ಯಡಿಯೂರಪ್ಪ ಬಳಿ ಹಂಚದೆ ಉಳಿದ ಖಾತೆಗಳು
ಬೆಂಗಳೂರು, ಆಗಸ್ಟ್ 26: ಹದಿನೇಳು ಮಂದಿ ಸಚಿವರಿಗೆ ಇಂದು ಖಾತೆ ಹಂಚಿಕೆ ಮಾಡಿದ್ದು, ಇದೇ ಮೊದಲ ಬಾರಿಗೆ ಮೂರು ಮಂದಿಯನ್ನು ಉಪಮುಖ್ಯಮಂತ್ರಿಗಳನ್ನಾಗಿ ಮಾಡಲಾಗಿದೆ.
ಹಲವು ವಿಶೇಷತೆಗಳು ಖಾತೆಹಂಚಿಕೆಯಲ್ಲಿದ್ದು, ಪ್ರಮುಖ ವ್ಯಕ್ತಿಗಳಿಗೆ ಕಡಿಮೆ ಪ್ರಭಾವಿ ಖಾತೆಗಳು ದೊರೆತಿವೆ. ಅಚ್ಚರಿಯ ರೀತಿಯಲ್ಲಿ ಕೆಲವರಿಗೆ ಪ್ರಭಾವಿ ಖಾತೆಗಳು ದೊರೆತಿವೆ.
ಪ್ರಸ್ತುತ ಹದಿನೇಳು ಸಚಿವರಿಗೆ ಮಾತ್ರವೇ ಖಾತೆ ಹಂಚಿಕೆ ಆಗಿದ್ದು. ಕೆಲವು ಸಚಿವರಿಗೆ ಹೆಚ್ಚುವರಿಗೆ ಖಾತೆಗಳನ್ನು ನೀಡಲಾಗಿದೆ ಮತ್ತು ಇನ್ನೂ ಕೆಲವು ಪ್ರಭಾವಿ ಖಾತೆಗಳು ಸಿಎಂ ಅವರ ಬಳಿಯೇ ಉಳಿದಿವೆ.

ಹಣಕಾಸು, ಇಂಧನ, ಕೃಷಿ, ಬೆಂಗಳೂರು ನಗರಾಭಿವೃದ್ಧಿ, ನಗರಾಭಿವೃದ್ಧಿ, ಸಹಕಾರ ಮತ್ತು ಸಕ್ಕರೆ, ವೈದ್ಯಕೀಯ ಶಿಕ್ಷಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಜಲಸಂಪನ್ಮೂಲ ಖಾತೆ ಖಾತೆಗಳು ಪ್ರಸ್ತುತ ಸಿಎಂ ಯಡಿಯೂರಪ್ಪ ಬಳಿಯೇ ಇವೆ.
ಇದರ ಜೊತೆಗೆ ಕೆಲವು ಸಚಿವರಿಗೆ ಹೆಚ್ಚುವರಿ ಖಾತೆಗಳನ್ನು ನೀಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಖಾತೆ, ಸಣ್ಣ ನೀರಾವರಿ, ಸಮಾಜ ಕಲ್ಯಾಣ ಖಾತೆಗಳನ್ನು ಕ್ರಮವಾಗಿ ಸಿ.ಟಿ.ರವಿ, ಮಾಧುಸ್ವಾಮಿ, ಗೋವಿಂದ ಕಾರಜೋಳ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಹೆಚ್ಚುವರಿ ಖಾತೆಗಳನ್ನು ಮುಂದಿನ ದಿನಗಳಲ್ಲಿ ಹೊಸ ಸಚಿವರಿಗೆ ಬಿಟ್ಟುಕೊಡಬೇಕಾಗುತ್ತದೆ.
ಕೆಲವು ಸಚಿವರಿಗೆ ಎರಡೆರಡು ಖಾತೆಗಳನ್ನು ನೀಡಲಾಗಿದೆ. ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಂದರು ಮತ್ತು ಮೀನುಗಾರಿಕೆ ಜೊತೆಗೆ ಮುಜರಾಯಿ ಖಾತೆ ನೀಡಲಾಗಿದೆ. ಅಶ್ವಥ್ನಾರಾಯಣ್ ಅವರಿಗೆ ಉನ್ನತ ಶಿಕ್ಷಣದ ಜೊತೆಗೆ ಐಟಿ-ಬಿಟಿ, ವಿಜ್ಞಾನ ತಂತ್ರಜ್ಞಾನ ಖಾತೆ ನೀಡಲಾಗಿದೆ. ಗುಪ್ತಚರ ಇಲಾಖೆ ಮಾಮೂಲಿನಂತೆ ಗೃಹ ಇಲಾಖೆಯಿಂದ ಹೊರತಾಗಿ ಸಿಎಂ ಅವರ ಬಳಿಯೇ ಉಳಿಯಲಿದೆ.
ಸಚಿವ ಸ್ಥಾನ ಸಿಗದೇ ಅಸಮಾಧಾನ ಹೊರಹಾಕಿರುವ ಬಿಜೆಪಿ ಶಾಸಕರು, ಬಿಜೆಪಿ ಸರ್ಕಾರ ರಚನೆಗೆ ಸಹಾಯ ಮಾಡಿರುವ ಅನರ್ಹ ಶಾಸಕರಿಗೆ ಉಳಿಕೆ ಖಾತೆಗಳನ್ನು ಹಂಚುವ ಸಾಧ್ಯತೆ ದಟ್ಟವಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications