ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ವಿಫಲ: ಪಾಲಿಕೆಗೆ ಕೆಟ್ಟ ಹೆಸರು ಬರುತ್ತಿದೆ ಎಂದ ಹೈಕೋರ್ಟ್
ಬೆಂಗಳೂರು,ಜೂ.28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ನ್ಯಾಯಾಲಯದ ನಿರ್ದೇಶದನಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಚೀಫ್ ಎಂಜಿನಿಯರ್ ಎಂ.ಲೋಕೇಶ್ ಹೈಕೋರ್ಟ್ ಮುಂದೆ ಹಾಜರಾದರು.
ಮೊನ್ನೆ ಮಂಗಳವಾರ ಹೈಕೋರ್ಟ್ ಚಾಟಿ ಬೀಸಿದ್ದ ಹಿನ್ನೆಲೆಯಲ್ಲಿ ಹಾಜರಾದ ಹಿರಿಯ ಅಧಿಕಾರಿಗಳು, ಪೈಥಾನ್ ಯಂತ್ರದ ಮೂಲಕ ಗುಂಡಿ ಮುಚ್ಚಲು ಕಾರ್ಯಾದೇಶ ನೀಡಿರುವ ಬಗ್ಗೆ ವಕೀಲರ ಮೂಲಕ ವಿವರ ನೀಡಿ ಛೀಮಾರಿ ಹಾಕಿಸಿಕೊಳ್ಳುವುದರಿಂದ ಪಾರಾದಾರು.
ಆದರೆ 2015ರಿಂದ ಬಾಕಿ ಇರುವ ಬೆಂಗಳೂರಿನ ರಸ್ತೆ ದುಸ್ಥಿತಿ ಕುರಿತ ಪಿಐಎಲ್ ವಿಚಾರಣೆ ನಡೆಸುತ್ತಿರುವ ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠ ಆಯುಕ್ತರು ಮತ್ತು ಚೀಫ್ ಎಂಜಿನಿಯರ್ ಗೂ ಕ್ಲಾಸ್ ತೆಗೆದುಕೊಂಡಿತು.

ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಸಿಜೆ, "ಮಿಸ್ಟರ್ ಕಮಿಷನರ್, ರಸ್ತೆ ಗುಂಡಿ ಸರಿಪಡಿಸಲು ಏನಾದರೂ ಕಷ್ಟಗಳಿವೆಯೇ ?ರಸ್ತೆ ಗುಂಡಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು," ಎಂದರು.
ಅಲ್ಲದೆ, ಪ್ರಧಾನಿ ಮಾಡಿದ ಸರಿಪಡಿಸಿದ್ದ ರಸ್ತೆಗಳು ಹಾಳಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳಿವೆ ಬಂದಿವೆಯೆಲ್ಲಾ ನಿಜವೇ ಎಂದು ಬಿಬಿಎಂಪಿ ಮುಖ್ಯ ಆಯುಕ್ತರನ್ನು ಪ್ರಶ್ನಿಸಿದರು.
ಪಾಲಿಕೆ ಪರ ವಕೀಲರು. ಪ್ರಧಾನಿ ಬಂದಾಗ ಬಳಸಿದ ರಸ್ತೆಗಳು ಹಾಳಾಗಿಲ್ಲ, ಒಳಚರಂಡಿ ಸಮಸ್ಯೆಯಿಂದ ಹಾಳಾದ ರಸ್ತೆಯನ್ನು ದುರಸ್ತಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.
847 ಕಿಲೋಮೀಟರ್ ರಸ್ತೆ ಗುಂಡಿ:
ಇದೇ ವೇಳೇ ನ್ಯಾಯಾಲಯದ ನಿರ್ದೇಶದನಂತೆ ಬಿಬಿಎಂಪಿ ಮತ್ತು ಪೈಥಾನ್ ಯಂತ್ರ ಬಳಸಿ ನಗರದ ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿ ನಡೆಸುವ ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ (ಎಆರ್ಟಿಎಸ್) ಸಂಸ್ಥೆ ಜಂಟಿಯಾಗಿ ನಡೆಸಿದ ಸರ್ವೆ ಪ್ರಕಾರ 847.56 ಕಿ.ಮೀ ರಸ್ತೆಗುಂಡಿ ಸರಿಪಡಿಸಬೇಕಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.
ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ (ಎಆರ್ಟಿಎಸ್) ಸಂಸ್ಥೆಗೆ ಪೈಥಾನ್ ಯಂತ್ರ ಬಳಸಿ ನಗರದ 397 ಕಿಲೋಮೀಟರ್ ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿ ನಡೆಸಲು
ಕಾರ್ಯಾದೇಶ ನೀಡಲಾಗಿದೆ. ಇನ್ನುಳಿದ 576 ಕಿ.ಮೀ ರಸ್ತೆ ಗುಂಡಿ ಮುಚ್ಚಲು ಟೆಂಡರ್ ಕರೆಯಲಾಗಿದೆ.ಜು.15 ರಂದು ಟೆಂಡರ್ ಓಪನ್ ಮಾಡಲಾಗುವುದು ಎಂದು ವಿವರಿಸಿದರು.
ರಸ್ತೆ ಗುಂಡಿ ಮುಚ್ಚುವ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲು ಸಲಹೆ ನೀಡಿದ ಸಿಜೆ, ರಸ್ತೆ ಸರಿಪಡಿಸುವವರೆಗೆ ಪಿಐಎಲ್ ಮುಕ್ತಾಯಗೊಳಿಸುವುದಿಲ್ಲ ಎಂದು ವಿಚಾರಣೆ ಜು.27 ಕ್ಕೆ ನಿಗದಿಪಡಿಸಿದ ಅಷ್ಟರಲ್ಲಿ ಗುಂಡಿ ಮುಚ್ಚುವ ಕಾಮಗಾರಿಯಲ್ಲಿ ಆಗಿರುವ ಪ್ರಗತಿಯ ಕುರಿತು ವಿವರ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿತು.
1 ದಿನ ಗಡುವು: ಮಂಗಳವಾರ ನ್ಯಾಯಪೀಠ, ಪೈಥಾನ್ ಯಂತ್ರ ಬಳಸಿ ನಗರದ ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿ ನಡೆಸಲು ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯೂಷನ್ಸ್ (ಎಆರ್ಟಿಎಸ್) ಸಂಸ್ಥೆಯೊಂದಿಗೆ ಈವರೆಗೂ ಒಪ್ಪಂದ ಮಾಡಿಕೊಳ್ಳದ ಹಾಗೂ ಕಾರ್ಯಾದೇಶ ಹೊರಡಿಸದ ಬಿಬಿಎಂಪಿಯ ಕ್ರಮವನ್ನು ತರಾಟೆ ತೆಗೆದುಕೊಂಡಿತ್ತು.
ಕೊನೆಗೆ ಅಂತಿಮವಾಗಿ ಒಂದು ದಿನ ಕಾಲಾವಕಾಶ ನೀಡುತ್ತೇವೆ. ಅಷ್ಟರೊಳಗೆ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು, ಕಾರ್ಯಾದೇಶ ಹೊರಡಿಸಿ ಕೋರ್ಟ್ಗೆ ದಾಖಲೆಗಳನ್ನು ಸಲ್ಲಿಸಬೇಕು. ಇಲ್ಲವಾದರೆ ಬಿಬಿಎಂಪಿ ವಿರುದ್ಧ ಕಠಿಣ ಆದೇಶ ಹೊರಡಿಸಲು ನ್ಯಾಯಾಲಯ ಯಾವುದೇ ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿ, ಪಾಲಿಕೆ ಮುಖ್ಯ ಆಯುಕ್ತರು ಹಾಗೂ ಮುಖ್ಯ ಇಂಜಿನಿಯರ್ ಖುದ್ದು ಹಾಜರಾಗಬೇಕು ಎಂದು ಖಡಕ್ ಆದೇಶ ನೀಡಿತು.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications