ಕರ್ನಾಟಕದಲ್ಲಿ ಇ-ಆಡಳಿತ : ಇಬ್ಬರಿಗೆ ಬಿಟ್ಟು ಒಬ್ಬರಿಗೂ ಇಷ್ಟ ಇಲ್ಲ
ಬೆಂಗಳೂರು, ಫೆಬ್ರವರಿ 6: ಕರ್ನಾಟಕ ವಿಧಾನಸಭೆಯ 224 ಶಾಸಕರ ಪೈಕಿ ಒಬ್ಬರು ಮಾತ್ರ ತಮ್ಮ ಪ್ರಶ್ನೆಯನ್ನು ವಾಟ್ಸ್ ಅಪ್ ಮೂಲಕ ಕಳಿಸಿದ್ದರೆ, ಇನ್ನೊಬ್ಬ ಶಾಸಕರು ಇ ಮೇಲ್ ಹಾಗೂ ವಾಟ್ಸ್ ಅಪ್ ಮೂಲಕ ಪ್ರಶ್ನೆಯನ್ನು ಕಳಿಸಿದ್ದಾರೆ. ಇದೇನು ವಾಟ್ಸ್ ಅಪ್, ಇ ಮೇಲ್ ಅಂತ ಕೇಳ್ತೀರಾ?
ಜನವರಿ 4ರಂದು ಅಧಿಸೂಚನೆ ಹೊರಡಿಸಿ, ವಿಧಾನಸಭೆಯ ಪ್ರಶ್ನಾವಳಿ ವೇಳೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ವಾಟ್ಸ್ ಅಪ್ ಮೂಲಕ ಕಳಿಸಬಹುದು ಎಂದು ತಿಳಿಸಲಾಗಿತ್ತು. ಯಾವುದೇ ಇಲಾಖೆಗೆ ಸಂಬಂಧಿಸಿದ, ಕೆಲಸಕ್ಕೆ ಸಂಬಂಧಿಸಿದ ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಗ್ಗೆ ಪ್ರಶ್ನೆಗಳಿದ್ದಲ್ಲಿ ಅಥವಾ ಸರಕಾರದ ನೀತಿ ಅಥವಾ ನಿರ್ಧಾರದ ಬಗ್ಗೆ ಪ್ರಶ್ನೆಯನ್ನು ವಾಟ್ಸ್ ಅಪ್ ಮೂಲಕ ಕೇಳಬಹುದು ಎಂದು ಎರಡು ಮೊಬೈಲ್ ಸಂಖ್ಯೆ ಕೂಡ ನೀಡಲಾಗಿತ್ತು.[ಏನಿದು ಆಧಾರ್ ಆಧಾರಿತ ಪೇಮೆಂಟ್ App? ಹೇಗೆ ಕಾರ್ಯ ನಿರ್ವಹಿಸುತ್ತೆ?]

ಇದರ ಜೊತೆಗೆ ಈ ಹಿಂದೆ ಇದ್ದಂತೆ ಯಾವುದೇ ಪ್ರಶ್ನೆಗಳನ್ನು ಫ್ಯಾಕ್ಸ್ ಮೂಲಕ ಕಳಿಸಬಹುದು ಅಥವಾ ನಿರ್ದಿಷ್ಟ ರೀತಿಯಲ್ಲಿ ಪ್ರಶ್ನೆಗಳನ್ನು ಬರೆದು, ವಿಧಾನ ಸೌಧದಲ್ಲಿ ಇಟ್ಟಿರುವ ಬಾಕ್ಸ್ ನಲ್ಲಿ ಹಾಕಬಹುದು. ಸಾಂಪ್ರದಾಯಿಕ ಪದ್ಧತಿ ಪ್ರಕಾರ ಅಧಿವೇಶನ ಶುರುವಾಗುವ ಹದಿನೈದು ದಿನಕ್ಕೆ ಮುಂಚಿತವಾಗಿಯೇ ಪ್ರಶ್ನೆಗಳನ್ನು ಕಳುಹಿಸಬೇಕು.[ನರಗುಂದ ರಾಜ್ಯದ ಪ್ರಥಮ ಕಾಗದರಹಿತ ತಾಲ್ಲೂಕು ಪಂಚಾಯಿತಿ]
ಅದರೆ, ವಾಟ್ಸ್ ಅಪ್ ನಲ್ಲೋ, ಈ ಮೇಲ್ ಮೂಲಕವೋ ಪ್ರಶ್ನೆಗಳನ್ನು ಕಳುಹಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ. ಎರಡು ವಾರಕ್ಕೆ ಮುಂಚೆ ತಲುಪಿದರೆ ಆಯಿತು. ಒಂದು ದಿನ ಒಬ್ಬ ಸದಸ್ಯರು ಐದು ಪ್ರಶ್ನೆಗಳನ್ನು ಕೇಳಬಹುದು. ಈ ಹೊಸ ವಿಧಾನವನ್ನು ಹಿರೇಕೆರೂರಿನಿಂದ ಆಯ್ಕೆಯಾಗಿರುವ ಬಿಜೆಪಿ ಶಾಸಕ ಬಿ.ಬಣಕಾರ್ ಹಾಗೂ ಚಿಂತಾಮಣಿಯಿಂದ ಆಯ್ಕೆಯಾಗಿರುವ ಜೆಡಿಎಸ್ ಶಾಸಕ ಎಂ.ಕೃಷ್ಣಾರೆಡ್ಡಿ ಬಳಸಿದ್ದಾರೆ.
ಬಣಕಾರ್ ಎಂಟು ಪ್ರಶ್ನೆಗಳನ್ನು ಇ ಮೇಲ್ ಮೂಲಕ ಕಳಿಸಿದ್ದಾರೆ. ಇನ್ನು ರೆಡ್ಡಿ ಅವರು ಇಪ್ಪತ್ತು ಸಮಸ್ಯೆಗಳನ್ನು ವಾಟ್ಸ್ ಅಪ್ ಮೂಲಕ ಕಳಿಸಿದ್ದಾರೆ. ಆ ಪೈಕಿ ಬಹುತೇಕ ತಮ್ಮ ಕಚೇರಿ ಸಹಾಯಕರ ಮೂಲಕವೇ ಕಳುಹಿಸಿದ್ದಾರೆ. ಶಾಸಕರಿಗೆಲ್ಲ ಐ ಪ್ಯಾಡ್, ಲ್ಯಾಪ್ ಟಾಪ್, ಡೆಸ್ಕ್ ಟಾಪ್ ನೀಡಲಾಗಿದೆ. ಅವರ ಫೋನ್ ಬಿಲ್ ಕೂಡ ಸರಕಾರವೇ ಭರಿಸುತ್ತದೆ.[ಮೊಬೈಲ್ನಲ್ಲಿ ಇಡೀ ಜಗತ್ತು, ಇದು ಮೋದಿ ಕನಸು]
ವಿಚಿತ್ರ ಅಂದರೆ ಈ ಪ್ರಶ್ನೆಗಳನ್ನು ಸ್ವೀಕರಿಸುವ ಅಧಿಕಾರಿಗಳಿಗೇ ಯಾವುದೇ ಮೊಬೈಲ್ ಫೋನ್, ಸಿಮ್ ಕಾರ್ಡ್ ನೀಡಿಲ್ಲ. ಅಧಿಕಾರಿಗಳಿಗೆ ವೈಯಕ್ತಿಕ ಮೊಬೈಲ್ ಫೋನ್ ಬಳಸುವಂತೆ ಸೂಚಿಸಲಾಗಿದೆ. ಇನ್ನು ಇ-ಸಂವಹನವನ್ನು ಪರಿಣಾಮಕಾರಿಯಾಗಿ ಬಳಸಿದರೆ, ಕಾಗದಕ್ಕೆ ಖರ್ಚಾಗುವ ಲಕ್ಷಾಂತರ ರುಪಾಯಿ ಉಳಿತಾಯ ಆಗುತ್ತದೆ ಎನ್ನುತ್ತಾರೆ ಅಧಿಕಾರಿಗಳು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications