Power Cut Issue: ರಾಜಧಾನಿ ಸೇರಿ ಹಳ್ಳಿಗಳಲ್ಲಿ ಮುಂದುವರಿದ ವಿದ್ಯುತ್ ಕಡಿತ, ಸರ್ಕಾರಕ್ಕೆ ಪೂರೈಕೆ ಸವಾಲು
ಬೆಂಗಳೂರು, ಡಿಸೆಂಬರ್ 10:ಕರ್ನಾಟಕದಲ್ಲಿ ಗೃಹ ಜ್ಯೋತಿ ಯೋಜನೆ ಜಾರಿಯಾದ ಬಳಿಕ ಯಾವುದೇ ಸಮಸ್ಯೆ ಉಂಟಾಗದಂತೆ ಇಂಧನ ಬಿಕ್ಕಟ್ಟನ್ನು ಪರಿಹರಿಸುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದಾಗಿಯೂ ಬೆಂಗಳೂರಿನಂತಹ ನಗರಗಳು ಸೇರಿದಂತೆ ರಾಜ್ಯ ಗ್ರಾಮೀಣ ಪ್ರದೇಶಗಳಲ್ಲಿ ಆಗಾಗ ಅನಿಯಮಿತವಾಗಿ ವಿದ್ಯುತ್ ಕಡಿತಗೊಳ್ಳುತ್ತಲೇ ಇದೆ. ಇದಕ್ಕೆ ನಾಗರಿಕರು ಆಕ್ರೊಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಸರ್ಕಾರದ ವಿದ್ಯುತ್ ಬಿಕ್ಕಟ್ಟು ನಿವಾರಣೆ ಹೇಳಿಕೆ ಹೊರತಾಗಿಯೂ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಗಂಟೆಗಳ ಕಾಲ ನಿರಂತರವಾಗಿ ವಿದ್ಯುತ್ ಕಡಿತಗೊಳ್ಳುತ್ತಲೇ ಇದೆ. ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ.

ಈ ಬೇಡಿಕೆಯಷ್ಟನ್ನು ಪೂರೈಸಲು ಕರ್ನಾಟಕ ಹೆಚ್ಚುವರಿ ಉತ್ಪಾದನೆ ಜೊತೆಗೆ ಇತರ ರಾಜ್ಯಗಳಿಂದಲೂ ವಿದ್ಯುತ್ ಸಂಗ್ರಹಿಸುತ್ತಿದೆ. ಈ ಮದ್ಯೆ ಅನಿಯಂತ್ರಿತ ವಿದ್ಯುತ್ ಕಡಿತದ ಸವಾಲು ಎದುರಿಸುತ್ತಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ದಿನಕ್ಕೆ, ವಾರಕ್ಕೆ ಮತ್ತು ತಿಂಗಳಿಗೆ ಎಷ್ಟು ಬಾರಿ ವಿದ್ಯುತ್ ಕಡಿತಗೊಳ್ಳುತ್ತದೆ ಎಂಬುದನ್ನು ದಾಖಲಿಸಲು ಆರಂಭಿಸಿದ್ದಾರೆ.
ವಿದ್ಯುತ್ ಕಡಿತದ ದಿನಗಳು ಹೆಚ್ಚಳ
ವಿವಿಧ ತುರ್ತು ಕಾರ್ಯಗಳಿಂದಾಗಿ ರಾಜಧಾನಿ ಬೆಂಗಳೂರು ಒಂದರಲ್ಲೇ ಆಗಾಗ ವಿದ್ಯುತ್ ಸ್ಥಗಿತಗೊಳ್ಳುತ್ತಲೇ ಇದೆ. ವಿದ್ಯುತ್ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಆಗಾಗ ಬೆಸ್ಕಾಂ ಪ್ರಕಟಣೆ ಮೂಲಕ ತಿಳಿಸುತ್ತಲೇ ಇದೆ. ಈ ಮೂಲಕ ರಾಜ್ಯ ಮಟ್ಟದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯದ ಸಂಖ್ಯೆಗಳು ಹೆಚ್ಚುತ್ತಲೇ ಇವೆ.
ಅನಿರ್ದಿಷ್ಟವಾಗಿ ಯಾವುದೇ ಸುಳಿವಿಲ್ಲದೇ ವಿದ್ಯುತ್ ಕಡಿತಗೊಳಿಸಲಾಗುತ್ತದೆ. ಇದು ಜನರನ್ನು ಕೆರಳಿಸಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಇಂಜಿನಿಯರ್ಗಳು ಅಸ್ತಿತ್ವದಲ್ಲಿರುವ ಮೂಲ ಇದು ಸೌಕರ್ಯಗಳ ಮೇಲೆ ಹೆಚ್ಚಿನ ಹೊರೆ ಅಂಶವನ್ನು ಸೂಚಿಸುತ್ತಿದೆ.

ಬೆಂಗಳೂರಿನಲ್ಲಿ ವಿದ್ಯುತ್ ಬಳಕೆ ಏರಿಕೆ
ಇನ್ನು ವಿದ್ಯುತ್ ಕಡಿತದ ಜೊತೆಗೆ ಬೆಂಗಳೂರಿನಲ್ಲಿ ಮಾತ್ರ ವಿದ್ಯುತ ಬಳಕೆ ಬಹುತೇಕ ದ್ವಿಗುಣಗೊಂಡಿದೆ. ಹೆಚ್ಚಿದ ಹೊರೆಯಿಂದಾಗಿ, ಪೀಕ್ ಸಮಯದಲ್ಲಿ, ಮೂಲ ಸೌಕರ್ಯವು ಹೆಚ್ಚುವರಿ ಲೋಡ್ ಅನ್ನು ತಡೆದುಕೊಳ್ಳುವಲ್ಲಿ ವಿಫಲವಾಗಿದೆ.
ಟ್ರಿಪ್ಪಿಂಗ್ ಅಥವಾ ಸಾಲುಗಳ ಸ್ಥಗಿತ ಅಥವಾ ಕಳಪೆ ವೋಲ್ಟೇಜ್ ಉಂಟಾಗುತ್ತದೆ. ಆದರೆ ಎಲ್ಲಾ ಎಂಜಿನಿಯರ್ಗಳು ಮತ್ತು ತಾಂತ್ರಿಕ ಸಿಬ್ಬಂದಿಗಳು ಪರಿಸ್ಥಿತಿಗೆ ಸ್ಪಂದಿಸಲು ಮತ್ತು ಕೆಲವೇ ನಿಮಿಷಗಳಲ್ಲಿ ವಿದ್ಯುತ್ ಪೂರೈಕೆಯನ್ನು ನಿರ್ವಹಿಸಲು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೆಸ್ಕಾಂನ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications