ಹನಿ ಟ್ರ್ಯಾಪ್ ಜಾಲ ಬೆಂಗಳೂರಿನಲ್ಲಿ ಮಾತ್ರ ಇಲ್ಲ!
ಬೆಂಗಳೂರು, ಏಪ್ರಿಲ್ 23 : ಮಹಿಳೆಯರನ್ನು ಬಳಸಿಕೊಂಡು ಶ್ರೀಮಂತರಿಂದ ಹಣ ಸುಲಿಗೆ ಮಾಡುವ 'ಹನಿ ಟ್ರ್ಯಾಪ್' ದಂಧೆಯ ಜಾಲವೊಂದು ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದೆ. ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧ ನಗರಗಳಲ್ಲಿಯೂ ಇಂತಹ ಜಾಲ ಕೆಲಸ ಮಾಡುತ್ತಿದೆ.
ಬೆಂಗಳೂರಿನಲ್ಲಿ ಗುರುವಾರ 'ಹನಿ ಟ್ರ್ಯಾಪ್' ದಂಧೆಯ ಜಾಲವೊಂದನ್ನು ಪತ್ತೆ ಹಚ್ಚಿದ್ದ ಸಿಸಿಬಿ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಮೂವರು ಪೊಲೀಸರು ಹಾಗೂ ಇಬ್ಬರು ಯುವತಿಯರನ್ನು ಬಂಧಿಸಿದ್ದರು. ಈ ಜಾಲ ಇಂತಹ 8 ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. [ಹನಿ ಟ್ರ್ಯಾಪ್ ಮೂಲಕ ಲೇಡಿ ಉಗ್ರರ ಎಂಟ್ರಿ?]

ಹನಿ ಟ್ರ್ಯಾಪ್ನ ಹಲವು ಪ್ರಕರಣಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ಗಳು ಭಾಗಿಯಾಗಿರುತ್ತಾರೆ. ಇಂತಹ ಹಲವು ಪ್ರಕರಣಗಳು ರಾಜ್ಯದ ವಿವಿಧ ನಗರಗಳಲ್ಲಿ ನಡೆದಿವೆ. ಮಂಡ್ಯ ಮತ್ತು ಮೈಸೂರಿನಲ್ಲಿಯೂ ಇಂತಹ ಜಾಲ ಕೆಲಸ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. [ಹನಿ ಟ್ರ್ಯಾಪಿಂಗ್ ಮಾಡಿದ್ದ ನಟಿ ನಯನಾ]
ಹೇಗೆ ಕೆಲಸ ಮಾಡುತ್ತಿತ್ತು ಗ್ಯಾಂಗ್? : ಬೆಂಗಳೂರಿನಲ್ಲಿ ಮೂವರು ಪೊಲೀಸ್ ಕಾನ್ಸ್ಟೇಬಲ್ ಮತ್ತು ಇಬ್ಬರು ಮಹಿಳೆಯರನ್ನು ಹನಿ ಟ್ರ್ಯಾಪ್ ದಂಧೆಯಲ್ಲಿ ತೊಡಗಿದ ಕಾರಣಕ್ಕೆ ಬಂಧಿಸಲಾಗಿದೆ. ದಂಧೆಯಲ್ಲಿ ಭಾಗಿಯಾದ ಪೊಲೀಸ್ ಪೇದೆಗಳು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು.
ದಂಧೆಯಲ್ಲಿ ತೊಡಗಿರುವ ಮಹಿಳೆ ಮೊದಲು ಶ್ರೀಮಂತರು, ಉದ್ಯಮಿಗಳು, ಸರ್ಕಾರಿ ನೌಕರರನ್ನು ರಹಸ್ಯವಾಗಿ ಕ್ಯಾಮರಾ ಇಟ್ಟಿರುವ ಅಪಾರ್ಟ್ಮೆಂಟ್ಗೆ ಕರೆಯುತ್ತಿದ್ದಳು. ಅವರು ಬಂದ ಬಳಿಕ ಪೊಲೀಸ್ ಪೇದೆಗಳು ದಾಳಿ ನಡೆಸುವ ನೆಪದಲ್ಲಿ ಅಲ್ಲಿಗೆ ತೆರಳುತ್ತಿದ್ದರು. ಇಬ್ಬರನ್ನು ಹಿಡಿಯುತ್ತಿದ್ದ ಅವರು ಪ್ರಕರಣದ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದರು.
ಸಿಕ್ಕಿಬಿದ್ದ ವ್ಯಕ್ತಿಯ ಬಳಿ ಹಣಕೊಟ್ಟರೆ ಪ್ರಕರಣ ದಾಖಲು ಮಾಡುವುದಿಲ್ಲ ಎಂದು ಹೇಳಿ ಹಣ ವಸೂಲಿಗೆ ಮುಂದಾಗುತ್ತಿದ್ದರು. ಅವರ ಬಳಿ 1.2 ರಿಂದ 2 ಲಕ್ಷದ ವರೆಗೆ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಈ ತಂಡ 8ಕ್ಕೂ ಅಧಿಕ ಹನಿ ಟ್ರ್ಯಾಪ್ ಪ್ರಕರಣಗಳಲ್ಲಿ ಭಾಗಿಯಾದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ಹಲವು ಗ್ಯಾಂಗ್ಗಳಿವೆ : ರಾಜ್ಯದ ಇತರ ನಗರಗಳಲ್ಲಿ ಇಂತಹ ಹಲವು ಗ್ಯಾಂಗ್ಗಳು ಕಾರ್ಯನಿರ್ವಹಿಸುತ್ತಿವೆ. ಕೆಜೆ ನಗರದಲ್ಲಿ ಡಾಕ್ಟರ್ಗೆ ಬೆದರಿಕೆ ಹಾಕುತ್ತಿದ್ದ ಇಂತಹ ಗ್ಯಾಂಗ್ ಅನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಹನಿ ಟ್ರ್ಯಾಪ್ನ ಹಲವು ಪ್ರಕರಣಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ಗಳು ಭಾಗಿಯಾಗಿರುತ್ತಾರೆ.
ಇಂತಹ ಜಾಲಕ್ಕೆ ಸಿಲುಕುವ ಜನರು ದೂರು ಕೊಡಲು ಮುಂದೆ ಬಂದರೆ ಬಂಧಿಸಲು ಸಹಾಯಕವಾಗುತ್ತದೆ ಎನ್ನುತ್ತಾರೆ ಪೊಲೀಸರು. ಆದರೆ, ಜಾಲಕ್ಕೆ ಸಿಲುಕುವ ಜನರು ಮರ್ಯಾದೆಗೆ ಅಂಜಿ ದೂರು ಕೊಡುವುದಿಲ್ಲ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಐಪಿಎಲ್ ಪಂದ್ಯಗಳ ವೇಳೆ ಅಪ್ರಾಪ್ತರನ್ನು ಬಳಸಿ ಮೊಬೈಲ್ ಕಳ್ಳತನ: ಅಂತರರಾಜ್ಯ ಗ್ಯಾಂಗ್ ಬೆಂಗಳೂರಿನಲ್ಲಿ ವಶಕ್ಕೆ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications