ಸಿಎಂ ಕಾರ್ಯಕ್ರಮದಲ್ಲಿ ಅಂಗವಿಕಲರಿಗಿಲ್ಲ ಬೆಲೆ
ಕಡೂರು, ಜನವರಿ 06: ನಿನ್ನೆ ಕಡೂರಿನಲ್ಲಿ ನಡೆದ ಮುಖ್ಯಮಂತ್ರಿಗಳ ಸಾಧನಾ ಸಮಾವೇಶದ ಸಮಯದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಆಗಲು ಕಾತರಿಸಿದ ಅಂಗವಿಕಲ ವ್ಯಕ್ತಿಯೊಬ್ಬನ ಬಳಿ ಪೊಲೀಸರು ದರ್ಪದಿಂದ ವರ್ತಿಸಿದ್ದಾರೆ.
ಕಡೂರಿನಲ್ಲಿ ಮುಖ್ಯಮಂತ್ರಿಗಳ ಭಾಷಣ ಮುಗಿದ ಕೂಡಲೆ ಮುಖ್ಯಮಂತ್ರಿಗಳನ್ನು ಭೇಟಿ ಆಗಲು ಎರಡೂ ಕಾಲಿಲ್ಲದ ಮುಸ್ಲಿಂ ವ್ಯಕ್ತಯೊಬ್ಬ ತೆವಳುತ್ತಾ ವೇದಿಕೆ ಬಳಿ ಹೋಗಲು ಕಷ್ಟಪಡುತ್ತಿದ್ದ ಆದರೆ ಅಲ್ಲಿದ್ದ ಒಬ್ಬ ಪಿಎಸ್ಐ ಅಂಗವಿಕಲನನ್ನು ಅನಾಮತ್ತು ಎತ್ತಿ ವೇದಿಕೆಯಿಂದ ದೂರ ಇರಿಸಿ ಆತನನ್ನು ವೇದಿಕೆ ಹತ್ತದಂತೆ ತಡೆದಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸರ್ವರಿಗೂ ಸಮಬಾಳ್ವೆ, ನೊಂದವರ ಪರ ಧನಿ ಮತ್ತಿತರ ವಿಷಯಗಳ ಬಗ್ಗೆ ಒಂದು ಗಂಟೆ ಕಾಲ ಒಣ ಭಾಷಣ ಬಿಗಿದ ಸಿಎಂ ಸಿದ್ದರಾಮಯ್ಯ ಅವರ ಎದುರೇ ಅವರ ಭಾಷಣದ ಆಶಯಕ್ಕೆ ವಿರುದ್ಧವಾದ ಘಟನೆ ನಡೆದಿದೆ. ಘಟನೆ ನಡೆದಾಗ ಅಲ್ಲಿ ಪೊಲೀಸರ ಜೊತೆಗೆ ವಿವಿಧ ಕಾಂಗ್ರೆಸ್ ಕಾರ್ಯಕರ್ತರು ಇದ್ದರೂ ಸಹ ಯಾರೊಬ್ಬರು ಕೂಡ ಅಂಗವಿಕಲನ ಮೊರೆ ಏನು ಎಂದು ಕೇಳಲಿಲ್ಲ, ಆತನ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ತಲುಪಿಸುವ ಭರವಸೆಯನ್ನು ನೀಡಲಿಲ್ಲ.

ಜನಜಂಗುಳಿಯಲ್ಲಿ ಸಿಕ್ಕಿ ಒದ್ದಾಡುತ್ತಿದ್ದ ಆತನನ್ನು ಸುರಕ್ಷಿತ ಜಾಗಕ್ಕೆ ಕರೆದುಕೊಂಡು ಹೋಗಿ ಬಿಡುವ ಕನಿಷ್ಟ ಸೌಜನ್ಯವನ್ನೂ ಅಲ್ಲಿದ್ದ ಪೊಲೀಸರಾಗಲಿ, ಕಾಂಗ್ರೆಸ್ ಕಾರ್ಯಕರ್ತರು ಮಾಡಲಿಲ್ಲ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತಿದೆ.
ರಾಜಕಾರಣಿಗಳ ಆದರ್ಶಗಳು ಕೇವಲ ಭಾಷಣಗಳಿಗಷ್ಟೇ ಸೀಮಿತ, ಜನಸ್ನೇಹಿ ಪೊಲೀಸ್ ಎಂಬುದು ಅಧಿಕಾರಿಗಳ ಬಾಯಿ ತೆವಲಿನ ಮಾತಷ್ಟೆ ಎಂಬುದು ನಿನ್ನೆ ಕಡೂರಿನಲ್ಲಿ ನಡೆದ ಘಟನೆಯಿಂದ ವೇದ್ಯವಾಗಿದೆ. ರಾಜಕಾರಣಿಗಳು ನುಡಿದಂತೆ ನಡೆದುಕೊಳ್ಳಲಿ ಎಂಬುದು ಸಾರ್ವಕಾಲಿಕ ಆಶಯವಷ್ಟೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications