ಪೊಲೀಸರ ಪ್ರತಿಭಟನೆಗೆ ಆರ್ಟಿಐ ಕಾರ್ಯಕರ್ತರ ಬೆಂಬಲ
ಬೆಂಗಳೂರು, ಹುಬ್ಬಳ್ಳಿ, ಮೇ 31: ಜೂನ್ 4 ರಂದು ನಡೆಯಲಿರುವ ಪೊಲೀಸರ ಪ್ರತಿಭಟನೆಗೆ ಆರ್ ಟಿಐ ಕಾರ್ಯಕರ್ತರು ಬೆಂಬಲ ನೀಡಿ ಬೃಹತ್ ಮೆರವಣಿಗೆ ನಡೆಸಲಿದ್ದಾರೆ ಎಂದು ಆರ್ ಟಿಐ ಕಾರ್ಯಕರ್ತ ಪ್ರಶಾಂತಕುಮಾರ ತಿಳಿಸಿದರು.
ಪ್ರೆಸ್ ಕ್ಲಬ್ ನಲ್ಲಿ ಏರ್ಪಡಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಜೂನ್ 4 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಪದ್ಮನಾಭನಗರದಿಂದ ಮುಖ್ಯಮಂತ್ರಿ ನಿವಾಸದವರೆಗೂ ಬೈಕ್ ನಲ್ಲಿ ಮೆರವಣಿಗೆ ಸಾಗಲಾಗುವುದು ಎಂದರು. [ಪೊಲೀಸರ ಸಮಸ್ಯೆಗೆ ಕಿವಿಗೊಡಿ, ಸರ್ಕಾರಕ್ಕೆ ಆಪ್ ಸಲಹೆ]

ಸುಮಾರು 3 ದಶಕಗಳ ಕಾಲದಿಂದ ಪೊಲೀಸರ ನ್ಯಾಯಯುತ ಸಂವಿಧಾನಬದ್ಧ ಹಕ್ಕುಗಳನ್ನು ಈಡೇರಿಸುವಲ್ಲಿ ಸರಕಾರ ವಿಫಲವಾಗಿದೆ. ರಾಜ್ಯದಲ್ಲಿ ಸುಮಾರು 28 ಸಾವಿರ ಪೊಲೀಸ್ ಹುದ್ದೆಗಳು ಖಾಲಿಯಿವೆ ಈ ಹುದ್ದೆಗಳಿಗೆ ಹೊಸ ನೇಮಕಾತಿ ಮಾಡಿಕೊಳ್ಳದೇ, ಈಗಾಗಲೇ ಇರುವ ಪೊಲೀಸ್ ಸಿಬ್ಬಂದಿಯಿಂದಲೇ ದುಡಿಸಿಕೊಳ್ಳುತ್ತಿರುವುದು ಅಮಾನವೀಯ ಕೃತ್ಯ ಎಂದು ಹೇಳಿದರು.
ಪೊಲೀಸರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಮುಂದಾಗಬೇಕು ಎಂದು ಒತ್ತಾಯ ಮಾಡಿದರು. ಈ ಸಂದರ್ಭ ಧನಂಜಯ್, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.[ಸಾಮೂಹಿಕ ರಜೆಗೆ 50 ಸಾವಿರ ಪೊಲೀಸರ ನಿರ್ಧಾರ]
ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಡಿ:
ಹುಬ್ಬಳ್ಳಿ: ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ಜೂ. 4 ರಂದು ಹಮ್ಮಿಕೊಂಡಿರುವ ಪೊಲೀಸ್ ರ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಪೊಲೀಸ್ ಸಿಬ್ಬಂದಿಗೆ ಸೂಚಿಸಿದರು. ರಾಜ್ಯ ಸರಕಾರ ಪೊಲೀಸರ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸುವುದಾಗಿ ತಿಳಿಸಿದೆ ಮತ್ತು ಅದಕ್ಕೆ ಬದ್ಧವಾಗಿ ಎಂದು ಪೊಲೀಸ್ ಕಮೀಷನರ್ ಹೇಳಿದರು.

-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications