ಪೌರ ಕಾರ್ಮಿಕರಿಗೆ ಸಿಹಿಸುದ್ದಿ: ಮೇ.1ರಂದು ರಾಜ್ಯ ಸರ್ಕಾರದಿಂದ ನೇಮಕಾತಿ ಪತ್ರ ವಿತರಣೆ

ಬೆಂಗಳೂರು, ಏಪ್ರಿಲ್‌ 07: ಈ ಬಾರಿಯ ಬಿಬಿಎಂಪಿ ಬಜೆಟ್ ಅಲ್ಲಿ ಪೌರಕಾರ್ಮಿಕರ ವೇತನ ಪಾವತಿಗೆ ರೂ.500 ಕೋಟಿ ಹಣ ಘೋಷಣೆ ಮಾಡಲಾಗಿದೆ. ರೂ. 107 ಕೋಟಿ ಹಣವನ್ನು ಪಿಂಚಣಿಗೆ ಮೀಸಲಿಡಲಾಗಿದೆ. ಮೃತಪಟ್ಟವರ ಹೆಸರಿನಲ್ಲಿ ರೂ.10 ಲಕ್ಷ ಹಣ ಮೀಸಲಿಟ್ಟು ರೂ. 6 ಸಾವಿರ ಪಿಂಚಣಿ ನೀಡುವ ಯೋಜನೆ ತರಲಾಗಿದೆ. ಪೌರಕಾರ್ಮಿಕರಿಗಾಗಿ ಬಿಬಿಎಂಪಿಯಿಂದ ಒಟ್ಟು ರೂ.730 ಕೋಟಿ ಹಣ ನಾವು ಮೀಸಲಿಟ್ಟಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿ, ಶೂ, ಕೈಗವಸು ಸೇರಿದಂತೆ ಇತರೇ ಸಲಕರಣೆಗಳ ವಿತರಣೆಗೆ ರೂ.5 ಕೋಟಿ, ಸಮವಸ್ತ್ರಕ್ಕೆ ರೂ. 6 ಕೋಟಿ, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಮರುಪಾವತಿಗೆ ರೂ. 6 ಕೋಟಿ, ಆರೋಗ್ಯಕ್ಕೆ ರೂ.4 ಕೋಟಿ, ಒಂಟಿ ಮನೆಗೆ ಪ್ರತ್ಯೇಕವಾಗಿ ರೂ.30 ಕೋಟಿ, ಕೌಶಲ್ಯ ಅಭಿವೃದ್ದಿಗೆ ರೂ.5 ಕೋಟಿ, ಟ್ಯಾಕ್ಸಿ, ಆಟೋ ಚಾಲಕರಿಗೆ ರೂ. 10 ಕೋಟಿ ಒಟ್ಟು ನಿಮ್ಮ ಕಲ್ಯಾಣಕ್ಕೆ ರೂ. 64 ಕೋಟಿ ಮೀಸಲಿಡಲಾಗಿದೆ ಎಂದು ಹೇಳಿದರು.

Pourakarmikas State Govt To Issue Appointment Letter On May 1

ಪೌರಕಾರ್ಮಿಕರ ಬದುಕಿನಲ್ಲಿ ಬದಲಾವಣೆ ತರುವುದೇ ಕಾಂಗ್ರೆಸ್ ಸರ್ಕಾರದ ಸಂಕಲ್ಪ. ಪೌರಕಾರ್ಮಿಕರು ನಮ್ಮ ಹಾಗೂ ದೇಶದ ಶಕ್ತಿ, ಕಾಂಗ್ರೆಸ್ ಸರ್ಕಾರ ನಿಮ್ಮ ಶಕ್ತಿ ಎಂಬುದನ್ನು ಮರೆಯಬಾರದು. ನಿಮ್ಮ ಕೆಲಸ ಖಾಯಂ ಆದ ತಕ್ಷಣ ನಿಮಗೆ ಬರುವ ಸಂಬಳ 50 ಸಾವಿರ ಮುಟ್ಟುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಮನೆಯಲ್ಲಿ ನಾವು ವೈಯಕ್ತಿಕವಾಗಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುತ್ತೇವೆ. ಮನೆಯನ್ನು ಸ್ವಚ್ಚಗೊಳಿಸುತ್ತೇವೆ, ಹಾಗಾದರೆ ನಾವೂ ಸಹ ಪೌರ ಕಾರ್ಮಿಕರಲ್ಲವೇ. ನಾವು ಮನೆಯನ್ನು ಸ್ವಚ್ಚಗೊಳಿಸುತ್ತೇವೆ. ನೀವು ಪುರವನ್ನು ಸುಂದರಗೊಳಿಸತ್ತೀರಿ. ನಾವು ಒಳಗಡೆ, ನೀವು ಹೊರಗಡೆ. ಆದ ಕಾರಣ ನಮ್ಮ ನಿಮ್ಮ ನಡುವೆ ಯಾವುದೇ ಬೇಧ ಭಾವವಿಲ್ಲ ಎಂದರು.

ನನಗೆ ಇಂದೇ ನಿಮಗೆ ನೇಮಕಾತಿ ಪತ್ರ ನೀಡಬೇಕು ಎನ್ನುವ ಆಲೋಚನೆ ಇತ್ತು. ಒಂದಷ್ಟು ಸಿಂದುತ್ವ ಬಾಕಿ ಇರುವ ಕಾರಣ ಮೇ 1 ರಂದು ನೇಮಕಾತಿ ಪತ್ರ ನಿಮ್ಮ ಕೈ ಸೇರುವುದು. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ನಾನು ಸಲಹೆ ನೀಡಿದೆ. ವಾಹನ ಚಾಲಕರು, ಲೋಡರ್ಸ್ ವಿಚಾರವಾಗಿ ನಾರಾಯಣ ಅವರು ಗಮನ ಸೆಳೆದಿದ್ದಾರೆ. ಅವರ ಮನವಿಯನ್ನು ಕಾರ್ಯಗತಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಬಸವಲಿಂಗಪ್ಪ ಅವರು, ಸಾಲಪ್ಪ ಅವರ ಜೊತೆ ನಾನು ಕೆಲಸ ಮಾಡಿದ್ದೇನೆ. ಮುನಿಯಪ್ಪ ಅವರು, ಎಚ್.ಆಂಜನೇಯ ಅವರು ನಿಮ್ಮ ದನಿಯಾಗಿ ಕೆಲಸ ಮಾಡುತ್ತಿದ್ದಾರೆ. ಸಫಾಯಿ ಕರ್ಮಚಾರಿ ಸಂಘದ ಅಧ್ಯಕ್ಷರಾದ ನಾರಾಯಣ ಅವರು ಈ ಹಿಂದೆ ಮೇಯರ್ ಆಗಿದ್ದರು. ಅಂದರೆ ಕಾಂಗ್ರೆಸ್ ಪಕ್ಷ ಸದಾ ನಿಮ್ಮ ಜೊತೆ ಇರುತ್ತದೆ ಎನ್ನುವುದಕ್ಕೆ ಇದೆಲ್ಲಾ ಸಾಕ್ಷಿಗಳು ಎಂದು ಡಿ ಕೆ ಶಿವಕುಮಾರ್‌ ತಿಳಿಸಿದರು.

2013 ರ ಸರ್ಕಾರದ ಅವಧಿಯಲ್ಲಿ ನಿಮ್ಮ ಪರವಾಗಿ ಅನೇಕ ಕೆಲಸಗಳನ್ನು ಮಾಡಿದ್ದೇವೆ. 1 ಸಾವಿರ ಪೌರ ಕಾರ್ಮಿಕರನ್ನು ವಿದೇಶಿ ಪ್ರವಾಸಕ್ಕೆ ಕಳಿಸಿಕೊಡಲಾಗಿತ್ತು. 2017ರಲ್ಲಿ 10 ಸಾವಿರ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಂಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. 7.50 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗಿತ್ತು ಎಂದು ಹೇಳಿದರು. ಕೊರೋನಾ ಸಂದರ್ಭದಲ್ಲಿ ಅಪ್ಪ, ಅಮ್ಮ, ಮಕ್ಕಳೇ ಒಬ್ಬರನ್ನು ಒಬ್ಬರು ಮುಟ್ಟಿಕೊಳ್ಳುತ್ತಾ ಇರಲಿಲ್ಲ. ಇಂತಹ ಸಂದರ್ಭದಲ್ಲಿ ಇಡೀ ದೇಶ, ಪ್ರಪಂಚವನ್ನು ಕಾಪಾಡಿದವರು ನೀವು. ಎಣ್ಣೆ ಬೇರೆ, ಬತ್ತಿ ಬೇರೆ ಎರಡೂ ಸೇರಿ ದೀಪವಾಯಿತು, ಪಾಪ ಬೇರೆ ಪುಣ್ಯ ಬೇರೆ ಎರಡು ಸೇರಿ ಬದುಕಾಯಿತು, ಕಾಯ ಬೇರೆ ಕಾಯಕ ಬೇರೆ ಎರಡು ಸೇರಿ ಭಕ್ತಿಯಾಯಿತು. ಇಂದು ನಾವು ನಿಮ್ಮ ಜೊತೆ ಸೇರಿ ಶಕ್ತಿ ತುಂಬ ಬೇಕು ಎಂದು ಬಂದಿದ್ದೇವೆ ಎಂದರು.

ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ತನ್ನ ಬಣ್ಣಿಸಬೇಡ, ಇನ್ನೊಬ್ಬರನ್ನು ಕೀಳು ಎಂದು ನೋಡಬೇಡ, ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ ಎಂದು ಬಸವಣ್ಣನವರು ಮತ್ತೊಂದು ವಚನದಲ್ಲಿ ನಮಗೆಲ್ಲಾ ಕಿವಿಮಾತು ಹೇಳಿದ್ದಾರೆ. ಮನುಷ್ಯ ಒಳಗೆ, ಹೊರಗೆ ಎರಡೂ ಕಡೆಯೂ ಶುದ್ಧನಾಗಿ ಇರಬೇಕು ಎಂಬುದು ಇದರ ಅರ್ಥ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+