ಶಶಿಧರ್ ಬಂಧನದಿಂದ ಪೊಲೀಸರ ಪ್ರತಿಭಟನೆಗೆ ಹಿನ್ನಡೆ?
ಬೆಂಗಳೂರು, ಜೂನ್ 02 : ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘ ಕರೆ ನೀಡಿರುವ ಜೂನ್ 4ರ ಪ್ರತಿಭಟನೆಗೆ ಹಿನ್ನಡೆ ಉಂಟಾಗಿದೆ. ರಾಜದ್ರೋದ ಆರೋಪದಡಿ ಮಹಾಸಂಘದ ಅಧ್ಯಕ್ಷ ಶಶಿಧರ್ ವೇಣುಗೋಪಾಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕರ್ತವ್ಯಕ್ಕೆ ರಜೆ ಹಾಕಿ ಪ್ರತಿಭಟನೆ ನಡೆಸದಂತೆ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಇದರಿಂದಾಗಿ ರಜೆ ಹಾಕಿ ಪ್ರತಿಭಟನೆಗೆ ಮುಂದಾಗಿದ್ದ ಪೊಲೀಸರಿಗೆ ಹಿನ್ನಡೆ ಉಂಟಾಗಿದೆ. [ಪೊಲೀಸರ ಪ್ರತಿಭಟನೆ : ಶಶಿಧರ್ ವೇಣುಗೋಪಾಲ್ ಬಂಧನ]

ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಶಶಿಧರ್ ವೇಣುಗೋಪಾಲ್ ಅವರನ್ನು ಬಂಧಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ರಾತ್ರಿ 12.30ರ ಸುಮಾರಿಗೆ ಯಲಹಂಕದಲ್ಲಿರುವ ಅವರ ಮನೆಯಲ್ಲಿ ಶಶಿಧರ್ ಬಂಧಿಸಲಾಗಿದ್ದು, ಅವರನ್ನು ಜೂನ್ 16ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. [ನಯವಾದ ಮಾತಿಗೆ ಬಗ್ಗದ ಪೊಲೀಸರು ಕವನಕ್ಕೆ ಬಗ್ಗುವರೆ?]
ವಾರೆಂಟ್ ಇಲ್ಲದೆ ಬಂಧನ : ಶಶಿಧರ್ ವೇಣುಗೋಪಾಲ್ ಅವರ ವಿರುದ್ಧ ಐಪಿಸಿ ಸೆಕ್ಷನ್ 124 (ಎ) ಅಡಿ ರಾಜದ್ರೋಹ, ಅಗತ್ಯವಸ್ತುಗಳ ಸೇವಾ ಕಾಯ್ದೆ ( ಎಸ್ಮಾ ) ಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಎಸ್ಮಾ ಅಡಿ ಪ್ರಕರಣ ದಾಖಲಾಗಿರುವುದರಿಂದ ಪೊಲೀಸರು ವಾರೆಂಟ್ ಇಲ್ಲದೆ ಅವರನ್ನು ಬಂಧಿಸಿದ್ದಾರೆ. [ಪ್ರತಿಭಟನೆಗೆ ಮುಂದಾದ ಪೊಲೀಸರ 31 ಬೇಡಿಕೆಗಳು]
ಎಸ್ಮಾ ಕಾಯ್ದೆಯನ್ನು ಅಗತ್ಯ ಸೇವೆಗಳಾದ ವೈದ್ಯರು, ಪೊಲೀಸರ ವಿರುದ್ಧ ಪ್ರಯೋಗಿಸಬಹುದಾಗಿದ್ದು, ಇದನ್ನು ಉಲ್ಲಂಘನೆ ಮಾಡಿದರೆ ಆರು ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಪೊಲೀಸರ ಬೇಡಿಕೆಗಳನ್ನು ಸರ್ಕಾರ ಪರಿಗಣಿಸಲಿದೆ ಎಂದು ಸರ್ಕಾರ ಈಗಾಗಲೇ ಭರವಸೆ ನೀಡಿದೆ.
-
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications