ಗೃಹ ಸಚಿವ ಪರಮೇಶ್ವರ್ಗೆ ಖಡಕ್ ಎಚ್ಚರಿಕೆ ನೀಡಿದ ಪೊಲೀಸ್ ಸಂಘ
ಬೆಂಗಳೂರು, ಅಕ್ಟೋಬರ್ 22: ಗೃಹ ಸಚಿವರ ನಿಗಾದಲ್ಲಿರುವ ಪೊಲೀಸ್ ಇಲಾಖೆ ಅದೇ ಗೃಹ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದೆ.
ಹೌದು, ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘ ಗೃಹ ಸಚಿವರಿಗೆ ಎಚ್ಚರಿಕೆ ಪತ್ರ ರವಾನಿಸಿದ್ದು, ತಾವು ಈ ಹಿಂದೆ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಇದ್ದರೆ ಮುಂದಾಗುವ ಪರಿಣಾಮಗಳಿಗೆ ನೀವೇ ಹೊಣೆಗಾರರಾಗಬೇಕಾಗುತ್ತದೆ ಎಂದು ಸಂಘವು ಎಚ್ಚರಿಕೆ ನೀಡಿದೆ.
ಈ ಹಿಂದೆ 2016ರಲ್ಲಿ ಪೊಲೀಸರು ಪ್ರತಿಭಟನೆಗೆ ಮುಂದಾಗಿ ಆ ನಂತರ ನಡೆದ ಬೆಳವಣಿಗೆಗಳ ಸಮಯದಲ್ಲಿ ನೀವೆ ಗೃಹ ಮಂತ್ರಿ ಆಗಿದ್ದಿರಿ, ಆಗ ನೀವು ನೀಡಿದ ಭರವಸೆಗಳೆಲ್ಲಾ ಪೊಳ್ಳು ಭರವಸೆಗಳಾಗಿ ಉಳಿದುಬಿಟ್ಟವು' ಎಂದು ಪತ್ರದಲ್ಲಿ ಗೃಹ ಸಚಿವ ಪರಮೇಶ್ವರ್ ಅವರನ್ನು ಖಾರವಾಗಿಯೇ ಪ್ರಶ್ನಿಸಲಾಗಿದೆ.

ತೆಲಂಗಾಣ ಮಾದರಿ ಸಂಬಳ ನೀಡಿ
ಪೊಲೀಸರ ವೇತನ ಹೆಚ್ಚಿಸಿ ತೆಲಂಗಾಣ ಮಾದರಿಯಲ್ಲಿ ಸಂಬಳ ಕೊಡುವ ಬಗ್ಗೆ ಶೀಘ್ರವಾಗಿ ನಿರ್ಣಯ ಕೈಗೊಳ್ಳಬೇಕು, ಇತರೆ ರಾಜ್ಯಗಳಲ್ಲಿ ಇರುವಂತೆ ಏಕರೂಪ ಪೊಲೀಸ್ ವ್ಯವಸ್ಥೆ ನಮ್ಮ ರಾಜ್ಯದಲ್ಲೂ ಜಾರಿ ಆಗಬೇಕು ಇವುಗಳ ಬಗ್ಗೆ ನೀವು ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಸಂಘವು ಪತ್ರದಲ್ಲಿ ಒತ್ತಾಯಿಸಿದೆ.

ಪರಿಣಾಮ ಎದುರಿಸಬೇಕಾಗುತ್ತದೆ ಜಾಗೃತೆ
ಸಂಘದ ವತಿಯಿಂದ ಅಧ್ಯಕ್ಷ ವಿ.ಶಶಿಧರ ಅವರು ಪತ್ರವನ್ನು ಬರೆದಿದ್ದು, ಪೊಲೀಸ್ ಸಮುದಾಯದ ಮನವಿಗೆ ಶೀಘ್ರವಾಗಿ ಸ್ಪಂದಿಸಬೇಕು ಒಂದೊಮ್ಮೆ ಸ್ಪಂದಿಸಲು ವಿಫಲರಾದರೆ ಮುಂದಿನ ಪರಿಣಾಮಗಳನ್ನು ಗೃಹ ಸಚಿವರಾಗಿ ನೀವೆ ಎದುರಿಸಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಕೆ ಸಹ ನೀಡಲಾಗಿದೆ.

2016ರಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಪೊಲೀಸರು
2016 ರಲ್ಲಿ ಪೊಲೀಸ್ ಇಲಾಖೆಯಲ್ಲಿನ ಅಸಮಾನತೆ ಹೋಗಲಾಡಿಸಿ, ಸಂಬಳ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಆದರೆ ಸರ್ಕಾರವು ಎಸ್ಮಾ ಜಾರಿ ಮಾಡಿದ ಕಾರಣ ಪ್ರತಿಭಟನೆ ನಡೆಯಲಿಲ್ಲ, ಉದ್ದೇಶಿತ ಪ್ರತಿಭಟನೆಯ ಹಿಂದಿನ ದಿನ ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ಶಶಿಧರ್ ಅವರನ್ನು ಬಂಧಿಸಲಾಗಿತ್ತು.

ಭರವಸೆಗಳನ್ನು ಈಡೇರಿಸಿಲ್ಲವೆಂಬ ಆರೋಪ
ಪೊಲೀಸರ ಪ್ರತಿಭಟನೆಯ ಎಚ್ಚರಿಕೆಯಿಂದ ಎಚ್ಚೆತ್ತ ಸರ್ಕಾರವು ಆರ್ಡರ್ಲಿ ಪದ್ಧತಿಯನ್ನು ತೆಗೆದುಹಾಕಿತ್ತು. ಹಾಗು ಪೊಲೀಸರಿಗೆ ಕಡ್ಡಾಯ ರಜೆಯ ಸೌಲಭ್ಯವನ್ನು ನೀಡಿತ್ತು. ಅದೇ ಸಮಯದಲ್ಲಿ ಗೃಹ ಸಚಿವರಾದ ಪರಮೇಶ್ವರ್ ಅವರು ಕೆಲವು ಭರವಸೆಗಳನ್ನು ನೀಡಿದ್ದರು ಆದರೆ ಅವು ಜಾರಿ ಆಗಿಲ್ಲವೆಂದು ಸಂಘವು ಆರೋಪಿಸುತ್ತಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications