ಪೊಲೀಸ್ ಇಲಾಖೆ ಅಂತರ ಜಿಲ್ಲಾ ವರ್ಗಾವಣೆ; ಸಚಿವರು ಕೊಟ್ಟ ಮಾಹಿತಿ
ಬೆಂಗಳೂರು, ಡಿಸೆಂಬರ್ 13; ವರ್ಗಾವಣೆಗಾಗಿ ಕಾದಿರುವ ಕರ್ನಾಟಕದ ಪೊಲೀಸ್ ಸಿಬ್ಬಂದಿಗೆ ಮಾಹಿತಿಯೊಂದಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ 'ಸಿ' ಮತ್ತು 'ಡಿ' ಗ್ರೂಪಿನ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆ ಕುರಿತು ಗೃಹ ಸಚಿವರು ಮಾಹಿತಿ ನೀಡಿದ್ದಾರೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನಸಭೆಯಲ್ಲಿ ಮಂಡ್ಯದ ಶಾಸಕ ರವಿಕುಮಾರ ಗೌಡ (ಗಣಿಗ) ಕೇಳಿದ್ದ ಪ್ರಶ್ನೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಉತ್ತರ ನೀಡಿದ್ದಾರೆ. ಶಾಸಕರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿ ಮತ್ತು ಡಿ ಗ್ರೂಪಿನ ಸಿಬ್ಬಂದಿಗಳಿಗೆ ಕೆಸಿಎಸ್ಆರ್ ನಿಯಮ 16ಎ ಅಂತರ್ ಜಿಲ್ಲಾ ವರ್ಗಾವಣೆ ಮಾಡಲು ನಿಯಮ ಇರುವ ಮಾನದಂಡಗಳೇನು? ಎಂದು ಪ್ರಶ್ನಿಸಿದ್ದರು.

ಗೃಹ ಸಚಿವರ ಉತ್ತರ; ಗೃಹ ಸಚಿವರು ತಮ್ಮ ಉತ್ತರದಲ್ಲಿ ಸರ್ಕಾರದ ಅಧಿಸೂಚನೆ ದಿನಾಂಕ 9/3/2023ರಲ್ಲಿ ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ಕ್ಕೆ ನಿಯಮ 16ಎ ಅನ್ನು ಸೇರ್ಪಡೆಗೊಳಿಸಲಾಗಿದೆ. ಅದರ ಪ್ರಕಾರ ಪತಿ-ಪತ್ನಿ ಇಬ್ಬರೂ
ಸರ್ಕಾರಿ ಸೇವೆಯಲ್ಲಿ ಇರುವ ಪ್ರಕರಣಗಳಿಗೆ ಮಾತ್ರ ಗುಂಪು ಸಿ ಅಥವಾ ಡಿ ಸೇವೆಗೆ ಸೇರಿದ ಒಬ್ಬ ಸದಸ್ಯರನ್ನು ಮತ್ತು ಈ ಅಡಿಯಲ್ಲಿ ಪತಿ ಅಥವಾ ಪತ್ನಿ ಇವರಲ್ಲಿ ಯಾರಾದರೊಬ್ಬರಿಂದ ಕೋರಿಕೆ ಬಂದಲ್ಲಿ ಹುದ್ದೆಯ ಒಂದು ಜೇಷ್ಠತಾ ಘಟಕದಿಂದ ಮತ್ತೊಂದು ಜೇಷ್ಠತಾ ಘಟಕದಲ್ಲಿನ ಅದೇ ಕೇಡರಿನ ಸಮಾನ ಹುದ್ದೆಗೆ ಷರತ್ತಿಗೆ ಒಳಪಟ್ಟು ವರ್ಗಾವಣೆ ಮಾಡಬಹುದಾಗಿರುತ್ತದೆ ಎಂದು ಹೇಳಿದ್ದಾರೆ.
ಆದರೆ ಅದಕ್ಕೆ ಒಬ್ಬ ಸರ್ಕಾರಿ ನೌಕರನು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಕನಿಷ್ಟ 7 ವರ್ಷ ಸೇವೆಯನ್ನು ಪೂರ್ಣಗೊಳಿಸಿರಬೇಕು. ವರ್ಗಾಯಿಸಬೇಕಾದ ಘಟಕ ಅಥವಾ ಸ್ಥಳದಲ್ಲಿ ಮಂಜೂರಾದ ಹುದ್ದೆಯು ಖಾಲಿರತಕ್ಕದ್ದು. ಅಂತಹ ವರ್ಗಾವಣೆಯನ್ನು ಒಂದು ಕೇಡರ್ನಿಂದ ಮತ್ತೊಂದು ಕೇಡರಿಗೆ ಮಾಡತಕ್ಕದ್ದಲ್ಲ. ವರ್ಗಾವಣೆಯನ್ನು ಸರ್ಕಾರಿ ನೌಕರನ ಕೋರಿಕೆ ಮೇಲೆ ಅವರ ಜೇಷ್ಠತೆಯನ್ನು ಮಾಡಿರುವುದರಿಂದ ವರ್ಗಾವಣೆಗೊಂಡ ಘಟಕದಲ್ಲಿನ ಕೇಡರ್ನ ಕೊನೆಯ ವ್ಯಕ್ತಿಯ ಕೆಳಗಿರಿಸತಕ್ಕದ್ದು. ವರ್ಗಾವಣೆಯನ್ನು ಸರ್ಕಾರಿ ನೌಕರನ ಸೇವೆಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಮಾಡತಕ್ಕುದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶಾಸಕರು ನೂತನ ವರ್ಗಾವಣೆ ನೀತಿಯಿಂದಾಗಿ ಈ ಸಿಬ್ಭಂದಿಗಳಿಗೆ ತೊಂದರೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?. ಬಂದಿದ್ದಲ್ಲಿ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂದು ಕೇಳಿದ್ದರು. ಸಚಿವರು ಉತ್ತರದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ/ ಸಿಬ್ಬಂದಿಗಳಿಗೆ ಅಂತರ್ ವಲಯ/ ಜಿಲ್ಲೆಗೆ ವರ್ಗಾವಣೆ ಅವಕಾಶ ಕಲ್ಪಿಸುವ ಸಲುವಾಗಿ ಪ್ರತ್ಯೇಕವಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ವರ್ಗಾವಣೆ) (ವಿಶೇಷ) ನಿಯಮಗಳು 2022ನ್ನು ರಚಿಸಲಾಗಿದ್ದು ಸದರಿ ನಿಯಮವು ದಿನಾಂಕ 22/02/2023ರಿಂದ ಜಾರಿಗೆ ಬಂದಿರುತ್ತದೆ.
ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆಯಲ್ಲಿ ಪಾರದರ್ಶಕತೆಯನ್ನು ತರುವ ಸಲುವಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರತ್ಯೇಕವಾದ ವರ್ಗಾವಣೆ ಪೋರ್ಟಲ್ನ್ನು ರೂಪಿಸಲಾಗಿರುತ್ತದೆ. ಈ ಪೋರ್ಟಲ್ನಲ್ಲಿ ಅಧಿಕಾರಿ/ ಸಿಬ್ಬಂದಿಗಳಿಂದ ಅರ್ಜಿಗಳನ್ನು
ಸ್ವೀಕರಿಸಲಾಗುತ್ತಿರುತ್ತದೆ ಎಂದು ಹೇಳಿದ್ದಾರೆ.
ಇಲಾಖೆಯ ವರ್ಗಾವಣೆ ಪೋರ್ಟ್ಲ್ನಲ್ಲಿ ಸ್ವೀಕೃತವಾಗಿರುವ ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯ ಅಧಿಕಾರಿ/ ಸಿಬ್ಬಂದಿಗಳು ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ವರ್ಗಾವಣೆ ಕೋರಿ ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಸದರಿ ಅರ್ಜಿಗಳನ್ನು ಒಂದೇ ಬಾರಿಗೆ ಪರಿಗಣಿಸಿದ್ದಲ್ಲಿ ಕೆಲವು ಘಟಕಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಿಕ್ತಸ್ಥಾನಗಳು ಉಂಟಾಗಿ ಇಲಾಖೆಯ ಕಾರ್ಯ ನಿರ್ವಹಣೆಗೆ ತೊಂದರೆಯುಂಟಾಗುತ್ತದೆ. ಈ ಹಿನ್ನಲೆಯಲ್ಲಿ ಇಲಾಖೆಯಲ್ಲಿ ಸ್ವೀಕೃತವಾಗಿರುವ ವರ್ಗಾವಣಾ ಅರ್ಜಿಗಳನ್ನು ಇಲಾಖೆಯ ಆಡಳಿತ ನಿರ್ವಹಣೆ ಹಾಗೂ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದ ರೀತಿಯಲ್ಲಿ ಪರಿಗಣಿಸಬೇಕಾಗಿರುತ್ತದೆ ಎಂದು ವಿವರಿಸಿದ್ದಾರೆ.
ಶಾಸಕರು ಈ ಹಿಂದೆ ಪತಿ-ಪತ್ನಿ ಪ್ರಕರಣದಡಿ ಎರಡೂವರೆ ವರ್ಷ ಖಾಯಂ ಪೂರ್ವ ಸೇವಾ ಪೂರ್ಣಗೊಳಿಸಿದ ಸಿಬ್ಬಂದಿಗಳಿಗೆ ವರ್ಗಾವಣೆ ಮಾಡುವ ನಿಯಮಾವಳಿಯನ್ನು 7 ವರ್ಷಗಳಿಗೆ ಹೆಚ್ಚಳ ಮಾಡಿದ್ದು, ಇದರಿಂದ ಸಿಬ್ಬಂದಿಗಳಿಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?, ಬಂದಿದ್ದಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ? ಎಂದು ಕೇಳಿದ್ದರು.
ಸಚಿವರು ಪತಿ-ಪತ್ನಿ ಪ್ರಕರಣದಡಿ ಈ ಹಿಂದೆ ನಿಗಧಿಪಡಿಸಲಾಗಿದ್ದ ಕನಿಷ್ಠ ಸೇವಾ ಅವಧಿಯನ್ನು 07 ವರ್ಷಗಳಿಗೆ ಹೆಚ್ಚಳ ಮಾಡಿ ನಿಗಧಿಪಡಿಸಿರುವ ಸಂಬಂಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಮತ್ತು ಜನ ಪ್ರತಿನಿಧಿಗಳಿಂದ ಮನವಿಗಳು ಸ್ವೀಕೃತವಾಗಿದ್ದು, ಪರಿಶೀಲಿಸಲಾಗುತ್ತಿರುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ಏಳು ವರ್ಷ ಸೇವಾವಧಿ ಪೂರೈಸಿದವರಿಗೆ ಮಾತ್ರ ವರ್ಗಾವಣೆಗೆ ಅವಕಾಶ ಕಲ್ಪಿಸಿರುವ ಅವಧಿಯನ್ನು ಮಾರ್ಪಾಡು ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ ಎಂದು ಹೇಳಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications