ಉತ್ತರ ಕರ್ನಾಟಕದ ಸಮಸ್ಯೆ ತಿಳಿಸಲಿದೆ 'ಮಹಾಮರಣ' ಸಾಕ್ಷ್ಯಚಿತ್ರ
ಗದಗ, ಅಕ್ಟೋಬರ್ 19 : 'ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಿಗಬೇಕಾದ ಸೌಲಭ್ಯಗಳು ದೊರೆಯುತ್ತಿಲ್ಲ. ಕುಡಿಯುವ ನೀರಿಗಾಗಿ ಬೀದಿಗಿಳಿಯುವ ಪರಿಸ್ಥಿತಿ ಎದುರಾಗಿದ್ದು, ಈ ಭಾಗದ ಜನರ ಸಮಸ್ಯೆಯ ಕುರಿತು ದೇಶದ ಜನರಿಗೆ ತಿಳಿಸಲು 'ಮಹಾಮರಣ' ಎಂಬ ಸಾಕ್ಷ್ಯ ನಿರ್ಮಾಣ ಮಾಡುತ್ತಿರುವುದಾಗಿ' ನಟಿ ಪೂಜಾಗಾಂಧಿ ಹೇಳಿದ್ದಾರೆ.
ಗದಗದಲ್ಲಿ ಶನಿವಾರ ಹಿರಿಯ ಕವಿ ಹುಯಿಲಗೋಳ ನಾರಾಯಣರಾವ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಪೂಜಾಗಾಂಧಿ ಅವರು, 'ರೈತರು ಮತ್ತು ಈ ಭಾಗದ ಜನರು ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಬೇಕು' ಎಂದು ಮನವಿ ಮಾಡಿದರು. [ಏನಿದು ಕಳಸಾ ಬಂಡೂರಿ ಯೋಜನೆ?]

'1980ರಲ್ಲಿ ನರಂಗುಂದದಲ್ಲಿ ನಡೆದ ರೈತ ಬಂಡಾಯದ ಹೋರಾಟ ಮತ್ತೆ 35 ವರ್ಷಗಳ ಬಳಿಕ ಸ್ಫೋಟಿಸುವ ಲಕ್ಷಣಗಳು ಗೋಚರಿಸುತ್ತಿವೆ. ಕುಡಿಯುವ ನೀರಿಗಾಗಿ ಉತ್ತರ ಕರ್ನಾಟಕದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳೆಹಾನಿ, ಬರಗಾಲದಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ' ಎಂದರು. [ಕಳಸಾ-ಬಂಡೂರಿಗಾಗಿ ಕರ್ನಾಟಕ ಬಂದ್]
'ನಾಡಿಗೆ ಆಹಾರ ಧಾನ್ಯವನ್ನು ಬೆಳೆದುಕೊಡುವ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಉತ್ತರ ಕರ್ನಾಟಕ ಭಾಗದ ರೈತರ ಸಂಕಷ್ಟಗಳ ಕುರಿತು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯಲು ಹಾಗೂ ಇಡೀ ದೇಶದ ಜನತೆಗೆ ಉತ್ತರ ಕರ್ನಾಟಕದ ಸ್ಥಿತಿಯ ಕುರಿತು ಮನವರಿಕೆ ಮಾಡುವ ಉದ್ದೇಶದಿಂದ ಸಾಕ್ಷ್ಯಚಿತ್ರ ನಿರ್ಮಾಣ ಮಾಡುತ್ತಿದ್ದೇನೆ' ಎಂದು ಪೂಜಾಗಾಂಧಿ ತಿಳಿಸಿದರು. [ಕುಡಿಯುವ ನೀರಿಗಾಗಿ ಕಳಸಾ-ಬಂಡೂರಿ ಯೋಜನೆ]
'ಕಳಸಾ-ಬಂಡೂರಿ ಯೋಜನೆಯಿಂದ ಈ ಭಾಗದ ರೈತರಿಗೆ ಆಗುವ ಅನುಕೂಲ ಹಾಗೂ ಗೋವಾ ಸರ್ಕಾರಕ್ಕೆ ಇದರಿಂದಾಗುವ ಅನುಕೂಲತೆಗಳ ಕುರಿತು ಸಾಕ್ಷ್ಯಚಿತ್ರದಲ್ಲಿ ವಿವರ ನೀಡಲಾಗುತ್ತದೆ. ಧಾರವಾಡ, ಗದಗ, ಬೆಳಗಾವಿ ಜನರ ಕುಡಿಯುವ ನೀರಿನ ಸಮಸ್ಯೆಯನ್ನು ಸಾಕ್ಷ್ಯಚಿತ್ರದ ಮೂಲಕ ತೆರೆದಿಡುವುದಾಗಿ' ಪೂಜಾ ಗಾಂಧಿ ಹೇಳಿದರು.

'ನರಗುಂದ, ನವಲಗುಂದ ಹಾಗೂ ಅಣ್ಣಿಗೇರಿಯಲ್ಲಿ ನಡೆದಿರುವ ರೈತರ ಹೋರಾಟದ ಸ್ಥಳಗಳಿಗೂ ಭೇಟಿ ನೀಡಿದ್ದೇನೆ. ಗದಗ ಜಿಲ್ಲಾ ಕಳಸಾ ಬಂಡೂರಿ ಹೋರಾಟ ಸಮಿತಿ ಕೈಗೊಂಡಿರುವ ಲಕ್ಷಪತ್ರ ಚಳುವಳಿ ಅಭಿಯಾನಕ್ಕೆ ತಾವು ಬೆಂಬಲ ನೀಡುತ್ತಿರುವುದಾಗಿ' ಪೂಜಾಗಾಂಧಿ ಘೋಷಿಸಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications