ಪೊಲೀಸ್ ನೇಮಕಾತಿಯಾಗುತ್ತಿಲ್ಲ; ರೌಡಿ ಸಂಖ್ಯೆ ಹೆಚ್ಚುತ್ತಿದೆ!

ಹಾಲಿ ಗೃಹ ಸಚಿವರೂ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಬಿದ್ದಿರುವ ಎಲ್ಲ ಹುದ್ದೆಗಳಿಗೂ ನೇಮಕಾತಿ ನಡೆಯಲಿದೆ ಎಂದು ಪ್ರಕಟಿಸಿದ್ದರು. ಆದರೆ ಎಷ್ಟು ಮಂದಿ ನೇಮಕಗೊಂಡಿದ್ದಾರೆ ಎಂಬುದನ್ನು ನೇಮಕಾತಿ ಪತ್ರ ಪಡೆದವರೇ ಹೇಳಬೇಕು.
ಆದರೂ, ಗೃಹ ಸಚಿವ ಕೆಜೆ ಜಾರ್ಜ್ ಅವರು ನಿನ್ನೆ ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸುತ್ತಾ 'ಶೀಘ್ರವೇ 8501 ಪೊಲೀಸ್ ಪೇದೆಗಳ ನೇಮಕವಾಗಲಿದೆ' ಎಂದಿದ್ದಾರೆ. ಬಿಜೆಪಿ ಸದಸ್ಯ, ಹಿರಿಯ ಸಾಹಿತಿ ಡಾ|| ದೊಡ್ಡರಂಗೇಗೌಡರು ಕೇಳಿದ ಪ್ರಶ್ನೆಗೆ ಗೃಹ ಸಚಿವ ಕೆಜೆ ಜಾರ್ಜ್ ಅವರು
'ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ಕೊರತೆಯಿದೆ. ಕೆಎಸ್ಆರ್ ಪಿ ಮತ್ತು ಸಿಎಆರ್ ಸೇರಿ 8501 ಪೇದೆಗಳನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತಿದೆ. ಶೀಘ್ರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ' ಎಂದು ಹೇಳಿದರು. ಮುಂದಿನ 2 ವರ್ಷದೊಳಗೆ ಖಾಲಿಯಿರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ಗಡುವು ವಿಧಿಸಿದ್ದಾರೆ. ಇದರಲ್ಲಿ 198 ಮಹಿಳಾ ಪೇದೆಗಳ ನೇಮಕವೂ ಆಗಲಿದೆ.
ಗೃಹ ಸಚಿವ ಕೆಜೆ ಜಾರ್ಜ್ ಅವರು ಹಿರಿಯರಾದ ದೊಡ್ಡರಂಗೇಗೌಡರಿಗೆ ಈ ಭರವಸೆಯ ಉತ್ತರ ನೀಡಿರುವುದರಿಂದ ಒಂದು ಕಡೆಯಿಂದ ಪೊಲೀಸ್ ಇಲಾಖೆಗೆ ಶೀಘ್ರವೇ 8 ಸಾವಿರ ಸಿಬ್ಬಂದಿ ನೇಮಕರಾಗುತ್ತಾರೆಂದು ಭಾವಿಸಬಹುದು, ಮತ್ತೊಂದು ದೃಷ್ಟಿಯಿಂದ ಉದ್ಯೋಗಾವಕಾಶ ಸೃಷ್ಟಿಯಾಗುವ ಸಂತಸ ಮೂಡಿದೆ.
ಈ ಮಧ್ಯೆ ಒಂದು ಆತಂಕಕಾರಿ ವಿಚಾರವನ್ನೂ ಗೃಹ ಸಚಿವರು ಸದನಕ್ಕೆ ತಿಳಿಸಿದ್ದಾರೆ. ಏನಪ್ಪಾ ಅಂದರೆ ಪೊಲೀಸ್ ಸಿಬ್ಬಂದಿ ಸಂಖ್ಯೆ ಹೆಚ್ಚಾಗದಿದ್ದರೂ ರೌಡಿಗಳ ಸಂಖ್ಯೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಈಗಾಗಲೇ 10 ಸಾವಿರ ಮಂದಿ ರೌಡಿ ಶೀಟರುಗಳಿದ್ದು, ಹೆಚ್ಚು ವಯಸ್ಸಾದವರನ್ನು ಪಟ್ಟಿಯಿಂದ ಕೈಬಿಟ್ಟು ಇನ್ನೂ 10 ಸಾವಿರ ಮಂದಿಯನ್ನು ಹೊಸದಾಗಿ ಪಟ್ಟಿಗೆ ಸೇರಿಸಿಕೊಳ್ಳಲಾಗುವುದು ಎಂದು ಗೃಹ ಸಚಿವ ಜಾರ್ಜ್ ತಿಳಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications