ಕರ್ನಾಟಕದಲ್ಲಿ 1994 ಮತ್ತು 2018ರ ರಾಜಕೀಯ ದಂಗೆಯ ಕಥೆ!
Recommended Video

ಬೆಂಗಳೂರು, ಸೆಪ್ಟೆಂಬರ್ 21: ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರದ ಪತನಕ್ಕೆ ಬಿಜೆಪಿ ತೆರೆಮರೆಯ ಪ್ರಯತ್ನ ಆರಂಭಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜಕೀಯ ದಂಗೆ ನಡೆಸುವುದಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಘಟನೆಯಿಂದ ರಾಜ್ಯ ಕಾರಣದಲ್ಲಿ ಅಲ್ಲೋಲಕಲ್ಲೋಲವನ್ನೇ ಸೃಷ್ಟಿಸಿದ್ದು, ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ. ಆದರೆ ಕರ್ನಾಟಕದ ಇತಿಹಾಸದಲ್ಲಿ ಇದಕ್ಕಿಂತ ಭಾರಿ ದಂಗೆಯೊಂದು 90 ದಶಕದಲ್ಲಿ ನಡೆದಿತ್ತು. ಈಗ ಅಧಿಕಾರ ಉಳಿಸಿಕೊಳ್ಳಲು ದಂಗೆಗೆ ಕುಮಾರಸ್ವಾಮಿ ಕರೆ ಕೊಟ್ಟಿದ್ದರೆ ಹಿಂದೆ ಎಚ್.ಡಿ.ದೇವೇಗೌಡರಿಗೆ ಅಧಿಕಾರಕ್ಕಾಗಿ ಬೆಂಬಲಿಗರ ದಂಗೆ ನಡೆಸಿದ್ದರು.
ಇಂದಿನ ಪರಿಸ್ಥಿತಿಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಪಟ್ಟದಲ್ಲೇ ಕುಳಿತಿದ್ದರೂ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನದ ವಿರುದ್ಧ ದಂಗೆ ಎಬ್ಬಿಸುವ ಮಾತನಾಡಿರುವುದು ಬೀದಿ ರಾಜಕಾರಣಕ್ಕೆ ಸಾಕ್ಷಿಯಾಗಿ ನಿಂತಿದೆ.
ಒಂದೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ ನ ಶಾಸಕರನ್ನು ಸೆಳೆದು, ರಾಜಿನಾಮೆ ಕೊಡಿಸಲು ಬಿಜೆಪಿ ಪ್ರಯತ್ನ ನಡೆಸಿದೆ ಎಂಬ ಬಲವಾದ ಆರೋಪ ಕೇಳಿಬಂದಿದ್ದರೆ, ಮತ್ತೊಂದೆಡೆ, ಕೇಂದ್ರೀಯ ಸಂಸ್ಥೆಗಳಾದ ಆದಾಯ ತೆರಿಗೆ ಇಲಾಖೆ, ಸಿಬಿಐ ಹಾಗೂ ಅಂತಿಮವಾಗಿ ಜಾರಿ ನಿರ್ದೇಶನಾಲಯದ ಮೂಲಕ ಕಾಂಗ್ರೆಸ್ನ ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರ ವಿರುದ್ಧ ನಿಯಂತ್ರಣ ಹೇರಲು ಬಿಜೆಪಿ ಜಾಲ ಬೀಸಿದೆ ಎಂಬ ಆತಂಕ ಸಮ್ಮಿಶ್ರ ಸರ್ಕಾರವನ್ನು ಆತಂಕಕ್ಕೆ ದೂಡಿದೆ.

ಚಿಂದಿಯಾಗಿದ್ದ ವಿಧಾನಸೌಧದ ಕಾರಿಡಾರ್
ಇಂದಿನ ಘಟನೆ 90ರ ದಶಕದಲ್ಲಿ ಎಚ್.ಡಿ.ದೇವೇಗೌಡ ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ನಡೆದ ಬಹಿರಂಗ ಅಟಾಟೋಪವನ್ನು ನೆನಪಿಸಿಕೊಳ್ಳುವಂತೆ ಮಾಡಿದೆ. 1994ರಲ್ಲಿ ಜನತಾದಳ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಾಗ ಜನತಾ ಪರಿವಾರದ ನಾಯಕತ್ವಕ್ಕೆ ರಾಮಕೃಷ್ಣ ಹೆಗಡೆ ಹಾಗೂ ದೇವೇಗೌಡರ ನಡುವೆ ಭಾರಿ ಪೈಪೋಟಿಯನ್ನೇ ಸೃಷ್ಟಿಸಿತ್ತು.

ಹೆಗಡೆ ಬೆಂಬಲಿಗರನ್ನು ಬಡಿದರು!
ರಾಮಕೃಷ್ಣ ಹೆಗಡೆ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತಾರೆ ಎಂಬಂತಹ ವಾತಾವರಣ ನಿರ್ಮಾಣವಾದಾಗ ದೇವೇಗೌಡರ ಬೆಂಬಲಿಗರು ಎನ್ನಲಾದ ಸಾವಿರಾರು ಜನರು ವಿಧಾನಸೌಧಕ್ಕೆ ನುಗ್ಗಿ ದಾಂಧಲೆ ನಡೆಸಿದ್ದರು. ಹೆಗಡೆ ಬೆಂಬಲಿಗರನ್ನು ಸಿಕ್ಕಸಿಕ್ಕಲ್ಲಿ ಬಡಿದಿದ್ದರು. ವಿಶೇಷವಾಗಿ ಉತ್ತರ ಕರ್ನಾಟಕದಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಜನತಾದಳದ ಕಾರ್ಯಕರ್ತರನ್ನು ದೊಣ್ಣೆ, ಕೋಲು, ಕುರ್ಚಿಗಳಿಂದ ಅಟ್ಟಾಡಿಸಿ ಹೊಡೆದಿದ್ದರು. ಅಷ್ಟೇ ಅಲ್ಲ, ತುಮಕೂರು ರಸ್ತೆಯಲ್ಲಿ ಹುಬ್ಬಳ್ಳಿ ಕಡೆಗೆ ಹೋಗುವ ವಾಹನಗಳನ್ನು ರಸ್ತೆಮಧ್ಯೆ ನಿಲ್ಲಿಸಿ, ಅದರಲ್ಲಿದ್ದ ಕಾರ್ಯಕರ್ತರನ್ನು ಥಳಿಸಲಾಗಿತ್ತು.

ದೇವೇಗೌಡರಿಗೆ ಸಿಕ್ಕಿತ್ತು ಪಟ್ಟ
ಅಂತಹ ಪರಿಸ್ಥಿತಿಯ ನಡುವೆಯೇ ಅಂತಿಮವಾಗಿ ಹೆಗಡೆ ಅವರನ್ನು ಕೈಬಿಟ್ಟು ದೇವೇಗೌಡರು ನೂತನ ಮುಖ್ಯಮಂತ್ರಿಯನ್ನಾಗಿ ಜನತಾ ದಳದ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಅಂದಿನಿಂದ ರಾಜ್ಯ ರಾಜಕಾರಣದಲ್ಲಿ ತಮ್ಮ ಹಿಡಿತವನ್ನು ಬಲಪಡಿಸುತ್ತಲೇ ಬಂದಿದ್ದ ದೇವೇಗೌಡರು ಎರಡೇ ವರ್ಷದಲ್ಲಿ ದೇಶದ ಪ್ರಧಾನಿಯಾಗಿ ದೆಹಲಿಗೆ ಹೋದರು. ಆಗ ಹೆಗಡೆ ಗೌಡರ ಸಂಪುಟದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿ ಕೆಲಸ ಮಾಡಬೇಕಾಯಿತು.

ರಾಜಕಾರಣ ಆಗುತ್ತಿದೆ ಬಲುದೊಡ್ಡ ದಂಧೆ
ಅಪೋಲೊ ಆಸ್ಪತ್ರೆಯಲ್ಲಿ ಉದರ ನೋವಿನ ಚಿಕಿತ್ಸೆಗಾಗಿ ದಾಖಲಾಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ವಿಚಾರಿಸಲು ಕೆಲ ಶಾಸಕರ ಜತೆ ಗುರುವಾರ ತೆರಳಿದ್ದ ಸಿಎಂ ಕುಮಾರಸ್ವಾಮಿ, ಅಲ್ಲಿಂದ ಹೊರಬರುತ್ತಲೇ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರಲ್ಲದೇ ಪರ್ಸಂಟೇಜ್ ಜನಕ ಎಂದು ಜರಿದಿದ್ದರು. ಅದಾದ ಕೆಲವೇ ಸಮಯದಲ್ಲಿ ಹಾಸನಕ್ಕೆ ತೆರಳಿ, ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಕೈಬಿಡದಿದ್ದರೆ ಬಿಜೆಪಿ ವಿರುದ್ಧ ಜನರನ್ನು ದಂಗೆ ಎಬ್ಬಿಸಬೇಕಾಗುತ್ತದೆ ಎಂದು ಬಹಿರಂಗ ಬೆದರಿಕೆ ಒಡ್ಡಿದ್ದರು. ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ಕಾಕತಾಳೀಯ ಎಂಬಂತೆ ಕೆಲ ನಿಮಿಷಗಳಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಯಡಿಯೂರಪ್ಪ ನಿವಾಸಕ್ಕೆ ನುಗ್ಗಲು ಯತ್ನಿಸಿದ್ದರಿಂದ ಹೈಡ್ರಾಮಾವೇ ನಡೆದು ಹೋಯಿತು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications