ನೆಲಮಂಗಲ ಬಸ್ ಅಗ್ನಿ ದುರಂತಕ್ಕೆ ಪೂಜಾ ಸಾಮಗ್ರಿಯೇ ಕಾರಣ
ಪ್ರಯಾಣಿಕರೊಬ್ಬರ ಲಗೇಜಿನಲ್ಲಿ ಪೂಜಾ ಸಾಮಗ್ರಿಗಳನ್ನು ಕೊಂಡೊಯ್ದಿದ್ದೇ ಬಸ್ ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೆಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 24: ನೆಲಮಂಗಲದಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯ ಸಂಸ್ಥೆಗೆ (ಕೆಎಸ್ಆರ್ ಟಿಸಿ) ಸೇರಿದ ಬಸ್ಸೊಂದು ಅಗ್ನಿಗೆ ಆಹುತಿಯಾಗಲು ಪ್ರಯಾಣಿಕರೊಬ್ಬರು ಪೂಜಾ ಸಾಮಗ್ರಿಗಳನ್ನು ಲಗೇಜಿನಲ್ಲಿಟ್ಟುಕೊಂಡು ಬಂದಿದ್ದೇ ಕಾರಣವೆಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಸೋಮವಾರ ತಡರಾತ್ರಿ ಹಾಸನದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸೊಂದು ಅಗ್ನಿಗೆ ಆಹುತಿಯಾಗಿತ್ತು. ಬಸ್ಸು, ನೆಲಮಂಗಲದ ಅರಿಶೀನಕುಂಟೆ ಬಳಿಗೆ ಬಂದಾಗ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಅಗ್ನಿ ದುರಂತದಲ್ಲಿ 10 ಜನರಿಗೆ ಸುಟ್ಟ ಗಾಯಗಳಾಗಿದ್ದರೆ, ಪೀಣ್ಯದ ನಿವಾಸಿ ಭಾಗ್ಯಮ್ಮ ಎಂಬುವರು ಸಜೀವ ದಹನವಾಗಿದ್ದರು.[ನೆಲಮಂಗಲ:ಕೆಎಸ್ ಆರ್ ಟಿಸಿ ಬಸ್ ಗೆ ಬೆಂಕಿ,1 ಸಾವು,10 ಜನರಿಗೆ ಗಾಯ]

ಘಟನೆಗೆ ಇಲಾಖೆಯ ತನಿಖೆಗೆ ಆದೇಶಿಸಲಾಗಿದ್ದು, ಇದೀಗ ತನಿಖೆಯು ಮುಕ್ತಾಯವಾಗಿ ವರದಿಯಲ್ಲಿ ಪ್ರಯಾಣಿಕರೊಬ್ಬರು ಪೂಜಾ ಸಾಮಗ್ರಿ ಕೊಂಡೊಯ್ದಿದ್ದರಿಂದಲೇ ಬಸ್ ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೆಂದು ಹೇಳಲಾಗಿದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.[ನೆಲಮಂಗಲದ ಮೈಲನಹಳ್ಳಿಯಲ್ಲಿ ಪುರಾತನ ದೇವಾಲಯ ಪತ್ತೆ]
ಏತನ್ಮಧ್ಯೆ, ಬಸ್ ಪ್ರಯಾಣಿಕರ ಲಗೇಜ್ ಅನ್ನು ಪರಿಶೀಲಿಸುವ ಜವಾಬ್ದಾರಿಯನ್ನು ಕಂಡಕ್ಟರ್ ಗಳಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications