ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ: ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಗಣ್ಯರ ಸಂತಾಪ
ಹಾಸನ, ಮಾರ್ಚ್ 23: ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (74) ಗುರುವಾರ ವಿಧಿವಶರಾದರು. ಬೆಳ್ಳೂರು ಕ್ರಾಸ್ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆ ದಾಖಲಾಗಿದ್ದ ಸ್ವಾಮೀಜಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಇತಿಹಾಸ ತಜ್ಞರು, ತತ್ವ ಜ್ಞಾನಿಗಳು ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ.
— Basavaraj S Bommai (@BSBommai) March 23, 2023
1/2 pic.twitter.com/ljRit1Nof1
ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಶ್ರವಣಬೆಳಗೊಳದ ಶ್ರೀ ಜೈನಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಅವರು ಅಗಲಿದ ವಿಷಯ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಶ್ರೀ ಭಗವಾನ್ ಬಾಹುಬಲಿ ಅವರ ಶಾಂತಿ, ಅಹಿಂಸೆ, ಸಹನೆ ತತ್ವಗಳನ್ನು ಪಸರಿಸುತ್ತಾ ಜನರಲ್ಲಿ ಅರಿವಿನ ಬೆಳಕು ಮೂಡಿಸಿದ್ದ ಪರಮಪೂಜ್ಯರು ನಾಡಿಗೆ ಅಪಾರ ಸೇವೆ ಸಲ್ಲಿಸಿದ್ದರು.1/2 pic.twitter.com/dyBg4PfF8U
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 23, 2023
ಶ್ರವಣಬೆಳಗೊಳದ ಶ್ರೀ ಜೈನಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಅವರು ಅಗಲಿದ ವಿಷಯ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಶ್ರೀ ಭಗವಾನ್ ಬಾಹುಬಲಿ ಅವರ ಶಾಂತಿ, ಅಹಿಂಸೆ, ಸಹನೆ ತತ್ವಗಳನ್ನು ಪಸರಿಸುತ್ತಾ ಜನರಲ್ಲಿ ಅರಿವಿನ ಬೆಳಕು ಮೂಡಿಸಿದ್ದ ಪರಮಪೂಜ್ಯರು ನಾಡಿಗೆ ಅಪಾರ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಮಠದ ಭಕ್ತರು, ನಾಡಿನ ಜನರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸ್ವಾಮೀಜಿಗಳ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದು, ಶ್ರವಣಬೆಳಗೊಳದ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವಾಯಿತು. ಧಾರ್ಮಿಕ ಚಟುವಟಿಕೆಗಳ ಜೊತೆ ಶಿಕ್ಷಣ, ಸಮಾಜ ಸುಧಾರಣೆಗಾಗಿ ದುಡಿಯುತ್ತಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಬಡವಾಗಿದೆ. ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ದೇವರು ಕರುಣಿಸಲಿ ಎಂದಿದ್ದಾರೆ.
ಶ್ರವಣಬೆಳಗೊಳದ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವಾಯಿತು.
— Siddaramaiah (@siddaramaiah) March 23, 2023
ಧಾರ್ಮಿಕ ಚಟುವಟಿಕೆಗಳ ಜೊತೆ ಶಿಕ್ಷಣ, ಸಮಾಜ ಸುಧಾರಣೆಗಾಗಿ ದುಡಿಯುತ್ತಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಬಡವಾಗಿದೆ.
ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ದೇವರು ಕರುಣಿಸಲಿ. pic.twitter.com/AKtNpZrzPx
ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಸ್ವಸ್ಥಿ ಶ್ರಿ ಚಾರುಕೀರ್ತಿ ಎಂಬ ಬಿರುದಾಂಕಿತ ಜೈನ ಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರ ಭಕ್ತವರ್ಗವನ್ನು ಹೊಂದಿದ್ದಾರೆ. ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವಾಗಿದೆ. ಪೂಜ್ಯರು ಧರ್ಮ ರಕ್ಷಣೆ, ಸಮಾಜ ಸೇವೆಗೆ ತಮ್ಮ ಜೀವನ ಅರ್ಪಿಸಿಕೊಂಡಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಅವರ ಅಗಲಿಕೆ ನೋವು ಭರಿಸುವ ಶಕ್ತಿ ಅವರ ಭಕ್ತ ವೃಂದಕ್ಕೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಶ್ರವಣ ಬೆಳಗೊಳದ ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಯವರು ಜಿನೈಕರಾಗಿರುವ ಸುದ್ದಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಅಪಾರ ಭಕ್ತ ಸಮೂಹಕ್ಕೆ ದೇವರು ಕರುಣಿಸಲಿ. pic.twitter.com/p3NfafIXt4
— DK Shivakumar (@DKShivakumar) March 23, 2023
ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಜೈನ ಮಠದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು ವಿಧಿವಶರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಪೂಜ್ಯರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕದ ಜೈನ ಸಮುದಾಯದ ಹಿರಿಯ ಸ್ವಾಮೀಜಿಗಳಾಗಿದ್ದ ಶ್ರೀಗಳು ಸಂಸ್ಕೃತ, ಕನ್ನಡದಲ್ಲಿ ಪಾಂಡಿತ್ಯ ಹೊಂದಿದ್ದರು. ಜೈನ ತತ್ವಶಾಸ್ತ್ರದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದರು. ಜೈನರ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ಶ್ರವಣಬೆಳಗೊಳದಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಇವರ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆಯುತ್ತಿತ್ತು ಎಂದಿದ್ದಾರೆ.
ಶ್ರವಣಬೆಳಗೊಳ ಜೈನ ಮಠದ ಸ್ವಸ್ಥಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ನಮ್ಮನ್ನಗಲಿದ ಸುದ್ದಿ ತಿಳಿದು ದುಃಖವಾಗಿದೆ.
— Nalinkumar Kateel (@nalinkateel) March 23, 2023
ದೇಶದಾದ್ಯಂತ ಅವರ ಅನುಯಾಯಿಗಳು ಹಾಗೂ ಭಕ್ತವೃದಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಓಂ ಶಾಂತಿ. pic.twitter.com/7eZCqTXDQ7
ಶ್ರವಣಬೆಳಗೊಳ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಜಿನೈಕ್ಯರಾದ ಸುದ್ದಿ ಅತ್ಯಂತ ದುಖಃವನ್ನುಂಟುಮಾಡಿದೆ. 1970ರಲ್ಲಿ ಪಟ್ಟಾಭಿಶಿಕ್ತರಾದ ಸ್ವಾಮೀಜಿಯವರು ಸುಮಾರು ಐದು ದಶಕಗಳ ಕಾಲ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದರು ಎಂದು ಸ್ವಾಮೀಜಿಗಳ ಅಗಲಿಕೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ.
ಧಾರ್ಮಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಅಪಾರ ಕೊಡುಗೆಗಳನ್ನು ನೀಡಿದ ಸ್ವಾಮೀಜಿಯವರು ಸದಾ ಕಾಲ ಅಹಿಂಸೆ, ತ್ಯಾಗ ಹಾಗೂ ಶಾಂತಿಯಿಂದ ಜೈನ ಪರಂಪರೆಯನ್ನು ಬೆಳಗಿದ್ದರು. ಇವರು ಮೂಲತಃ ನಮ್ಮ ಕಾರ್ಕಳದ ಹೆಬ್ರಿ ತಾಲೂಕಿನ ವರಂಗದವರು ಎನ್ನುವುದೇ ನಮಗೆಲ್ಲರಿಗೂ ಹೆಮ್ಮೆ. ಜಿನೈಕ್ಯರಾದ ಪೂಜ್ಯರ ಆತ್ಮಕ್ಕೆ ಸದ್ಗತಿ ಕೋರುತ್ತಾ ಅವರ ಅಗಲಿಕೆಯ ದುಖಃವನ್ನು ಸಹಿಸುವ ಶಕ್ತಿಯನ್ನು ಸಮಸ್ತ ಭಕ್ತರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ಶೋಕ ವ್ಯಕ್ತಪಡಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications