ಕರ್ನಾಟಕದಲ್ಲಿ ರಾಜಕೀಯ ಬೃಹನ್ನಾಟಕ, ಯಡಿಯೂರಪ್ಪ ನಡೆ ಏನು?
ಬೆಂಗಳೂರು, ಜುಲೈ 06 : ಕರ್ನಾಟಕದಲ್ಲಿ ಶನಿವಾರ ರಾಜೀನಾಮೆ ಪರ್ವ ಆರಂಭವಾಗುತ್ತಿದ್ದಂತೆ, ಬೆಳವಣಿಗೆಯ ಲಾಭ ಪಡೆಯುವ ಉದ್ದೇಶದಿಂದ ರಾಜ್ಯಪಾಲರ ಬಳಿ ಧಾವಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಮುಂದಿನ ನಡೆ ಏನಿರಲಿದೆ? ಇದು ಭಾರೀ ಕುತೂಹಲಕರವಾಗಿದೆ.
ಹಿಂದೆ ಮೂರ್ನಾಲ್ಕು ಬಾರಿ ಆಪರೇಷನ್ ಕಮಲ ನಡೆಸಿ ಯಡಿಯೂರಪ್ಪ ಅವರು ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದ ಮೈತ್ರಿ ಸರಕಾರವನ್ನು ಬೀಳಿಸಲು ಪ್ರಯತ್ನ ನಡೆಸಿದ್ದರು. ಆದರೆ, ಆ ಎಲ್ಲ ಸಲವೂ ಅವರು ಸೋತಿದ್ದರು. ಡಿಕೆ ಶಿವಕುಮಾರ್ ಅವರ ಕೈವಾಡದಿಂದಾಗಿ ಪ್ರತಿಬಾರಿ ಆಪರೇಷನ್ ಕಮಲ ವಿಫಲವಾಗಿತ್ತು.
ಆದರೆ, ಈ ಬಾರಿ ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಯಡಿಯೂರಪ್ಪ ಅವರು ಪ್ರತ್ಯಕ್ಷವಾಗಿ ಆಪರೇಷನ್ ಕಮಲಕ್ಕೂ ಇಳಿಯದೆ, ಸರಕಾರವನ್ನು ಬೀಳಿಸಲು ಯತ್ನ ನಡೆಸದೆ, ಪರೋಕ್ಷವಾಗಿ ಮೈತ್ರಿ ಸರಕಾರವನ್ನು ಶಿಥಿಲಗೊಳಿಸಲು ಯತ್ನಿಸಿದ್ದು ಸ್ಪಷ್ಟ. ಈಗಿನ ಬೆಳವಣಿಗೆಗಳು ಮಾತ್ರ ಭಾರತೀಯ ಜನತಾ ಪಕ್ಷಕ್ಕೆ ಪೂರಕವಾಗಿವೆ.

ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ, ಮೈತ್ರಿ ಸರಕಾರ ಅಲ್ಪಮತಕ್ಕೆ ಇಳಿದಿದ್ದು, ಸರಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಬೇಕೆಂದು ಯಡಿಯೂರಪ್ಪ ಕೋರುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ, ಹೈಕಮಾಂಡ್ ಅಣತಿಯಂತೆ ಯಡಿಯೂರಪ್ಪನವರು ಕಾದು ನೋಡುವ ತಂತ್ರ ಅನುಸರಿಸಲಿದ್ದಾರೆ.
ಈಗ ನಡೆಯುತ್ತಿರುವ ಬೆಳವಣಿಗೆಯನ್ನು ಕಾದು ನೋಡುವ ತಂತ್ರ ಅನುಸರಿಸುತ್ತೇವೆ. ರಾಜ್ಯಪಾಲರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡುತ್ತೇವೆ ಎಂದು ಮಾಧ್ಯಮಗಳಿಗೆ ಯಡಿಯೂರಪ್ಪನವರು ಹೇಳಿದ್ದು, ಸರಕಾರ ರಚಿಸುವ ಯಾವುದೇ ಪ್ರಯತ್ನಕ್ಕೆ ತಾವಾಗಿಯೇ ಕೈಹಾಕದಿರಲು ನಿರ್ಧರಿಸಿದ್ದಾರೆ.
ಇಬ್ಬರು ಶಾಸಕರು ಈಗಾಗಲೆ ರಾಜೀನಾಮೆ ಸಲ್ಲಿಸಿರುವುದರಿಂದ ಶಾಸಕರ ಸಂಖ್ಯೆ 222ಕ್ಕೆ ಇಳಿದಿದೆ. ಬಿಜೆಪಿಯ ಬಳಿ 105 ಶಾಸಕರಿದ್ದಾರೆ. ಹನ್ನೆರಡು ಶಾಸಕರು ಸಲ್ಲಿಸಿರುವ ರಾಜೀನಾಮೆ ಅಂಗೀಕಾರವಾದರೆ ಸದನದ ಸಂಖ್ಯೆ 210ಕ್ಕೆ ಕುಸಿಯಲಿದೆ. ಆಗ, ಒಂದು ವೇಳೆ ರಾಜ್ಯಪಾಲರು ಯಡಿಯೂರಪ್ಪನವರಿಗೆ ಸರಕಾರ ರಚಿಸಲು ಆಹ್ವಾನಿಸಿದರೆ, ಬಹುಮತ ಸಾಬೀತುಪಡಿಸಲು 106 ಶಾಸಕರ ಅಗತ್ಯ ಯಡಿಯೂರಪ್ಪನವರಿಗೆ ಬೀಳಲಿದೆ.
ಈ ಕಂತ್ರಾಟವೇ ಬೇಡ, ಮತ್ತೆ ಸರಕಾರ ರಚಿಸಿ ಕೆಲದಿನಗಳಲ್ಲಿ ಮತ್ತೆ ಬಿದ್ದು ಹೋಗುವ ಸಾಧ್ಯತೆ ಇರುವುದರಿಂದ, ಮತ್ತೆ ವಿಧಾನಸಭೆ ಚುನಾವಣೆಗೆ ಸಿದ್ಧರಾಗುವುದು ಒಳ್ಳೆಯದು ಎಂಬ ನಿರ್ಧಾರಕ್ಕೂ ಬರುವ ಸಂಭಾವ್ಯತೆಯನ್ನು ತಳ್ಳಿಹಾಕುವಂತಿಲ್ಲ. ಹೀಗಾದರೆ, ರಾಜ್ಯಪಾಲರು ಪರಿಸ್ಥಿತಿಯ ಪರಾಮರ್ಶೆ ಮಾಡಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದರೂ ಅಚ್ಚರಿಯಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications