ಗೃಹ ಲಕ್ಷ್ಮೀ ಯೋಜನೆ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆಗಿರುವುದರ ಹಿಂದೆ ಇದೆ ಲೋಕಸಮರದ ಲೆಕ್ಕಾಚಾರ!?
ಬೆಂಗಳೂರು, ಆಗಸ್ಟ್ 24: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮೀ ಯೋಜನೆ ಆಗಸ್ಟ್ 30 ರಂದು ಜಾರಿಯಾಗಲಿದ್ದು, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮೀಗೆ ಚಾಲನೆ ನೀಡಲಿದ್ದಾರೆ. ಲಕ್ಷ್ಮೀ ಯೋಜನೆಗೆ ಮೊದಲು ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಆದರೆ, ಇದೀಗ ಈ ಕಾರ್ಯಕ್ರ, ಮೈಸೂರಿಗೆ ಶಿಫ್ಟ್ ಆಗಿದ್ದು, ಹಲವು ಚರ್ಚೆಗೆ ಗ್ರಾಸವಾಗಿದೆ.
ಹೌದು, ವಿಧಾನಸಭಾ ಚುನಾವಣೆಯ ಬಳಿಕ 2024 ರ ಲೋಕಸಭಾ ಚುನಾವಣೆಯ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನವನ್ನ ಗೆಲ್ಲಲು ಚಿಂತನೆಯನ್ನ ನಡೆಸಿದ್ದು, ಇತ್ತ ಸಿದ್ದರಾಮಯ್ಯ ಅವರಿಗೆ ತಮ್ಮ ಪುತ್ರನ ರಾಜಕೀಯ ಭವಿಷ್ಯವು ಮುಖ್ಯವಾಗಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ತಂದೆಗಾಗಿ ವರುಣಾ ವಿಧಾನಸಭಾ ಕ್ಷೇತ್ರವನ್ನ ತ್ಯಾಗ ಮಾಡಿರುವ ಯತೀಂದ್ರ ಸಿದ್ದರಾಮಯ್ಯ ಅವರ ಭವಿಷ್ಯವನ್ನ ರೂಪಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನದೇ ಆದ ವರ್ಚಸ್ಸನ್ನ ಹೊಂದಿದ್ದು, ಗೃಹ ಲಕ್ಷ್ಮೀ ಯೋಜನೆ ಉದ್ಘಾಟನೆ ಹೆಸರಿನಲ್ಲಿ ಲೋಕಸಮರಕ್ಕೆ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ನಡೆಸಿದ್ದಾರೆ. ಈಗಾಗಲೇ ಮೈಸೂರು ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮೇಲೆ ಹಿಡಿತವನ್ನ ಇನ್ನಷ್ಟು ಹೆಚ್ಚಿಸುವ ಸಲುವಾಗಿ ಬೆಳಗಾವಿಯಿಂದ ಮೈಸೂರಿಗೆ ಯೋಜನೆ ಜಾರಿಗೆ ಸಿದ್ದರಾಮಯ್ಯ ತಂತ್ರಗಾರಿಕೆ ನಡೆಸಿದ್ದಾರೆ ಎನ್ನಲಾಗಿದೆ.
ಗೃಹ ಲಕ್ಷ್ಮೀ ಉದ್ಘಾಟನೆ ನೆಪದಲ್ಲಿ ಮೈಸೂರು ಲೋಕಸಭಾ ವಶಕ್ಕೆ ಪಡೆಯಲು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿದ್ದತೆ ನಡೆಸಿದ್ದು, ಉದ್ಘಾಟನೆ ನೆಪದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನ ಕರೆಸುವ ಮೂಲಕ ತವರು ಜಿಲ್ಲೆಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಒಂದು ಕಡೆ ಪುತ್ರ ಯತೀಂದ್ರ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಒಂದುಕಡೆಯಾದ್ರೆ, ಇತ್ತ ಪದೇ ಪದೇ ವಾಗ್ದಾಳಿ ನಡೆಸುವ ಹಾಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನ ಈ ಬಾರೀ ಸೋಲಿಸುವ ಮೂಲಕ ಮೈಸೂರು ಗೆಲ್ಲುವ ತಂತ್ರವನ್ನ ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಮೈಸೂರು ಕ್ಷೇತ್ರದಲ್ಲಿ ಈ ಬಾರೀ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಕಣಕ್ಕಿಳಿಸಲು ಕುರಿತು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.
ಆದರೆ, ಕರ್ನಾಟಕದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸದಿದ್ದರೆ, ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾತ್ರ ಪಕ್ಕಾ ಎನ್ನಲಾಗಿದ್ದು, ಪುತ್ರ ರಾಜಕೀಯ ಭವಿಷ್ಯಕ್ಕಾಗಿ ಸಿದ್ದರಾಮಯ್ಯ ಗೃಹ ಲಕ್ಷ್ಮೀ ಯೋಜನೆಯನ್ನ ತವರಿನಲ್ಲಿ ಜಾರಿಗೊಳಿಸುವ ಮೂಲಕ ಮತಭೇಟಿಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications