಿ ಹೆಚ್ಚು ಧ್ವನಿ ಉಂಟಾಗುತ್ತಿರುವುದರಿಂದ ಅನೇಕ ತೊಂದರೆ ಉಂಟಾಗುತ್ತಿದೆ.

ಈ ಬಗ್ಗೆ ಮಸೀದಿಗಳಲ್ಲಿ ಧ್ವನಿವರ್ಧಕಗಳ ನಿರ್ಬಂಧ ಹೇರಿ ಅವುಗಳನ್ನು ತೆರವುಗೊಳಿಸಬೇಕೆಂದು ಆಕ್ಷೇಪ ವ್ಯಕ್ತಪಡಿಸಿರುತ್ತಾರೆ. ಆದ್ದರಿಂದ, ಈ ಬಗ್ಗೆ ಮಾಹಿತಿ ಹಾಗೂ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸುಪ್ರೀಂಕೋರ್ಟ್ ಆದೇಶ : ಈ ಹಿಂದೆ ಸುಪ್ರೀಂಕೋರ್ಟ್ ಸಹ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ವಿವರವಾದ ಮಾರ್ಗಸೂಚಿ ಹೊರಡಿಸಿತ್ತು. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ತನಕ ಧ್ವನಿವರ್ಧಕ ಬಳಕೆ ಮಾಡಲು ನಿರ್ಬಂಧವಿದೆ. ಧ್ವನಿವರ್ಧಕದಲ್ಲಿನ ಶಬ್ದ 75 ಡೆಸಿಬಲ್ಗಿಂತ ಹೆಚ್ಚಿರಬಾರದು ಎಂದು ಮಾರ್ಗಸೂಚಿ ಹೇಳುತ್ತದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications