ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ರಾಜಕೀಯ ಬೃಹನ್ನಾಟಕ, ಯಡಿಯೂರಪ್ಪ ನಡೆ ಏನು?

|
Google Oneindia Kannada News

ಬೆಂಗಳೂರು, ಜುಲೈ 06 : ಕರ್ನಾಟಕದಲ್ಲಿ ಶನಿವಾರ ರಾಜೀನಾಮೆ ಪರ್ವ ಆರಂಭವಾಗುತ್ತಿದ್ದಂತೆ, ಬೆಳವಣಿಗೆಯ ಲಾಭ ಪಡೆಯುವ ಉದ್ದೇಶದಿಂದ ರಾಜ್ಯಪಾಲರ ಬಳಿ ಧಾವಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಮುಂದಿನ ನಡೆ ಏನಿರಲಿದೆ? ಇದು ಭಾರೀ ಕುತೂಹಲಕರವಾಗಿದೆ.

ಹಿಂದೆ ಮೂರ್ನಾಲ್ಕು ಬಾರಿ ಆಪರೇಷನ್ ಕಮಲ ನಡೆಸಿ ಯಡಿಯೂರಪ್ಪ ಅವರು ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದ ಮೈತ್ರಿ ಸರಕಾರವನ್ನು ಬೀಳಿಸಲು ಪ್ರಯತ್ನ ನಡೆಸಿದ್ದರು. ಆದರೆ, ಆ ಎಲ್ಲ ಸಲವೂ ಅವರು ಸೋತಿದ್ದರು. ಡಿಕೆ ಶಿವಕುಮಾರ್ ಅವರ ಕೈವಾಡದಿಂದಾಗಿ ಪ್ರತಿಬಾರಿ ಆಪರೇಷನ್ ಕಮಲ ವಿಫಲವಾಗಿತ್ತು.

ಯಡಿಯೂರಪ್ಪ ಕೈಗೆ ಅಧಿಕಾರವೋ, ರಾಷ್ಟ್ರಪತಿ ಆಳ್ವಿಕೆಯೋ?ಯಡಿಯೂರಪ್ಪ ಕೈಗೆ ಅಧಿಕಾರವೋ, ರಾಷ್ಟ್ರಪತಿ ಆಳ್ವಿಕೆಯೋ?

ಆದರೆ, ಈ ಬಾರಿ ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಯಡಿಯೂರಪ್ಪ ಅವರು ಪ್ರತ್ಯಕ್ಷವಾಗಿ ಆಪರೇಷನ್ ಕಮಲಕ್ಕೂ ಇಳಿಯದೆ, ಸರಕಾರವನ್ನು ಬೀಳಿಸಲು ಯತ್ನ ನಡೆಸದೆ, ಪರೋಕ್ಷವಾಗಿ ಮೈತ್ರಿ ಸರಕಾರವನ್ನು ಶಿಥಿಲಗೊಳಿಸಲು ಯತ್ನಿಸಿದ್ದು ಸ್ಪಷ್ಟ. ಈಗಿನ ಬೆಳವಣಿಗೆಗಳು ಮಾತ್ರ ಭಾರತೀಯ ಜನತಾ ಪಕ್ಷಕ್ಕೆ ಪೂರಕವಾಗಿವೆ.

Political high drama in Karnataka : What will Yeddyurappa do?

ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ, ಮೈತ್ರಿ ಸರಕಾರ ಅಲ್ಪಮತಕ್ಕೆ ಇಳಿದಿದ್ದು, ಸರಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡಬೇಕೆಂದು ಯಡಿಯೂರಪ್ಪ ಕೋರುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ, ಹೈಕಮಾಂಡ್ ಅಣತಿಯಂತೆ ಯಡಿಯೂರಪ್ಪನವರು ಕಾದು ನೋಡುವ ತಂತ್ರ ಅನುಸರಿಸಲಿದ್ದಾರೆ.

ದೋಸ್ತಿ ಸರ್ಕಾರದ ಅಂತ್ಯ? : ಕ್ಷಣ ಕ್ಷಣದ ಮಾಹಿತಿ Live Updatesದೋಸ್ತಿ ಸರ್ಕಾರದ ಅಂತ್ಯ? : ಕ್ಷಣ ಕ್ಷಣದ ಮಾಹಿತಿ Live Updates

ಈಗ ನಡೆಯುತ್ತಿರುವ ಬೆಳವಣಿಗೆಯನ್ನು ಕಾದು ನೋಡುವ ತಂತ್ರ ಅನುಸರಿಸುತ್ತೇವೆ. ರಾಜ್ಯಪಾಲರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡುತ್ತೇವೆ ಎಂದು ಮಾಧ್ಯಮಗಳಿಗೆ ಯಡಿಯೂರಪ್ಪನವರು ಹೇಳಿದ್ದು, ಸರಕಾರ ರಚಿಸುವ ಯಾವುದೇ ಪ್ರಯತ್ನಕ್ಕೆ ತಾವಾಗಿಯೇ ಕೈಹಾಕದಿರಲು ನಿರ್ಧರಿಸಿದ್ದಾರೆ.

ಹೋಗಿದ್ದು 12 ಜನ, ರಾಜೀನಾಮೆ ಕೊಟ್ಟಿದ್ದು 11 ಶಾಸಕರು! ಹೋಗಿದ್ದು 12 ಜನ, ರಾಜೀನಾಮೆ ಕೊಟ್ಟಿದ್ದು 11 ಶಾಸಕರು!

ಇಬ್ಬರು ಶಾಸಕರು ಈಗಾಗಲೆ ರಾಜೀನಾಮೆ ಸಲ್ಲಿಸಿರುವುದರಿಂದ ಶಾಸಕರ ಸಂಖ್ಯೆ 222ಕ್ಕೆ ಇಳಿದಿದೆ. ಬಿಜೆಪಿಯ ಬಳಿ 105 ಶಾಸಕರಿದ್ದಾರೆ. ಹನ್ನೆರಡು ಶಾಸಕರು ಸಲ್ಲಿಸಿರುವ ರಾಜೀನಾಮೆ ಅಂಗೀಕಾರವಾದರೆ ಸದನದ ಸಂಖ್ಯೆ 210ಕ್ಕೆ ಕುಸಿಯಲಿದೆ. ಆಗ, ಒಂದು ವೇಳೆ ರಾಜ್ಯಪಾಲರು ಯಡಿಯೂರಪ್ಪನವರಿಗೆ ಸರಕಾರ ರಚಿಸಲು ಆಹ್ವಾನಿಸಿದರೆ, ಬಹುಮತ ಸಾಬೀತುಪಡಿಸಲು 106 ಶಾಸಕರ ಅಗತ್ಯ ಯಡಿಯೂರಪ್ಪನವರಿಗೆ ಬೀಳಲಿದೆ.

ಈ ಕಂತ್ರಾಟವೇ ಬೇಡ, ಮತ್ತೆ ಸರಕಾರ ರಚಿಸಿ ಕೆಲದಿನಗಳಲ್ಲಿ ಮತ್ತೆ ಬಿದ್ದು ಹೋಗುವ ಸಾಧ್ಯತೆ ಇರುವುದರಿಂದ, ಮತ್ತೆ ವಿಧಾನಸಭೆ ಚುನಾವಣೆಗೆ ಸಿದ್ಧರಾಗುವುದು ಒಳ್ಳೆಯದು ಎಂಬ ನಿರ್ಧಾರಕ್ಕೂ ಬರುವ ಸಂಭಾವ್ಯತೆಯನ್ನು ತಳ್ಳಿಹಾಕುವಂತಿಲ್ಲ. ಹೀಗಾದರೆ, ರಾಜ್ಯಪಾಲರು ಪರಿಸ್ಥಿತಿಯ ಪರಾಮರ್ಶೆ ಮಾಡಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದರೂ ಅಚ್ಚರಿಯಿಲ್ಲ.

English summary
Political high drama in Karnataka : What will BJP state president BS Yeddyurappa do? BSY has decided to wait and watch political developments and come to conclusion. More than dozen MLAs of Congress and JDS have offered resignation to speaker.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X