ಉತ್ತರ ಕರ್ನಾಟಕದ ಸಮಸ್ಯೆ ತಿಳಿಸಲಿದೆ 'ಮಹಾಮರಣ' ಸಾಕ್ಷ್ಯಚಿತ್ರ
ಗದಗ, ಅಕ್ಟೋಬರ್ 19 : 'ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಿಗಬೇಕಾದ ಸೌಲಭ್ಯಗಳು ದೊರೆಯುತ್ತಿಲ್ಲ. ಕುಡಿಯುವ ನೀರಿಗಾಗಿ ಬೀದಿಗಿಳಿಯುವ ಪರಿಸ್ಥಿತಿ ಎದುರಾಗಿದ್ದು, ಈ ಭಾಗದ ಜನರ ಸಮಸ್ಯೆಯ ಕುರಿತು ದೇಶದ ಜನರಿಗೆ ತಿಳಿಸಲು 'ಮಹಾಮರಣ' ಎಂಬ ಸಾಕ್ಷ್ಯ ನಿರ್ಮಾಣ ಮಾಡುತ್ತಿರುವುದಾಗಿ' ನಟಿ ಪೂಜಾಗಾಂಧಿ ಹೇಳಿದ್ದಾರೆ.
ಗದಗದಲ್ಲಿ ಶನಿವಾರ ಹಿರಿಯ ಕವಿ ಹುಯಿಲಗೋಳ ನಾರಾಯಣರಾವ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಪೂಜಾಗಾಂಧಿ ಅವರು, 'ರೈತರು ಮತ್ತು ಈ ಭಾಗದ ಜನರು ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಬೇಕು' ಎಂದು ಮನವಿ ಮಾಡಿದರು. [ಏನಿದು ಕಳಸಾ ಬಂಡೂರಿ ಯೋಜನೆ?]

'1980ರಲ್ಲಿ ನರಂಗುಂದದಲ್ಲಿ ನಡೆದ ರೈತ ಬಂಡಾಯದ ಹೋರಾಟ ಮತ್ತೆ 35 ವರ್ಷಗಳ ಬಳಿಕ ಸ್ಫೋಟಿಸುವ ಲಕ್ಷಣಗಳು ಗೋಚರಿಸುತ್ತಿವೆ. ಕುಡಿಯುವ ನೀರಿಗಾಗಿ ಉತ್ತರ ಕರ್ನಾಟಕದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳೆಹಾನಿ, ಬರಗಾಲದಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ' ಎಂದರು. [ಕಳಸಾ-ಬಂಡೂರಿಗಾಗಿ ಕರ್ನಾಟಕ ಬಂದ್]
'ನಾಡಿಗೆ ಆಹಾರ ಧಾನ್ಯವನ್ನು ಬೆಳೆದುಕೊಡುವ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಉತ್ತರ ಕರ್ನಾಟಕ ಭಾಗದ ರೈತರ ಸಂಕಷ್ಟಗಳ ಕುರಿತು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯಲು ಹಾಗೂ ಇಡೀ ದೇಶದ ಜನತೆಗೆ ಉತ್ತರ ಕರ್ನಾಟಕದ ಸ್ಥಿತಿಯ ಕುರಿತು ಮನವರಿಕೆ ಮಾಡುವ ಉದ್ದೇಶದಿಂದ ಸಾಕ್ಷ್ಯಚಿತ್ರ ನಿರ್ಮಾಣ ಮಾಡುತ್ತಿದ್ದೇನೆ' ಎಂದು ಪೂಜಾಗಾಂಧಿ ತಿಳಿಸಿದರು. [ಕುಡಿಯುವ ನೀರಿಗಾಗಿ ಕಳಸಾ-ಬಂಡೂರಿ ಯೋಜನೆ]
'ಕಳಸಾ-ಬಂಡೂರಿ ಯೋಜನೆಯಿಂದ ಈ ಭಾಗದ ರೈತರಿಗೆ ಆಗುವ ಅನುಕೂಲ ಹಾಗೂ ಗೋವಾ ಸರ್ಕಾರಕ್ಕೆ ಇದರಿಂದಾಗುವ ಅನುಕೂಲತೆಗಳ ಕುರಿತು ಸಾಕ್ಷ್ಯಚಿತ್ರದಲ್ಲಿ ವಿವರ ನೀಡಲಾಗುತ್ತದೆ. ಧಾರವಾಡ, ಗದಗ, ಬೆಳಗಾವಿ ಜನರ ಕುಡಿಯುವ ನೀರಿನ ಸಮಸ್ಯೆಯನ್ನು ಸಾಕ್ಷ್ಯಚಿತ್ರದ ಮೂಲಕ ತೆರೆದಿಡುವುದಾಗಿ' ಪೂಜಾ ಗಾಂಧಿ ಹೇಳಿದರು.

'ನರಗುಂದ, ನವಲಗುಂದ ಹಾಗೂ ಅಣ್ಣಿಗೇರಿಯಲ್ಲಿ ನಡೆದಿರುವ ರೈತರ ಹೋರಾಟದ ಸ್ಥಳಗಳಿಗೂ ಭೇಟಿ ನೀಡಿದ್ದೇನೆ. ಗದಗ ಜಿಲ್ಲಾ ಕಳಸಾ ಬಂಡೂರಿ ಹೋರಾಟ ಸಮಿತಿ ಕೈಗೊಂಡಿರುವ ಲಕ್ಷಪತ್ರ ಚಳುವಳಿ ಅಭಿಯಾನಕ್ಕೆ ತಾವು ಬೆಂಬಲ ನೀಡುತ್ತಿರುವುದಾಗಿ' ಪೂಜಾಗಾಂಧಿ ಘೋಷಿಸಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications