ಪುನೀತ್ ಜನ್ಮದಿನದಂದು 'ಅಪ್ಪು ಸ್ಮರಣೆ' ಮಾಡಿದ ರಾಜಕೀಯ ನಾಯಕರುಗಳು
ಬೆಂಗಳೂರು, ಮಾರ್ಚ್ 17: ನಟ ದಿವಂಗತ ಪುನೀತ್ ರಾಜ್ಕುಮಾರ್ ಹುಟ್ಟಹಬ್ಬದ ಸಂಭ್ರಮವು ಕರ್ನಾಟಕದಲ್ಲಿ ಇಂದು ಮನೆ ಮಾಡಿದೆ. ರಾಜ್ಯದಲ್ಲಿ ಹಲವಾರು ಮಂದಿ ಪುನೀತ್ ಹುಟ್ಟು ಹಬ್ಬದಂದು ಅಪ್ಪುವನ್ನು ನೆನಪಿಸಿಕೊಂಡಿದ್ದಾರೆ. ಕರ್ನಾಟಕ ರಾಜಕೀಯ ನಾಯಕರುಗಳು ಕೂಡಾ ಪುನೀತ್ರನ್ನು ನೆನಪಿಸಿಕೊಂಡಿದ್ದಾರೆ.
ಈ ನಡುವೆ ಇಂದು ರಾಜ್ಯದಾದ್ಯಂತ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ತೆರೆ ಕಾಣಲಿದೆ. ಪುನೀತ್ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ರಾಜ್ಯದ ಹಲವಾರು ಸಚಿವರುಗಳು, ರಾಜಕೀಯ ನಾಯಕರುಗಳು ಪುನೀತ್ ರಾಜ್ಕುಮಾರ್ ಅವರನ್ನು ಸ್ಮರಿಸಿದ್ದಾರೆ.
ಪುನೀತ್ ಜನ್ಮದಿನದ ಹಿನ್ನೆಲೆ ಕೂ ಮಾಡಿರುವ ಸಚಿವ ಮುರುಗೇಶ್ ನಿರಾಣಿ, "ಕನ್ನಡದ ಧ್ರುವ ತಾರೆಯೊಂದು ಮಿಂಚಿ ನಮ್ಮಿಂದ ಮರೆಯಾಗಿದೆ. ಆ ತಾರೆ ಬೆಳ್ಳಿ ಪರದೆ ಮೇಲೆ 'ಜೇಮ್ಸ್' ಮೂಲಕ ಮತ್ತೆ ಅಬ್ಬರಿಸಲಿದೆ. ಗೋಲ್ಡನ್ ಹಾರ್ಟ್, ಪವರ್ ಸ್ಟಾರ್ ಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು," ಎಂದು ಹೇಳಿದ್ದಾರೆ.

ಗೌರವ ಸಲ್ಲಿಸಿದ ಸಚಿವ ಬಿ ಶ್ರೀರಾಮುಲು
"ಕನ್ನಡ ಚಿತ್ರರಂಗದ ಶ್ರೇಷ್ಠ ನಾಯಕ ನಟ, ಸ್ಯಾಂಡಲ್ ವುಡ್ ನ ಪವರ್ ಸ್ಟಾರ್, ಅಭಿಮಾನಿಗಳ ಅಭಿಮಾನಿ, ನಟ ಸಾರ್ವಭೌಮ, ಕರ್ನಾಟಕ ರತ್ನ ದಿವಂಗತ ಡಾ. ಪುನೀತ್ ರಾಜ್ ಕುಮಾರ್ ಅವರ ಜನ್ಮಜಯಂತಿಯಂದು ನನ್ನ ಗೌರವ ನಮನಗಳು. ಅವರ ಸೇವೆಯ ಗುಣದಿಂದ ನಾವೆಲ್ಲರೂ ಸ್ಫೂರ್ತಿ ಪಡೆಯೋಣ," ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ ಶ್ರೀರಾಮುಲು ಕೂ ಮಾಡಿದ್ದಾರೆ.
ಪುನೀತ್ ಸ್ಮರಿಸಿದ ಅರವಿಂದ್ ಲಿಂಬಾವಳಿ
"ಕನ್ನಡಿಗರ ನೆಚ್ಚಿನ ಧ್ರುವತಾರೆ, ಅಪ್ಪು ಬಾಳಿದ ರೀತಿ ಅದ್ಭುತ ಮತ್ತು ಆದರ್ಶಪ್ರಾಯ. ಅವರು ಸಮಾಜಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಸ್ಮರಿಸುತ್ತಾ ಅವರ ಜನ್ಮ ಜಯಂತಿಯಂದು ಅವರಿಗೆ ಶ್ರದ್ಧೆಯಿಂದ ನಮಿಸುತ್ತೇನೆ," ಎಂದು ಮಾಜಿ ಸಚಿವ, ಮಹದೇವಪು ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಕೂ ನಲ್ಲಿ ಬರೆದುಕೊಂಡಿದ್ದಾರೆ.
ಕನ್ನಡ ಚಿತ್ರರಂಗದ ಅಸ್ತಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಮರೆಯಲಾಗದ ಆ ತಾರೆಗೆ ನನ್ನ ಭಾವಪೂರ್ಣ ನಮನಗಳು. ಕನ್ನಡಿಗರ ಪಾಲಿಗೆ ಸದಾ ಸ್ಫೂರ್ತಿಯ ಚಿಲುಮೆ ಆಗಿರುವ ಅವರು ನಮ್ಮ ಪಾಲಿಗೆ ಸದಾ ಅಮರ.#ಪುನೀತ್_ರಾಜಕುಮಾರ್ pic.twitter.com/w5xeFZc4rk
— H D Kumaraswamy (@hd_kumaraswamy) March 17, 2022
ಶಾಸಕ ಜಿಟಿ ದೇವೇಗೌಡ ಕೂ ಮೂಲಕ, "ಕರುನಾಡ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರು ಕನ್ನಡಿಗರ ಮನೆ ಮಗನಂತಿದ್ದರು. ಸರ್ಕಾರಿ ಶಾಲೆಗಳ ಅಭಿವೃದ್ಧಿ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವುದು, ಅನಾಥ ಹೆಣ್ಣು ಮಕ್ಕಳಿಗೆ ಶಕ್ತಿಧಾಮದ ಮೂಲಕ ಆಸರೆಯಾಗಿ, ಗೋವುಗಳ ಸಂರಕ್ಷಣೆ, ಅಶಕ್ತ ಕಲಾವಿದರು ಹಾಗೂ ತನ್ನಲ್ಲಿ ಯಾರೇ ಕಷ್ಟ ಹೇಳಿಕೊಂಡು ಬಂದಾಗಲೂ ಕೊಡುಗೈ ದಾನಿಯಾಗಿ ಸಹಾಯ ಮಾಡಿದ ಮಾನವತಾವಾದಿ ಪುನೀತ್. ಇಂದು ಅವರ ಜನ್ಮದಿನದಂದು ಅವರನ್ನು ನೆನೆಯುತ್ತ ಗೌರವಪೂರ್ವಕವಾಗಿ ನಮಿಸುವೆ," ಎಂದಿದ್ದಾರೆ.
ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ಟ್ವೀಟ್ ಮಾಡಿ, "ಬೆಟ್ಟದ ಹೂವಾಗಿ ಅರಳಿದೆ,ಎರಡು ನಕ್ಷತ್ರಗಳಾಗಿ ಮಿಂಚಿದೆ, ಅರಸುವಾಗಿ ಚಂದನವನದ ಯುವರತ್ನನಾದೆ, ವೀರ ಕನ್ನಡಿಗನಾಗಿ ಪೃಥ್ವಿಯ ಮೈತ್ರಿ ತೊರೆದು ಪರಮಾತ್ಮನ ಮಿಲನವಾದೆ, ಅಪ್ಪು ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅಪ್ಪು ನೆನಪು ಎಂದಿಗೂ ಅಮರ, ಅಪ್ಪು ಎಂದೆಂದಿಗೂ ಅಜರಾಮರ. ಹ್ಯಾಪಿ ಬರ್ತಡೇ ಅಪ್ಪು," ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿಗಳ ಟ್ವೀಟ್
"ಕನ್ನಡ ಚಿತ್ರರಂಗದ ಅಸ್ತಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಮರೆಯಲಾಗದ ಆ ತಾರೆಗೆ ನನ್ನ ಭಾವಪೂರ್ಣ ನಮನಗಳು. ಕನ್ನಡಿಗರ ಪಾಲಿಗೆ ಸದಾ ಸ್ಫೂರ್ತಿಯ ಚಿಲುಮೆ ಆಗಿರುವ ಅವರು ನಮ್ಮ ಪಾಲಿಗೆ ಸದಾ ಅಮರ," ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
"ಪುನೀತ್ ರಾಜಕುಮಾರ್ ನಮ್ಮಿಂದ ಕಣ್ಮರೆಯಾಗಿದ್ದರೂ ಸರಳ, ಸಜ್ಜನಿಕೆ, ಪ್ರೀತಿ, ಆತ್ಮವಿಶ್ವಾಸದಿಂದ ಕೂಡಿದ್ದ ಅವರ ಪ್ರತಿಭಾಶಾಲಿ ವ್ಯಕ್ತಿತ್ವ ಪ್ರೇರಕಶಕ್ತಿಯಾಗಿ ಕೋಟ್ಯಂತರ ಹೃದಯದಲ್ಲಿ ಅಜರಾಮರ. ಹುಟ್ಟುಹಬ್ಬದ ದಿನ ಅಪ್ಪುವನ್ನು ಪ್ರೀತಿ ಮತ್ತು ದು:ಖದಿಂದ ಸ್ಮರಿಸುತ್ತೇನೆ," ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications