ಪೊಲೀಸರ ಪ್ರತಿಭಟನೆಗೆ ಆರ್ಟಿಐ ಕಾರ್ಯಕರ್ತರ ಬೆಂಬಲ
ಬೆಂಗಳೂರು, ಹುಬ್ಬಳ್ಳಿ, ಮೇ 31: ಜೂನ್ 4 ರಂದು ನಡೆಯಲಿರುವ ಪೊಲೀಸರ ಪ್ರತಿಭಟನೆಗೆ ಆರ್ ಟಿಐ ಕಾರ್ಯಕರ್ತರು ಬೆಂಬಲ ನೀಡಿ ಬೃಹತ್ ಮೆರವಣಿಗೆ ನಡೆಸಲಿದ್ದಾರೆ ಎಂದು ಆರ್ ಟಿಐ ಕಾರ್ಯಕರ್ತ ಪ್ರಶಾಂತಕುಮಾರ ತಿಳಿಸಿದರು.
ಪ್ರೆಸ್ ಕ್ಲಬ್ ನಲ್ಲಿ ಏರ್ಪಡಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಜೂನ್ 4 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಪದ್ಮನಾಭನಗರದಿಂದ ಮುಖ್ಯಮಂತ್ರಿ ನಿವಾಸದವರೆಗೂ ಬೈಕ್ ನಲ್ಲಿ ಮೆರವಣಿಗೆ ಸಾಗಲಾಗುವುದು ಎಂದರು. [ಪೊಲೀಸರ ಸಮಸ್ಯೆಗೆ ಕಿವಿಗೊಡಿ, ಸರ್ಕಾರಕ್ಕೆ ಆಪ್ ಸಲಹೆ]

ಸುಮಾರು 3 ದಶಕಗಳ ಕಾಲದಿಂದ ಪೊಲೀಸರ ನ್ಯಾಯಯುತ ಸಂವಿಧಾನಬದ್ಧ ಹಕ್ಕುಗಳನ್ನು ಈಡೇರಿಸುವಲ್ಲಿ ಸರಕಾರ ವಿಫಲವಾಗಿದೆ. ರಾಜ್ಯದಲ್ಲಿ ಸುಮಾರು 28 ಸಾವಿರ ಪೊಲೀಸ್ ಹುದ್ದೆಗಳು ಖಾಲಿಯಿವೆ ಈ ಹುದ್ದೆಗಳಿಗೆ ಹೊಸ ನೇಮಕಾತಿ ಮಾಡಿಕೊಳ್ಳದೇ, ಈಗಾಗಲೇ ಇರುವ ಪೊಲೀಸ್ ಸಿಬ್ಬಂದಿಯಿಂದಲೇ ದುಡಿಸಿಕೊಳ್ಳುತ್ತಿರುವುದು ಅಮಾನವೀಯ ಕೃತ್ಯ ಎಂದು ಹೇಳಿದರು.
ಪೊಲೀಸರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಮುಂದಾಗಬೇಕು ಎಂದು ಒತ್ತಾಯ ಮಾಡಿದರು. ಈ ಸಂದರ್ಭ ಧನಂಜಯ್, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.[ಸಾಮೂಹಿಕ ರಜೆಗೆ 50 ಸಾವಿರ ಪೊಲೀಸರ ನಿರ್ಧಾರ]
ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಡಿ:
ಹುಬ್ಬಳ್ಳಿ: ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ ಜೂ. 4 ರಂದು ಹಮ್ಮಿಕೊಂಡಿರುವ ಪೊಲೀಸ್ ರ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಪೊಲೀಸ್ ಸಿಬ್ಬಂದಿಗೆ ಸೂಚಿಸಿದರು. ರಾಜ್ಯ ಸರಕಾರ ಪೊಲೀಸರ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸುವುದಾಗಿ ತಿಳಿಸಿದೆ ಮತ್ತು ಅದಕ್ಕೆ ಬದ್ಧವಾಗಿ ಎಂದು ಪೊಲೀಸ್ ಕಮೀಷನರ್ ಹೇಳಿದರು.













Click it and Unblock the Notifications