ರಾಘವೇಶ್ವರಶ್ರೀಗಳಿಗೆ ಪುರುಷತ್ವ, ವೀರ್ಯಾಣು ಪರೀಕ್ಷೆ
ಬೆಂಗಳೂರು, ಸೆಪ್ಟೆಂಬರ್ 29 : ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಘವೇಶ್ವರ ಶ್ರೀಗಳಿಗೆ ಸೆ. 30ರಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ. ಬುಧವಾರ ಶ್ರೀಗಳಿಗೆ ಮೂರು ವಿವಿಧ ಪರೀಕ್ಷೆಗಳು ನಡೆಯಲಿವೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕ ಡಾ.ಟಿ.ದುರ್ಗಣ್ಣ ಅವರು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಬುಧವಾರ ಶ್ರೀಗಳಿಗೆ ಪರೀಕ್ಷೆ ಮಾಡಲು ನಾಲ್ಕು ತಜ್ಞ ವೈದ್ಯರ ತಂಡವನ್ನು ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ. [ಪುರುಷತ್ವ ಪರೀಕ್ಷೆ ಎಂದರೇನು? ಏಕೆ ಮಾಡ್ಬೇಕು?]

ಶ್ರೀಗಳಿಗೆ ದೈಹಿಕ ಪರೀಕ್ಷೆ, ವೀರ್ಯಾಣು ಪರೀಕ್ಷೆ, ಪುರುಷತ್ವ ಪರೀಕ್ಷೆಯನ್ನು ನಡೆಸಲಾಗುತ್ತದೆ. ಬುಧವಾರ ಬೆಳಗ್ಗೆ 9 ಗಂಟೆಗೆ ಖಾಲಿ ಹೊಟ್ಟೆಯಲ್ಲಿ ಬರುವಂತೆ ರಾಘವೇಶ್ವರ ಶ್ರೀಗಳಿಗೆ ಸೂಚನೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ತನಕ ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ. [ರಾಘವೇಶ್ವರ ಶ್ರೀ ವಿರುದ್ಧದ ಚಾರ್ಜ್ ಶೀಟ್ ನಲ್ಲೇನಿದೆ?]
ಕೋರ್ಟ್ನಲ್ಲಿ ವಿಚಾರಣೆ : ವೈದ್ಯಕೀಯ ಪರೀಕ್ಷೆಗೆ ಹಾಜರಾಗಲು ಸಿಐಡಿ ನೀಡಿರುವ ನೋಟಿಸ್ಅನ್ನು ಪ್ರಶ್ನಿಸಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ. ಸೆ.28ರಂದು ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆಯನ್ನು ಇಂದಿಗೆ ಮುಂದೂಡಿದೆ. [ರಾಘವೇಶ್ವರ ಶ್ರೀ ಭಕ್ತರಿಂದ ಮಾಧ್ಯಮಗಳಿಗೆ 13 ಪ್ರಶ್ನೆಗಳು]
ಒಂದು ವೇಳೆ ಇಂದು ಕರ್ನಾಟಕ ಹೈಕೋರ್ಟ್ ಸಿಐಡಿ ನೋಟಿಸ್ಗೆ ತಡೆಯಾಜ್ಞೆ ನೀಡಿದರೆ ಶ್ರೀಗಳು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವುದು ಬೇಡ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರೀಗಳ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ನಡೆಯಲಿದೆಯೇ? ಇಲ್ಲವೇ? ಎಂಬುದು ಕೋರ್ಟ್ ತೀರ್ಪಿನ ಮೇಲೆ ನಿರ್ಧಾರವಾಗಲಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications