ಪೊಲೀಸ್ ನೇಮಕಾತಿಯಾಗುತ್ತಿಲ್ಲ; ರೌಡಿ ಸಂಖ್ಯೆ ಹೆಚ್ಚುತ್ತಿದೆ!

ಹಾಲಿ ಗೃಹ ಸಚಿವರೂ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಬಿದ್ದಿರುವ ಎಲ್ಲ ಹುದ್ದೆಗಳಿಗೂ ನೇಮಕಾತಿ ನಡೆಯಲಿದೆ ಎಂದು ಪ್ರಕಟಿಸಿದ್ದರು. ಆದರೆ ಎಷ್ಟು ಮಂದಿ ನೇಮಕಗೊಂಡಿದ್ದಾರೆ ಎಂಬುದನ್ನು ನೇಮಕಾತಿ ಪತ್ರ ಪಡೆದವರೇ ಹೇಳಬೇಕು.
ಆದರೂ, ಗೃಹ ಸಚಿವ ಕೆಜೆ ಜಾರ್ಜ್ ಅವರು ನಿನ್ನೆ ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸುತ್ತಾ 'ಶೀಘ್ರವೇ 8501 ಪೊಲೀಸ್ ಪೇದೆಗಳ ನೇಮಕವಾಗಲಿದೆ' ಎಂದಿದ್ದಾರೆ. ಬಿಜೆಪಿ ಸದಸ್ಯ, ಹಿರಿಯ ಸಾಹಿತಿ ಡಾ|| ದೊಡ್ಡರಂಗೇಗೌಡರು ಕೇಳಿದ ಪ್ರಶ್ನೆಗೆ ಗೃಹ ಸಚಿವ ಕೆಜೆ ಜಾರ್ಜ್ ಅವರು
'ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ಕೊರತೆಯಿದೆ. ಕೆಎಸ್ಆರ್ ಪಿ ಮತ್ತು ಸಿಎಆರ್ ಸೇರಿ 8501 ಪೇದೆಗಳನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತಿದೆ. ಶೀಘ್ರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ' ಎಂದು ಹೇಳಿದರು. ಮುಂದಿನ 2 ವರ್ಷದೊಳಗೆ ಖಾಲಿಯಿರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ಗಡುವು ವಿಧಿಸಿದ್ದಾರೆ. ಇದರಲ್ಲಿ 198 ಮಹಿಳಾ ಪೇದೆಗಳ ನೇಮಕವೂ ಆಗಲಿದೆ.
ಗೃಹ ಸಚಿವ ಕೆಜೆ ಜಾರ್ಜ್ ಅವರು ಹಿರಿಯರಾದ ದೊಡ್ಡರಂಗೇಗೌಡರಿಗೆ ಈ ಭರವಸೆಯ ಉತ್ತರ ನೀಡಿರುವುದರಿಂದ ಒಂದು ಕಡೆಯಿಂದ ಪೊಲೀಸ್ ಇಲಾಖೆಗೆ ಶೀಘ್ರವೇ 8 ಸಾವಿರ ಸಿಬ್ಬಂದಿ ನೇಮಕರಾಗುತ್ತಾರೆಂದು ಭಾವಿಸಬಹುದು, ಮತ್ತೊಂದು ದೃಷ್ಟಿಯಿಂದ ಉದ್ಯೋಗಾವಕಾಶ ಸೃಷ್ಟಿಯಾಗುವ ಸಂತಸ ಮೂಡಿದೆ.
ಈ ಮಧ್ಯೆ ಒಂದು ಆತಂಕಕಾರಿ ವಿಚಾರವನ್ನೂ ಗೃಹ ಸಚಿವರು ಸದನಕ್ಕೆ ತಿಳಿಸಿದ್ದಾರೆ. ಏನಪ್ಪಾ ಅಂದರೆ ಪೊಲೀಸ್ ಸಿಬ್ಬಂದಿ ಸಂಖ್ಯೆ ಹೆಚ್ಚಾಗದಿದ್ದರೂ ರೌಡಿಗಳ ಸಂಖ್ಯೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಈಗಾಗಲೇ 10 ಸಾವಿರ ಮಂದಿ ರೌಡಿ ಶೀಟರುಗಳಿದ್ದು, ಹೆಚ್ಚು ವಯಸ್ಸಾದವರನ್ನು ಪಟ್ಟಿಯಿಂದ ಕೈಬಿಟ್ಟು ಇನ್ನೂ 10 ಸಾವಿರ ಮಂದಿಯನ್ನು ಹೊಸದಾಗಿ ಪಟ್ಟಿಗೆ ಸೇರಿಸಿಕೊಳ್ಳಲಾಗುವುದು ಎಂದು ಗೃಹ ಸಚಿವ ಜಾರ್ಜ್ ತಿಳಿಸಿದರು.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications